AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್​ನ ‘ಅಂಕಲ್’ ಎಂದು ಕರೆದ ರಾಧಿಕಾ; ‘ದುಡ್ಡಿನ ಮಹಿಮೆ’ ಎಂದ ನೆಟ್ಟಿಗರು

ಶಾರುಖ್ ಖಾನ್ ಅವರನ್ನು ಎಲ್ಲರೂ ಸರ್ ಎಂದೇ ಕರೆಯುತ್ತಾರೆ. ಅವರದ್ದೇ ವಯಸ್ಸಿನವರಾದರೂ ಶಾರುಖ್ ಅವರೇ ಎನ್ನುತ್ತಾರೆ. ಆದರೆ, ವೇದಿಕೆ ಏರಿದ ಶಾರುಖ್ ಖಾನ್ ಅವರನ್ನು ಅಂಕಲ್ ಎಂದು ಕರೆದಿದ್ದಾರೆ ರಾಧಿಕಾ. ಈ ವಿಚಾರವನ್ನು ಕೆಲವರು ಟೀಕಿಸಿದ್ದಾರೆ. ಆದರೆ, ಈ ಬಗ್ಗೆ ಯಾರೂ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಶಾರುಖ್ ಖಾನ್​ನ ‘ಅಂಕಲ್’ ಎಂದು ಕರೆದ ರಾಧಿಕಾ; ‘ದುಡ್ಡಿನ ಮಹಿಮೆ’ ಎಂದ ನೆಟ್ಟಿಗರು
ಶಾರುಖ್​- ರಾಧಿಕಾ
ರಾಜೇಶ್ ದುಗ್ಗುಮನೆ
|

Updated on: Mar 08, 2024 | 2:31 PM

Share

ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ (Radhika Merchant) ವಿವಾಹ ಪೂರ್ವ ಕಾರ್ಯಕ್ರಮದ ಬಗ್ಗೆ ಇನ್ನೂ ಭರ್ಜರಿ ಚರ್ಚೆಗಳು ನಡೆಯುತ್ತಿವೆ. ಯಾವ ಯಾವ ಸೆಲೆಬ್ರಿಟಿಗಳು ಬಂದಿದ್ದರು, ಆಗ ಅಲ್ಲಿ ಆದ ಘಟನೆಗಳು ಏನು ಎನ್ನುವ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ವಿಡಿಯೋ ಕೂಡ ವೈರಲ್ ಆಗುತ್ತಿದೆ. ಶಾರುಖ್ ಖಾನ್ ಕೂಡ ಮುಖೇಶ್ ಅಂಬಾನಿ ಆಯೋಜಿಸಿದ್ದ ಈ ಅದ್ದೂರಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ರಾಧಿಕಾ ಆಡಿದ ಮಾತು ಸಖತ್ ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಅವರನ್ನು ಎಲ್ಲರೂ ಸರ್ ಎಂದೇ ಕರೆಯುತ್ತಾರೆ. ಅವರದ್ದೇ ವಯಸ್ಸಿನವರಾದರೂ ಶಾರುಖ್ ಅವರೇ ಎನ್ನುತ್ತಾರೆ. ಆದರೆ, ವೇದಿಕೆ ಏರಿದ ಶಾರುಖ್ ಖಾನ್ ಅವರನ್ನು ಅಂಕಲ್ ಎಂದು ಕರೆದಿದ್ದಾರೆ ರಾಧಿಕಾ. ಈ ವಿಚಾರವನ್ನು ಕೆಲವರು ಟೀಕಿಸಿದ್ದಾರೆ. ಆದರೆ, ಈ ಬಗ್ಗೆ ಯಾರೂ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಶಾರುಖ್ ಖಾನ್ ಅವರ ಜೊತೆ ವೇದಿಕೆ ಏರಿದ ರಾಧಿಕಾ ಮರ್ಚಂಟ್, ‘ಶಾರುಖ್ ಅಂಕಲ್ ನಿಮ್ಮ ಸಿನಿಮಾದ ಒಂದು ಡೈಲಾಗ್ ಹೇಳಲೇ’ ಎಂದು ಕೇಳಿದ್ದಾರೆ. ಈ ವೇಳೆ ಶಾರುಖ್ ಜೋಕ್ ಮಾಡಿದ್ದಾರೆ. ‘ಈ ಜಾಗದಲ್ಲಿ ಅಕ್ಷಯ್ ಕುಮಾರ್ ಇದ್ದರೆ ನೀವು ಅವರ ಸಿನಿಮಾ ಡೈಲಾಗ್ ಹೇಳಬೇಕಿತ್ತು. ಅಕ್ಕಿ ಇದನ್ನು ನಾನು ಪ್ರೀತಿಯಿಂದ ಹೇಳುತ್ತಿದ್ದೇನೆ’ ಎಂದಿದ್ದಾರೆ ಅವರು.

ರಾಧಿಕಾ ಮರ್ಚಂಟ್ ಪೋಸ್ಟ್

ರಾಧಿಕಾ ಮರ್ಚಂಟ್ ಅವರು ಶಾರುಖ್ ಖಾನ್ ನಟನೆಯ ‘ಓಂ ಶಾಂತಿ ಓಂ’ ಚಿತ್ರದ ಐಕಾನಿಕ್ ಡೈಲಾಗ್ ಹೇಳಿದ್ದಾರೆ. ‘ನಾನು ನಿನ್ನನ್ನು ಪಡೆಯಲು ಎಷ್ಟು ಪ್ರಯತ್ನಿಸಿದೆನೋ, ನನ್ನ ಪ್ರತಿಯ ಪ್ರತಿ ತುಣುಕೂ ನನ್ನನ್ನು ನಿನ್ನೊಂದಿಗೆ ಒಂದುಗೂಡಿಸಲು ಪ್ರಯತ್ನಿಸಿದೆ’ ಎಂದು ಹೇಳಿದ್ದಾರೆ. ಶಾರುಖ್ ಖಾನ್​ನ ‘ಅಂಕಲ್’ ಎಂದು ಕರೆದಿದ್ದನ್ನು ಕೆಲವರು ಟೀಕಿಸಿದ್ದಾರೆ. ‘ಇದೆಲ್ಲ ಹಣದ ಮಹಿಮೆ’ ಎಂದಿದ್ದಾರೆ. ಇನ್ನೂ ಕೆಲವರು ‘ಅವರೆಲ್ಲ ಒಂದೇ ಕುಟುಂಬಂದಂತೆ. ಹೀಗಾಗಿ, ಈ ರೀತಿ ಕರೆಯೋದರಲ್ಲಿ ಏನೂ ತಪ್ಪಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಅನಂತ್ ಅಂಬಾನಿ ಧರಿಸಿದ್ದ 10 ಕೋಟಿ ರೂಪಾಯಿ ವಾಚ್ ನೋಡಿ ದಿಗ್ಭ್ರಮೆಗೊಂಡ ಜುಕರ್​ಬರ್ಗ್ ಪತ್ನಿ

ಅನಂತ್ ಹಾಗೂ ರಾಧಿಕಾ ಮರ್ಚಂಟ್ ಅವರ ಪ್ರೀ ವೆಡ್ಡಿಂಗ್ ಕಾರ್ಯಕ್ರಮ ಗುಜರಾತ್​ನ ಜಾಮ್​ನಗರದಲ್ಲಿ ನಡಿದಿದೆ. ಈ ವೇಳೆ ಬಾಲಿವುಡ್​ನ ಬಹುತೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಇಂಗ್ಲಿಷ್ ಸಿಂಗರ್​ಗಳು ಕೂಡ ಆಗಮಿಸಿ ಹಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!