AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​​ನಲ್ಲಿ ‘ಗಟ್ಟಿಮೇಳ-ಸೀತಾರಾಮ’ ಮಧ್ಯೆ ಭರ್ಜರಿ ಪೈಪೋಟಿ; ಇಲ್ಲಿದೆ ವಿವರ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಹಲವು ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾವಣೆ ಆಗಿದೆ. ಹಾಗಾದರೆ ಯಾವ ಧಾರಾವಾಹಿಯ ಟಿಆರ್​ಪಿ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ಟಿಆರ್​ಪಿ ರೇಸ್​​ನಲ್ಲಿ ‘ಗಟ್ಟಿಮೇಳ-ಸೀತಾರಾಮ’ ಮಧ್ಯೆ ಭರ್ಜರಿ ಪೈಪೋಟಿ; ಇಲ್ಲಿದೆ ವಿವರ
ಟಿಆರ್​ಪಿ ರೇಸ್​​ನಲ್ಲಿ ‘ಗಟ್ಟಿಮೇಳ-ಸೀತಾರಾಮ’ ಮಧ್ಯೆ ಭರ್ಜರಿ ಪೈಪೋಟಿ
ರಾಜೇಶ್ ದುಗ್ಗುಮನೆ
|

Updated on: Sep 23, 2023 | 9:54 AM

Share

ಸೀರಿಯಲ್ ಟಿಆರ್​ಪಿ ಲಿಸ್ಟ್ ಹೊರಬಿದ್ದಿದೆ. ಎಲ್ಲಾ ಧಾರಾವಾಹಿಗಳ ಮಧ್ಯೆ ಭರ್ಜರಿ ಸ್ಪರ್ಧೆ ಏರ್ಪಡುತ್ತಿದೆ. ಉಮಾಶ್ರೀ ಮೊದಲಾದವರು ಮುಖ್ಯಭೂಮಿಕೆಯಲ್ಲಿರುವ ‘ಪುಟ್ಟಕ್ಕನ ಮಕ್ಕಳು’ (Puttakkana Makkalu Serial) ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಹಲವು ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾವಣೆ ಆಗಿದೆ. ಹಾಗಾದರೆ ಯಾವ ಧಾರಾವಾಹಿಯ ಟಿಆರ್​ಪಿ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

‘ಪುಟ್ಟಕ್ಕನ ಮಕ್ಕಳು’

‘ಪುಟ್ಟಕ್ಕನ ಮಕ್ಕಳು’ ಕಳೆದ ಕೆಲವು ತಿಂಗಳಿಂದ ಮೊದಲ ಸ್ಥಾನದಲ್ಲಿದೆ. ಕನ್ನಡದ ಎಲ್ಲಾ ಧಾರಾವಾಹಿಗಳಲ್ಲಿ ಪುಟ್ಟಕ್ಕನ ಮಕ್ಕಳದ್ದೇ ಮೇಲುಗೈ. ಈ ಧಾರಾವಾಹಿ ನಗರ ಭಾಗದಲ್ಲೂ ಮೊದಲ ಸ್ಥಾನದಲ್ಲಿದೆ ಅನ್ನೋದು ವಿಶೇಷ. ಹಳ್ಳಿ ಕಥೆಯನ್ನು ಜನರು ಇಷ್ಟಪಡುತ್ತಿದ್ದಾರೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಭರ್ಜರಿ ಬೇಡಿಕೆ ಸೃಷ್ಟಿ ಆಗುತ್ತಿದೆ. ಈ ಧಾರಾವಾಹಿ 50 ಎಪಿಸೋಡ್​ಗಳನ್ನು ಪೂರೈಸಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ನಗರ ವಿಭಾಗದಲ್ಲಿ ಈ ಧಾರಾವಾಹಿ ಎರಡನೇ ಸ್ಥಾನ ಕಾಪಾಡಿಕೊಂಡಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಮೊದಲಾದವರು ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದ ಟಿಆರ್​ಪಿ ಪರಿಗಣಿಸಿದರೆ ‘ಗಟ್ಟಿಮೇಳ’ ಹಾಗೂ ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿ ಸಮನಾಗಿದೆ. ಆದರೆ, ನಗರ ವಿಭಾಗದಲ್ಲಿ ಸೀತಾ ರಾಮ ಧಾರಾವಾಹಿ ಮೇಲುಗೈ ಸಾಧಿಸಿದೆ.

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಹಾಗೂ ಭೂಮಿಕಾ ಮದುವೆ ಎಪಿಸೋಡ್ ಹೈಲೈಟ್ ಆಗಿದೆ. ಈ ಕಾರಣದಿಂದ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

ಸತ್ಯ-ಶ್ರೀರಸ್ತು ಶುಭಮಸ್ತು

‘ಸತ್ಯ’ ಹಾಗೂ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಐದು ಹಾಗೂ ಆರನೇ ಸ್ಥಾನದಲ್ಲಿದೆ. ಈ ಧಾರಾವಾಹಿಗಳಿಗೆ ವೀಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ. ಉಳಿದ ಧಾರಾವಾಹಿಗಳೊಂದಿಗೆ ಇವು ಫೈಟ್ ನೀಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ