AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾದ ಕಂಗನಾ ರಣಾವತ್​-ಆರ್​. ಮಾಧವನ್​; ಫೋಟೋ ವೈರಲ್​

ಆರ್​. ಮಾಧವನ್​ ಮತ್ತು ಕಂಗನಾ ರಣಾವತ್​ ನಟನೆಯ ‘ತನು ವೆಡ್ಸ್​ ಮನು’ ಸಿನಿಮಾ 2011ರಲ್ಲಿ ತೆರೆಕಂಡಿತ್ತು. ಅದು ಸೂಪರ್​ ಹಿಟ್​ ಆಗಿದ್ದರಿಂದ ಸೀಕ್ವೆಲ್​ ಕೂಡ ಮೂಡಿಬಂತು. 2015ರಲ್ಲಿ ‘ತನು ವೆಡ್ಸ್​ ಮನು ರಿಟರ್ನ್ಸ್​’ ಸಿನಿಮಾ ರಿಲಿಸ್​ ಆಯಿತು. ಈಗ 9 ವರ್ಷಗಳ ಬಳಿಕ ಹೊಸ ಸಿನಿಮಾಗಾಗಿ ಆರ್​. ಮಾಧವನ್​ ಮತ್ತು ಕಂಗನಾ ರಣಾವತ್​ ಒಂದಾಗುತ್ತಿದ್ದಾರೆ.

ಮತ್ತೆ ಒಂದಾದ ಕಂಗನಾ ರಣಾವತ್​-ಆರ್​. ಮಾಧವನ್​; ಫೋಟೋ ವೈರಲ್​
ಆರ್​. ಮಾಧವನ್​, ಕಂಗನಾ ರಣಾವತ್​
Follow us
ಮದನ್​ ಕುಮಾರ್​
|

Updated on: Feb 13, 2024 | 12:17 PM

ನಟಿ ಕಂಗನಾ ರಣಾವತ್​ ಮತ್ತು ಆರ್​. ಮಾಧವನ್​ (R Madhavan) ಅವರದ್ದು ಬಾಲಿವುಡ್​ನಲ್ಲಿ (Bollywood) ಹಿಟ್​ ಜೋಡಿ. ‘ತನು ವೆಡ್ಸ್​ ಮನು’ ಮತ್ತು ‘ತನು ವೆಡ್ಸ್​ ಮನು ರಿಟರ್ನ್ಸ್​’ ಸಿನಿಮಾಗಳ ಮೂಲಕ ಅವರು ಅಪಾರ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಅವರಿಬ್ಬರು ಮತ್ತೊಮ್ಮೆ ಒಂದಾಗಿ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಅಂದಹಾಗೆ, ಇದು ಗಾಸಿಪ್​ ಅಲ್ಲ, ಸ್ವತಃ ಕಂಗನಾ ರಣಾವತ್ (Kangana Ranaut)​ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾಧವನ್​ ಜೊತೆ ಇರುವ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಆ ಮೂಲಕ ಅಭಿಮಾನಿಗಳಿಗೆ ಖುಷಿಯ ಸುದ್ದಿ ನೀಡಿದ್ದಾರೆ.

‘ಇನ್ನೊಂದು ಅಚ್ಚರಿಯ ಸಿನಿಮಾಗಾಗಿ ನಾನು ನನ್ನ ಫೇವರಿಟ್​ ನಟನ ಜೊತೆ ಒಂದಾಗಿದ್ದೇನೆ’ ಎಂದು ಕಂಗನಾ ರಣಾವತ್​ ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ‘ಕಂಗನಾ ರಣಾವತ್ ಜೊತೆ ಕೆಲಸ ಮಾಡಲು ಕಾತುರ ಶುರುವಾಗಿದೆ’ ಎಂದು ಆರ್​. ಮಾಧವನ್​ ಅವರು ಬರೆದುಕೊಂಡಿದ್ದಾರೆ. ಸದ್ಯಕ್ಕೆ ಅವರಿಬ್ಬರು ಸ್ಕ್ರಿಪ್ಟ್​ ರೀಡಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಆದಷ್ಟು ಬೇಗ ಈ ಸಿನಿಮಾದ ಶೂಟಿಂಗ್​ ಶುರುವಾಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ‘12th ಫೇಲ್​’ ನಿರ್ದೇಶಕನ ಹೆಂಡತಿ ಮೇಲೆ ಸರಣಿ ಆರೋಪ ಮಾಡಿದ ಕಂಗನಾ ರಣಾವತ್​

‘ತನು ವೆಡ್ಸ್​ ಮನು’ ಸಿನಿಮಾ 2011ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿತ್ತು. ಆ ಬಳಿಕ ಅದೇ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಯಿತು. ‘ತನು ವೆಡ್ಸ್​ ಮನು ರಿಟರ್ನ್ಸ್​’ ಸಿನಿಮಾ 2015ರಲ್ಲಿ ಬಿಡುಗಡೆ ಆಯಿತು. ಈಗ 9 ವರ್ಷಗಳ ಬಳಿಕ ಹೊಸ ಸಿನಿಮಾಗಾಗಿ ಆರ್​. ಮಾಧವನ್​ ಮತ್ತು ಕಂಗನಾ ರಣಾವತ್​ ಅವರು ಒಂದಾಗುತ್ತಿದ್ದಾರೆ. ಈ ಬಾರಿ ಅವರು ನಟಿಸುವ ಸಿನಿಮಾ ಯಾವ ರೀತಿ ಇದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​

ನಟಿ ಕಂಗನಾ ರಣಾವತ್​ ಅವರು ನಿರ್ದೇಶನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಎಮರ್ಜೆನ್ಸಿ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಕಾರಣಂತರಗಳಿಂದ ಚಿತ್ರದ ರಿಲೀಸ್​ ಡೇಟ್​ ಮುಂದಕ್ಕೆ ಹೋಯಿತು. ಜೂನ್​ 14ರಂದು ‘ಎಮರ್ಜೆನ್ಸಿ’ ಬಿಡುಗಡೆ ಆಗಲಿದೆ. ಆ ನಡುವೆ ಕಂಗನಾ ರಣಾವತ್​ ಅವರು ಹೊಸ ಹೊಸ ಸಿನಿಮಾಗಳಿಗೆ ಸಹಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು