AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೂಲ್ ಚುಕ್ ಮಾಫ್’ ಸಿನಿಮಾ ವಿರುದ್ಧ ಪಿವಿಆರ್ ದಾವೆ, 60 ಕೋಟಿ ಹಣಕ್ಕೆ ಬೇಡಿಕೆ

Bhool Chuk Maaf: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣ ಆಗಿರುವ ಕಾರಣ ‘ಭೂಲ್ ಚುಕ್ ಮಾಫ್’ ಸಿನಿಮಾವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡದೆ ನೇರವಾಗಿ ಒಟಿಟಿಗೆ ಬಿಡುಗಡೆ ಮಾಡಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಪಿವಿಆರ್-ಐನಾಕ್ಸ್, ಸಿನಿಮಾದ ವಿರುದ್ಧ ದಾವೆ ಹೂಡಿದೆ.

‘ಭೂಲ್ ಚುಕ್ ಮಾಫ್’ ಸಿನಿಮಾ ವಿರುದ್ಧ ಪಿವಿಆರ್ ದಾವೆ, 60 ಕೋಟಿ ಹಣಕ್ಕೆ ಬೇಡಿಕೆ
Bhul Chuk Maaf
ಮಂಜುನಾಥ ಸಿ.
|

Updated on: May 10, 2025 | 2:59 PM

Share

ಭಾರತ-ಪಾಕಿಸ್ತಾನ ಗಡಿಯಲ್ಲಿ ಗಂಭೀರ ಪರಿಸ್ಥಿತಿ ಇದೆ. ಎರಡೂ ದೇಶಗಳ ನಡುವೆ ಯುದ್ಧದ (War) ಪರಿಸ್ಥಿತಿ ಇದೆ. ಭಾರತ ಹಾಗೂ ಪಾಕಿಸ್ತಾನಗಳು ಈಗಾಗಲೇ ವೈಮಾನಿಕ ದಾಳಿಯಲ್ಲಿ ಭಾಗಿಯಾಗಿವೆ. ಭಾರತದಲ್ಲಿ ನಾಗರೀಕರಿಗೆ ಯುದ್ಧದ ಎಚ್ಚರಿಕೆ ನೀಡಲಾಗಿದ್ದು, ಮಾಕ್​ ಡ್ರಿಲ್​ಗಳನ್ನು ಮಾಡಿಸಲಾಗುತ್ತಿದೆ. ಪರಿಸ್ಥತಿ ಗಂಭೀರವಾಗುತ್ತಿರುವ ಕಾರಣ ಕೆಲವು ಸಿನಿಮಾಗಳು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುವ ಬದಲಿಗೆ ನೇರವಾಗಿ ಒಟಿಟಿಗೆ ಬಿಡುಗಡೆ ಮಾಡುತ್ತಿವೆ. ಇತ್ತೀಚೆಗೆ ರಾಜ್​ಕುಮಾರ್ ನಟನೆಯ ‘ಭೂಲ್ ಚುಕ್ ಮಾಫ್’ ಸಿನಿಮಾವನ್ನು ನೇರವಾಗಿ ಒಟಿಟಿಗೆ ಬಿಡುಗಡೆ ಮಾಡಲಿರುವುದಾಗಿ ಘೋಷಿಸಲಾಯ್ತು, ಆದರೆ ಇದೀಗ ಪಿವಿಆರ್ ಸಿನಿಮಾದ ವಿರುದ್ಧ ದಾವೆ ಹೂಡಿಕೆ.

ರಾಜ್​ಕುಮಾರ್ ರಾವ್, ವಮಿಕಾ ಗಬ್ಬಿ ಇನ್ನೂ ಹಲವಾರು ಮಂದಿ ನಟಿಸಿರುವ ‘ಭೂಲ್ ಚುಕ್ ಮಾಫ್’ ಸಿನಿಮಾ ಮೇ 9 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧದ ಪರಿಸ್ಥಿತಿ ಇರುವ ಕಾರಣ ನೇರವಾಗಿ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಮೇ 16ರಂದು ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಲಿದೆ.

ಆದರೆ ‘ಭೂಲ್ ಚುಕ್ ಮಾಫ್’ ಸಿನಿಮಾ ಈ ಮೊದಲೇ ಪಿವಿಆರ್ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು ಎನ್ನಲಾಗಿದ್ದು ಸಿನಿಮಾದ ಅಡ್ವಾನ್ಸ್ ಬುಕಿಂಗ್ ಸಹ ಪಿವಿಆರ್​-ಐನಾಕ್ಸ್​ನಲ್ಲಿ ಓಪನ್ ಆಗಿತ್ತು. ಆದರೆ ಅಡ್ವಾನ್ಸ್ ಬುಕಿಂಗ್​ಗೆ ಸೂಕ್ತ ಪ್ರತಿಕ್ರಿಯೆ ಬರದೇ ಇರುವ ಕಾರಣಕ್ಕೆ ‘ಭೂಲ್ ಚುಕ್ ಮಾಫ್’ ಸಿನಿಮಾವನ್ನು ಚಿತ್ರತಂಡ ಒಟಿಟಿಯಲ್ಲಿ ಬಿಡುಗಡೆ ಮಾಡುತ್ತಿದೆ ಎಂದು ಪಿವಿಆರ್ ಆರೋಪಿಸಿದ್ದು, ಬಾಂಬೆ ಹೈಕೋರ್ಟ್​ನಲ್ಲಿ ಸಿನಿಮಾದ ವಿರುದ್ಧ ದಾವೆ ಹೂಡಿದ್ದು, 60 ಕೋಟಿ ರೂಪಾಯಿ ನಷ್ಟಪರಿಹಾರಕ್ಕೆ ಒತ್ತಾಯಿಸಿದೆ.

ಇದನ್ನೂ ಓದಿ:ದೇಶ ಮೊದಲು, ಸಿನಿಮಾ ಕಾರ್ಯಕ್ರಮ ರದ್ದು ಮಾಡಿದ ಕಮಲ್ ಹಾಸನ್

ಸಿನಿಮಾಗಳು ಮೊದಲೇ ಮಲ್ಟಿಪ್ಲೆಕ್ಸ್​ಗಳ ಜೊತೆಗೆ ಒಪ್ಪಂದ ಮಾಡಿಕೊಂಡಿರುತ್ತವೆ. ಆದರೆ ಆ ಒಪ್ಪಂದದಲ್ಲಿ ಯುದ್ಧ ಮತ್ತು ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಒಪ್ಪಂದ ಮುರಿದು ಬೀಳುತ್ತದೆ ಎಂಬ ಸಾಮಾನ್ಯ ಪಾಯಿಂಟ್ ಅನ್ನು ಸೇರಿಸುವ ಅವಕಾಶ ಇರುತ್ತದೆ. ಆದರೆ ‘ಭೂಲ್ ಚುಕ್ ಮಾಫ್’ ಸಿನಿಮಾದವರು ಮಾಡಿಕೊಂಡ ಒಪ್ಪಂದದಲ್ಲಿ ಈ ಪಾಯಿಂಟ್ ಇಲ್ಲದೇ ಇರುವ ಕಾರಣಕ್ಕೆ ಈಗ ಸಮಸ್ಯೆ ಎದುರಿಸುವಂತಾಗಿದೆ.

ಈಗ ‘ಭೂಲ್ ಚುಕ್ ಮಾಫ್’ ಚಿತ್ರತಂಡ ಒಟಿಟಿಯಲ್ಲಿಯೇ ಬಿಡುಗಡೆ ಮಾಡುತ್ತದೆಯೇ ಅಥವಾ ಪಿವಿಆರ್-ಐನಾಕ್ಸ್​ನಲ್ಲಿ ಬಿಡುಗಡೆ ಮಾಡುತ್ತದೆಯೇ ಕಾದು ನೋಡಬೇಕಿದೆ. ಅಥವಾ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತದೆಯೇ?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ