AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾದ ಕಂಗನಾ ರಣಾವತ್​-ಆರ್​. ಮಾಧವನ್​; ಫೋಟೋ ವೈರಲ್​

ಆರ್​. ಮಾಧವನ್​ ಮತ್ತು ಕಂಗನಾ ರಣಾವತ್​ ನಟನೆಯ ‘ತನು ವೆಡ್ಸ್​ ಮನು’ ಸಿನಿಮಾ 2011ರಲ್ಲಿ ತೆರೆಕಂಡಿತ್ತು. ಅದು ಸೂಪರ್​ ಹಿಟ್​ ಆಗಿದ್ದರಿಂದ ಸೀಕ್ವೆಲ್​ ಕೂಡ ಮೂಡಿಬಂತು. 2015ರಲ್ಲಿ ‘ತನು ವೆಡ್ಸ್​ ಮನು ರಿಟರ್ನ್ಸ್​’ ಸಿನಿಮಾ ರಿಲಿಸ್​ ಆಯಿತು. ಈಗ 9 ವರ್ಷಗಳ ಬಳಿಕ ಹೊಸ ಸಿನಿಮಾಗಾಗಿ ಆರ್​. ಮಾಧವನ್​ ಮತ್ತು ಕಂಗನಾ ರಣಾವತ್​ ಒಂದಾಗುತ್ತಿದ್ದಾರೆ.

ಮತ್ತೆ ಒಂದಾದ ಕಂಗನಾ ರಣಾವತ್​-ಆರ್​. ಮಾಧವನ್​; ಫೋಟೋ ವೈರಲ್​
ಆರ್​. ಮಾಧವನ್​, ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Feb 13, 2024 | 12:17 PM

Share

ನಟಿ ಕಂಗನಾ ರಣಾವತ್​ ಮತ್ತು ಆರ್​. ಮಾಧವನ್​ (R Madhavan) ಅವರದ್ದು ಬಾಲಿವುಡ್​ನಲ್ಲಿ (Bollywood) ಹಿಟ್​ ಜೋಡಿ. ‘ತನು ವೆಡ್ಸ್​ ಮನು’ ಮತ್ತು ‘ತನು ವೆಡ್ಸ್​ ಮನು ರಿಟರ್ನ್ಸ್​’ ಸಿನಿಮಾಗಳ ಮೂಲಕ ಅವರು ಅಪಾರ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಅವರಿಬ್ಬರು ಮತ್ತೊಮ್ಮೆ ಒಂದಾಗಿ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಅಂದಹಾಗೆ, ಇದು ಗಾಸಿಪ್​ ಅಲ್ಲ, ಸ್ವತಃ ಕಂಗನಾ ರಣಾವತ್ (Kangana Ranaut)​ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾಧವನ್​ ಜೊತೆ ಇರುವ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಆ ಮೂಲಕ ಅಭಿಮಾನಿಗಳಿಗೆ ಖುಷಿಯ ಸುದ್ದಿ ನೀಡಿದ್ದಾರೆ.

‘ಇನ್ನೊಂದು ಅಚ್ಚರಿಯ ಸಿನಿಮಾಗಾಗಿ ನಾನು ನನ್ನ ಫೇವರಿಟ್​ ನಟನ ಜೊತೆ ಒಂದಾಗಿದ್ದೇನೆ’ ಎಂದು ಕಂಗನಾ ರಣಾವತ್​ ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ‘ಕಂಗನಾ ರಣಾವತ್ ಜೊತೆ ಕೆಲಸ ಮಾಡಲು ಕಾತುರ ಶುರುವಾಗಿದೆ’ ಎಂದು ಆರ್​. ಮಾಧವನ್​ ಅವರು ಬರೆದುಕೊಂಡಿದ್ದಾರೆ. ಸದ್ಯಕ್ಕೆ ಅವರಿಬ್ಬರು ಸ್ಕ್ರಿಪ್ಟ್​ ರೀಡಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಆದಷ್ಟು ಬೇಗ ಈ ಸಿನಿಮಾದ ಶೂಟಿಂಗ್​ ಶುರುವಾಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ‘12th ಫೇಲ್​’ ನಿರ್ದೇಶಕನ ಹೆಂಡತಿ ಮೇಲೆ ಸರಣಿ ಆರೋಪ ಮಾಡಿದ ಕಂಗನಾ ರಣಾವತ್​

‘ತನು ವೆಡ್ಸ್​ ಮನು’ ಸಿನಿಮಾ 2011ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿತ್ತು. ಆ ಬಳಿಕ ಅದೇ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಯಿತು. ‘ತನು ವೆಡ್ಸ್​ ಮನು ರಿಟರ್ನ್ಸ್​’ ಸಿನಿಮಾ 2015ರಲ್ಲಿ ಬಿಡುಗಡೆ ಆಯಿತು. ಈಗ 9 ವರ್ಷಗಳ ಬಳಿಕ ಹೊಸ ಸಿನಿಮಾಗಾಗಿ ಆರ್​. ಮಾಧವನ್​ ಮತ್ತು ಕಂಗನಾ ರಣಾವತ್​ ಅವರು ಒಂದಾಗುತ್ತಿದ್ದಾರೆ. ಈ ಬಾರಿ ಅವರು ನಟಿಸುವ ಸಿನಿಮಾ ಯಾವ ರೀತಿ ಇದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​

ನಟಿ ಕಂಗನಾ ರಣಾವತ್​ ಅವರು ನಿರ್ದೇಶನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಎಮರ್ಜೆನ್ಸಿ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಕಾರಣಂತರಗಳಿಂದ ಚಿತ್ರದ ರಿಲೀಸ್​ ಡೇಟ್​ ಮುಂದಕ್ಕೆ ಹೋಯಿತು. ಜೂನ್​ 14ರಂದು ‘ಎಮರ್ಜೆನ್ಸಿ’ ಬಿಡುಗಡೆ ಆಗಲಿದೆ. ಆ ನಡುವೆ ಕಂಗನಾ ರಣಾವತ್​ ಅವರು ಹೊಸ ಹೊಸ ಸಿನಿಮಾಗಳಿಗೆ ಸಹಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು