AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಫ್​ಟಿಐಐಗೆ ನಟ, ನಿರ್ದೇಶಕ ಆರ್ ಮಾಧವನ್ ಅಧ್ಯಕ್ಷ

R Madhavan: ಭಾರತದ ಪ್ರಮುಖ ಸಿನಿಮಾ, ಟಿವಿ ಶಿಕ್ಷಣ ಸಂಸ್ಥೆಯಾದ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್​ಟಿಐಐ) ಗೆ ತಮಿಳಿನ ಜನಪ್ರಿಯ ನಟ, ನಿರ್ದೇಶಕ ಆರ್ ಮಾಧವನ್ ಅವರನ್ನು ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಎಫ್​ಟಿಐಐಗೆ ನಟ, ನಿರ್ದೇಶಕ ಆರ್ ಮಾಧವನ್ ಅಧ್ಯಕ್ಷ
ಆರ್ ಮಾಧವನ್
ಮಂಜುನಾಥ ಸಿ.
|

Updated on: Sep 01, 2023 | 9:06 PM

Share

ಭಾರತೀಯ ಚಲನಚಿತ್ರ ಹಾಗೂ ದೂರದರ್ಶನ ಸಂಸ್ಥೆಗೆ (FTII) ಅಧ್ಯಕ್ಷರನ್ನಾಗಿ ತಮಿಳು ನಟ, ನಿರ್ದೇಶಕ ಆರ್ ಮಾಧವನ್ (R Madhavan) ಅವರನ್ನು ನಾಮನಿರ್ದೇಶನಗೊಳಿಸಲಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರು ಎಕ್ಸ್ (ಟ್ವಿಟ್ಟರ್) ಮೂಲಕ ಈ ವಿಷಯವನ್ನು ಘೋಷಿಸಿದ್ದಾರೆ. ಆರ್.ಮಾಧವನ್ ನಟಿಸಿ, ನಿರ್ದೇಶನ ಮಾಡಿರುವ ‘ರಾಕೆಟ್ರಿ; ದಿ ನಂಬಿ ಎಫೆಕ್ಟ್’ ಸಿನಿಮಾಕ್ಕೆ ಕೆಲವು ದಿನಗಳ ಹಿಂದಷ್ಟೆ ರಾಷ್ಟ್ರಪ್ರಶಸ್ತಿ ಘೋಷಣೆ ಆಗಿತ್ತು. ಇದೀಗ ಮತ್ತೊಂದು ಸಿಹಿ ಸುದ್ದಿ ನಟನ ಅರಸಿ ಬಂದಿದೆ.

”ಭಾರತೀಯ ಚಲನಚಿತ್ರ ಹಾಗೂ ದೂರದರ್ಶನ ಸಂಸ್ಥೆಯ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿರುವ ಆರ್ ಮಾಧವನ್​ಗೆ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಹಾಗೂ ಬಲವಾದ ನೈತಿಕತೆಯಿಂದ ಈ ಸಂಸ್ಥೆಯನ್ನು ಎತ್ತರಕ್ಕೆ ಕೊಂಡೊಯ್ಯುತ್ತೀರೆಂಬ ವಿಶ್ವಾಸವಿದೆ. ಧನಾತ್ಮಕ ಬದಲಾವಣೆಗಳನ್ನು ಸಂಸ್ಥೆಯಲ್ಲಿ ತನ್ನಿ ಸಂಸ್ಥೆಯನ್ನು ಪ್ರಗತಿಯತ್ತ ಕೊಂಡೊಯ್ಯಿರಿ. ನಿಮಗೆ ನನ್ನ ಅಭಿನಂದನೆಗಳು” ಎಂದು ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ. ಅನುರಾಗ್ ಠಾಕೂರ್ ಅವರ ಟ್ವಿಟ್​ಗೆ ಪ್ರತಿಕ್ರಿಯೆ ನೀಡಿರುವ ಆರ್ ಮಾಧವನ್, ”ಈ ಗೌರವ ಹಾಗೂ ಶುಭ ಹಾರೈಕೆಗಳಿಗೆ ಧನ್ಯವಾದಗಳು. ಎಲ್ಲರ ನಿರೀಕ್ಷೆಗಳನ್ನು ಸಾಕಾರಗೊಳಿಸಲು ಶಕ್ತಿ ಮೀರಿ ಯತ್ನಿಸುತ್ತೇನೆ” ಎಂದಿದ್ದಾರೆ.

ಆರ್ ಮಾಧವನ್ ಗೂ ಮುನ್ನ, ಶೇಖರ್ ಕಪೂರ್ ಅವರು ಎಫ್​ಟಿಐಐ ಅಧ್ಯಕ್ಷರಾಗಿದ್ದರು. ಇದೀಗ ಮಾಧವನ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಆ ಮೂಲಕ ದಕ್ಷಿಣ ಭಾರತ ಚಿತ್ರರಂಗಕ್ಕೆ ಪ್ರಾತಿನಿಧ್ಯ ನೀಡಿದಂತಾಗಿದೆ. ಪುಣೆಯಲ್ಲಿರುವ ಎಟಿಐಐ ಭಾರತದ ಅಗ್ರಗಣ್ಯ ಸಿನಿಮಾ ಹಾಗೂ ದೂರದರ್ಶನ ಸಂಸ್ಥೆಯಾಗಿದೆ. 1961 ರಲ್ಲಿ ಪ್ರಾರಂಭವಾದ ಈ ಸಂಸ್ಥೆಗೆ 63 ವರ್ಷದ ಇತಿಹಾಸವಿದೆ. ದಕ್ಷಿಣ ಭಾರತ ಚಿತ್ರರಂಗದವರು ಈ ಸಂಸ್ಥೆಯ ಅಧ್ಯಕ್ಷರಾಗಿರುವುದು ಬಹಳ ಕಡಿಮೆ. ಮಲಯಾಳಂ ಸಿನಿಮಾ ನಿರ್ದೇಶಕ ಅಡೂರು ಗೋಪಾಲಕೃಷ್ಣನ್, ಕನ್ನಡದ ಗಿರೀಶ್ ಕಾರ್ನಾಡ್, ಯುಆರ್ ಅನಂತಮೂರ್ತಿ ಅವರುಗಳು ಈ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಆರ್​.ಕೆ.ಲಕ್ಷ್ಮಣ್, ಶ್ಯಾಮ್ ಬೆನಗಲ್, ಮೃಣಾಲ್ ಸೇನ್, ಇತ್ತೀಚೆಗೆ ಅನುಪಮ್ ಖೇರ್, ಶೇಕರ್ ಕಪೂರ್ ಅವರುಗಳು ಸಹ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ನಟ ಆರ್​. ಮಾಧವನ್​ ಇಂಗ್ಲಿಷ್​ ಉಚ್ಚಾರಣೆ ಕೇಳಿದ್ರಾ?; ವೈರಲ್​ ಆಯ್ತು ಹಳೆಯ ವಿಡಿಯೋ

ಅಡೂರು ಗೋಪಾಲಕೃಷ್ಣನ್, ಜಯಾ ಬಚ್ಚನ್, ಓಂ ಪುರಿ, ಸಂಜಯ್ ಲೀಲಾ ಬನ್ಸಾಲಿ, ಸತೀಶ್ ಕೌಶಿಕ್, ನಾಸಿರುದ್ದೀನ್ ಶಾ, ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ಈಗಿನ ಬಾಲಿವುಡ್ ನಟ ರಾಜ್​ಕುಮಾರ್ ರಾವ್ ಇನ್ನೂ ಹಲವರು ಇದೇ ಸಂಸ್ಥೆಯಲ್ಲಿ ಅಭಿನಯ ಸೇರಿದಂತೆ ಸಿನಿಮಾ ಹಾಗೂ ಟೆಲಿವಿಷನ್​ನ ಪಠ್ಯಗಳನ್ನು ಕಲಿತಿದ್ದಾರೆ.

ಭಾರತದ ಪ್ರಮುಖ ಸಿನಿಮಾ ಹಾಗೂ ಟಿವಿ ಸಂಸ್ಥೆಯ ಅಧ್ಯಕ್ಷರಾಗಿರುವ ಆರ್ ಮಾಧವನ್, ತಮಿಳು ಚಿತ್ರರಂಗದ ಜನಪ್ರಿಯ ನಟ. ಜೊತೆಗೆ ಬಾಲಿವುಡ್​ನ ಕೆಲವು ಹಿಟ್ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಆಳ ಪರಿಚಯ ಹಾಗೂ ಜ್ಞಾನ ಮಾಧವನ್​ ಅವರಿಗಿದೆ. ಇತ್ತೀಚೆಗೆ ಅವರೇ ನಿರ್ದೇಶಿಸಿ, ನಟಿಸಿ, ಸಹ ನಿರ್ಮಾಣವನ್ನೂ ಮಾಡಿರುವ ‘ರಾಕೆಟ್ರಿ; ದಿ ನಂಬಿ ಎಫೆಕ್ಟ್’ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಸಹ ಲಭಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು