AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ ಮೇಲೆ ಕಣ್ಣಿಟ್ಟ ‘ಪುಷ್ಪ’ ನಿರ್ದೇಶಕ ಸುಕುಮಾರ್​; ಅಭಿಮಾನಿಗಳಲ್ಲಿ ಹೆಚ್ಚಿತು ನಿರೀಕ್ಷೆ

ಹಿಂದಿ ಚಿತ್ರರಂಗದ ಯಾವ ನಟರ ಜೊತೆ ಕೆಲಸ ಮಾಡಲು ನೀವು ಇಷ್ಟಪಡುತ್ತೀರಿ ಎಂದು ಸುಕುಮಾರ್​ ಅವರಿಗೆ ಕೇಳಲಾಯಿತು. ಆಗ ಅವರು ಅಕ್ಷಯ್​ ಕುಮಾರ್​ ಹೆಸರನ್ನು ಹೇಳಿದರು.

ಅಕ್ಷಯ್​ ಕುಮಾರ್​ ಮೇಲೆ ಕಣ್ಣಿಟ್ಟ ‘ಪುಷ್ಪ’ ನಿರ್ದೇಶಕ ಸುಕುಮಾರ್​; ಅಭಿಮಾನಿಗಳಲ್ಲಿ ಹೆಚ್ಚಿತು ನಿರೀಕ್ಷೆ
ಅಕ್ಷಯ್​ ಕುಮಾರ್, ಸುಕುಮಾರ್​
TV9 Web
| Edited By: |

Updated on: Jan 15, 2022 | 9:38 AM

Share

ಸುಕುಮಾರ್ (Sukumar)​ ಓರ್ವ ಯಶಸ್ವಿ ನಿರ್ದೇಶಕ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಅವರ ನಿರ್ದೇಶನದಲ್ಲಿ ಮೂಡಿಬಂದ ‘ಪುಷ್ಪ’ (Pushpa Movie) ಸಿನಿಮಾ ಸೂಪರ್​ ಹಿಟ್​ ಆಗಿದೆ. ವಿಶ್ವಾದ್ಯಂತ 300 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಮಾಡಿ ಈ ಚಿತ್ರ ಮುನ್ನುಗ್ಗುತ್ತಿದೆ. ಈ ಸಿನಿಮಾದ ಗೆಲುವಿನಿಂದಾಗಿ ಅಲ್ಲು ಅರ್ಜುನ್​ ಅವರ ವೃತ್ತಿಜೀವನಕ್ಕೆ ದೊಡ್ಡ ಬೂಸ್ಟ್​ ಸಿಕ್ಕಂತೆ ಆಗಿದೆ. ಹಾಗಾಗಿ ಸುಕುಮಾರ್​ ಜೊತೆ ಕೆಲಸ ಮಾಡಲು ಬೇರೆಲ್ಲ ಹೀರೋಗಳು ಕೂಡ ಕಾಯುತ್ತಿದ್ದಾರೆ. ಆದರೆ ಸುಕುಮಾರ್​ ಅವರ ಆಯ್ಕೆ ಪಟ್ಟಿಯಲ್ಲಿ ಯಾವೆಲ್ಲ ಹೀರೋಗಳು ಇದ್ದಾರೆ ಎಂಬುದು ಕುತೂಹಲದ ಪ್ರಶ್ನೆ. ಸದ್ಯದಲ್ಲೇ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ನಡುವೆ ಅಕ್ಷಯ್​ ಕುಮಾರ್​ (Akshay Kumar) ಜೊತೆ ಕೆಲಸ ಮಾಡಬೇಕು ಎಂಬ ಆಸೆಯನ್ನು ಸುಕುಮಾರ್​ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಕೇಳಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ‘ಪುಷ್ಪ 2’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ನಟಿಸಬಹುದೇ ಎಂಬ ಕೌತುಕ ನಿರ್ಮಾಣ ಆಗಿದೆ.

‘ಕೆಜಿಎಫ್​’ ಚಿತ್ರತಂಡದ ಕೆಲವು ಫಾರ್ಮುಲಾಗಳನ್ನು ‘ಪುಷ್ಪ’ ಟೀಮ್​ ಫಾಲೋ ಮಾಡಿದೆ ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಲೇ ಇದೆ. ‘ಕೆಜಿಎಫ್​: ಚಾಪ್ಟರ್​ 1’ ಸೂಪರ್​ ಹಿಟ್​ ಆದ ಬಳಿಕ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕೆ ಬಾಲಿವುಡ್​ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಹಾಗೆಯೇ, ‘ಪುಷ್ಪ 1’ ಗೆಲುವಿನ ಬಳಿಕ ‘ಪುಷ್ಪ 2’ ಸಿನಿಮಾದಲ್ಲಿ ಹಿಂದಿ ನಟ-ನಟಿಯರು ಅಭಿನಯಿಸುವ ಸಾಧ್ಯತೆಯ ಬಗ್ಗೆ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಸುಕುಮಾರ್​ ಅವರು ಅಕ್ಷಯ್​ ಕುಮಾರ್​ ಹೆಸರನ್ನು ಪ್ರಸ್ತಾಪಿಸುವ ಮೂಲಕ ನಿರೀಕ್ಷೆ ಮೂಡಿಸಿದ್ದಾರೆ.

ಪಿಂಕ್​ವಿಲ್ಲಾ ನಡೆಸಿದ ಸಂದರ್ಶನದಲ್ಲಿ ಸುಕುಮಾರ್​ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ಹಿಂದಿ ಚಿತ್ರರಂಗದ ಯಾವ ನಟರ ಜೊತೆ ಕೆಲಸ ಮಾಡಲು ನೀವು ಇಷ್ಟಪಡುತ್ತೀರಿ ಎಂದು ಕೇಳಲಾಯಿತು. ಆಗ ಅವರು ಅಕ್ಷಯ್​ ಕುಮಾರ್​ ಹೆಸರನ್ನು ಹೇಳಿದರು. ‘ಯಾವ ನಟ ಬೇಕು ಎಂಬುದನ್ನು ಸ್ಕ್ರಿಪ್ಟ್​ ನಿರ್ಧಾರ ಮಾಡುತ್ತದೆ. ಹಾಗಾಗಿ ನಾನು ಬಾಲಿವುಡ್​ನ ಯಾವ ನಟನ ಜೊತೆ ಕೆಲಸ ಮಾಡಬೇಕು ಅಂತ ಹೇಳಲು ಆಗುವುದಿಲ್ಲ. ಆದರೆ ಅಕ್ಷಯ್​ ಕುಮಾರ್​ ಅವರ ಜೊತೆ ನಾನು ಒಮ್ಮೆ ಕೆಲಸ ಮಾಡಬೇಕು’ ಎಂದು ಸುಕುಮಾರ್​ ಹೇಳಿದ್ದಾರೆ. ಇದಕ್ಕೆ ಅಕ್ಷಯ್​ ಕುಮಾರ್​ ಕಡೆಯಿಂದ ಯಾವ ರೀತಿ ಪ್ರತಿಕ್ರಿಯೆ ಬರಬಹುದು ಎಂದು ಅಭಿಮಾನಿಗಳು ಕಾದಿದ್ದಾರೆ.

ಕಳೆದ ವರ್ಷ ಅಕ್ಷಯ್​ ಕುಮಾರ್​ ನಟಿಸಿದ್ದ ‘ಸೂಯರ್ವಂಶಿ’ ಚಿತ್ರ ಸೂಪರ್​ ಹಿಟ್​ ಆಯಿತು. ದಿನದಿಂದ ದಿನಕ್ಕೆ​ ಅವರ ಸಂಭಾವನೆ ಹೆಚ್ಚುತ್ತಿದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಅವರು ಬರೋಬ್ಬರಿ 170 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ ಎಂಬ ಸುದ್ದಿ ಹರಡಿದೆ. ಅಕ್ಕಿ ಕೈಯಲ್ಲಿ ಈಗ ಅನೇಕ ಸಿನಿಮಾಗಳಿವೆ.

ಇದನ್ನೂ ಓದಿ:

ದೇವಸ್ಥಾನದ ಪೂಜೆಯಲ್ಲೂ ‘ಪುಷ್ಪ’ ಚಿತ್ರದ ‘ಸಾಮಿ ಸಾಮಿ’ ಹಾಡು! ಇಲ್ಲಿದೆ ವೈರಲ್​ ವಿಡಿಯೋ

‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​