AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಟಿಪ್ಲೆಕ್ಸ್​ಗಳ ವಿರುದ್ಧ ಸಿಡಿದೆದ್ದ ಹೊಂಬಾಳೆ, ಸರಣಿ ಟ್ವೀಟ್ ಮಾಡಿದ ಪಿವಿಆರ್ ಸಿಇಒ

PVR CEO: ‘ಸಲಾರ್’ ಸಿನಿಮಾವನ್ನು ದಕ್ಷಿಣ ಭಾರತದ ಮಲ್ಟಿಪ್ಲೆಕ್ಸ್​ಗಳಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಹೊಂಬಾಳೆ ಘೋಷಿಸಿದ ಬೆನ್ನಲ್ಲೆ ಪಿವಿಆರ್-ಐನಾಕ್ಸ್ ಸಿಇಒ ಸರಣಿ ಟ್ವೀಟ್ ಮಾಡಿದ್ದಾರೆ.

ಮಲ್ಟಿಪ್ಲೆಕ್ಸ್​ಗಳ ವಿರುದ್ಧ ಸಿಡಿದೆದ್ದ ಹೊಂಬಾಳೆ, ಸರಣಿ ಟ್ವೀಟ್ ಮಾಡಿದ ಪಿವಿಆರ್ ಸಿಇಒ
ಮಂಜುನಾಥ ಸಿ.
|

Updated on: Dec 20, 2023 | 9:18 PM

Share

ದಕ್ಷಿಣ ಭಾರತದ ಮಲ್ಟಿಪ್ಲೆಕ್ಸ್​ (ಪಿವಿಆರ್, ಐನಾಕ್ಸ್, ಮಿರಾಜ್‍) ಗಳಲ್ಲಿ ತಮ್ಮ ನಿರ್ಮಾಣದ ‘ಸಲಾರ್’ (Salaar) ಸಿನಿಮಾವನ್ನು ಬಿಡುಗಡೆ ಮಾಡುವುದಿಲ್ಲವೆಂದು ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಸಂಸ್ಥೆ ಘೋಷಿಸಿದೆ. ಪಿವಿಆರ್-ಐನಾಕ್ಸ್ ಮಲ್ಟಿಪ್ಲೆಕ್ಸ್​ ಚೈನ್, ಈ ಹಿಂದೆ ಒಪ್ಪಿಕೊಂಡಂತೆ ‘ಡಂಕಿ’ ಹಾಗೂ ‘ಸಲಾರ್’ ಸಿನಿಮಾಕ್ಕೆ ಸಮಾನವಾದ ಶೋಗಳನ್ನು ನೀಡುತ್ತಿಲ್ಲವಾದ್ದರಿಂದ ತಾವು ಈ ಕಠಿಣ ನಿರ್ಧಾರ ತಳೆಯುತ್ತಿರುವುದಾಗಿ ಹೊಂಬಾಳೆ ಹೇಳಿದೆ. ಇದರ ಬೆನ್ನಲ್ಲೆ ಪಿವಿಆರ್-ಐನಾಕ್ಸ್​​ನ ಸಿಇಒ ಸರಣಿ ಟ್ವೀಟ್ ಮಾಡಿದ್ದಾರೆ.

‘‘ಸಾಮಾನ್ಯವಾಗಿ, ನಾವು ನಿರ್ಮಾಪಕರಿಗೆ ಸಂಬಂಧಿಸಿದ ವಿಷಯಗಳನ್ನು ನಮ್ಮಲ್ಲೇ ಇಟ್ಟುಕೊಳ್ಳಲು ಪ್ರಯತ್ನಿಸುತ್ತೇವೆ. ಆದರೆ ನಮ್ಮ ದೃಷ್ಟಿಕೋನವನ್ನು ಹೇಳಲೇ ಬೇಕಾಗಿ ಬಂದಿರುವ ಸಮಯವಿದು. ಪಿವಿಆರ್-ಐನಾಕ್ಸ್​ನಿಂದ ಅನ್ಯಾಯ ಮಾಡಿದೆ ಎಂಬ ಕೆಲವು ಅಸಂಬಂಧ್ಧ ಪೋಸ್ಟ್​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ’’ ಎಂದಿದ್ದಾರೆ ಪಿವಿಆರ್​-ಐನಾಕ್ಸ್ ಸಿಇಒ ಕಮಲ್ ಜ್ಞಾನ್​ಚಂದಾನಿ.

ಮುಂದುವರೆದು ಟ್ವೀಟ್ ಮಾಡಿರುವ ಜ್ಞಾನ್​ಚಂದಾನಿ, ‘‘ತಮ್ಮ ಸಿನಿಮಾಗಳನ್ನು ಬಿಡುಗಡೆ ಮಾಡುವ ನಿರ್ಮಾಪಕರ ಬಗ್ಗೆ ಪವಿಆರ್-ಐನಾಕ್ಸ್​ಗೆ ಇರುವಷ್ಟು ಗೌರವ ಇನ್ಯಾರಿಗೂ ಇಲ್ಲ. ಎರಡು ದೊಡ್ಡ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುವ ಸಮಯದಲ್ಲಿ ವ್ಯಾಪಾರಿಕ ಭಿನ್ನಾಭಿಪ್ರಾಯಗಳು ಮೂಡುವುದು ಬಹಳ ಸಹಜ. ಇದು ಮೊದಲಲ್ಲ, ಕೊನೆಯೂ ಅಲ್ಲ’’ ಎಂದಿದ್ದಾರೆ.

ಇದನ್ನೂ ಓದಿ:BREAKING: ದಕ್ಷಿಣ ಭಾರತದ ಮಲ್ಟಿಪ್ಲೆಕ್ಸ್​ಗಳಲ್ಲಿ ‘ಸಲಾರ್’ ಬಿಡುಗಡೆ ಇಲ್ಲ

‘‘ಎಲ್ಲವೂ ಆದಷ್ಟು ಬೇಗ ಸರಿಯಾಗಲಿದೆ. ನಿಮ್ಮ ಚಿತ್ರ-ವಿಚಿತ್ರ ವಾದಗಳನ್ನು ತುಸು ಬದಿಗೆ ಇಡಿ’’ ಎಂದು ಕಮಲ್ ಜ್ಞಾನ್​ಚಂದಾನಿ ಮನವಿ ಮಾಡಿದ್ದಾರೆ. ‘ಸಲಾರ್’ ಸಿನಿಮಾವನ್ನು ದಕ್ಷಿಣ ಭಾರತದ ಮಲ್ಟಿಪ್ಲೆಕ್ಸ್​ಗಳಲ್ಲಿ ಬಿಡುಗಡೆ ಮಾಡದಿರುವ ಘೋಷಣೆ ಹೊರಬಿದ್ದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ‘ಬ್ಯಾನ್​ಪಿವಿಆರ್​ಐನಾಕ್ಸ್’ ಹ್ಯಾಷ್​ಟ್ಯಾಗ್ ಟ್ರೆಂಡ್ ಆಗುತ್ತಿದ್ದು, ಜನರು, ಟಿಕೆಟ್​ಗಳನ್ನು ರದ್ದು ಮಾಡಿಕೊಳ್ಳುತ್ತಿದ್ದಾರೆ. ಇತರೆ ಶೋಗಳ ಮೇಲೂ ಇದರ ಪ್ರಭಾವ ಆಗುತ್ತಿದೆ.

‘ಸಲಾರ್’ ಸಿನಿಮಾ ಡಿಸೆಂಬರ್ 22ಕ್ಕೆ ಬಿಡುಗಡೆ ಆಗಲಿದೆ. ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ಡಿಸೆಂಬರ್ 21ಕ್ಕೆ ತೆರೆಗೆ ಬರುತ್ತಿದೆ. ಉತ್ತರ ಭಾರತದಲ್ಲಿ ಬಹುತೇಕ ಶೋಗಳು ‘ಡಂಕಿ’ಗೆ ನೀಡಲಾಗಿದೆ. ಆದರೆ ದಕ್ಷಿಣ ಭಾರತದಲ್ಲಿಯೂ ‘ಸಲಾರ್​’ಗಿಂತಲೂ ‘ಡಂಕಿ’ಗೆ ಹೆಚ್ಚು ಶೋ ನೀಡಿರುವುದು ಹೊಂಬಾಳೆ ಫಿಲ್ಮ್ಸ್​​ನ ಅಸಮಾಧಾನಕ್ಕೆ ಕಾರಣವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು