AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪ್ಯಾನ್​ ಇಂಡಿಯಾ ಸ್ಟಾರ್​​ಗಳ ಪತ್ನಿಯರ ಶಿಕ್ಷಣದ ಬಗ್ಗೆ ನಿಮಗೆಷ್ಟು ಗೊತ್ತು?

ಕೆಲವು ಹೀರೋಗಳು ಸ್ಟಾರ್ ನಟಿಯರನ್ನೇ ಮದುವೆ ಆಗಿದ್ದಾರೆ. ಮದುವೆ ಬಳಿಕ ಕೆಲವರು ನಟನೆ ತೊರೆದಿದ್ದಾರೆ. ಇನ್ನೂ ಕೆಲವರು ನಟನೆಯಲ್ಲಿ ಮುಂದುವರಿದಿದ್ದಾರೆ. ನಟಿಯರ ಶಿಕ್ಷಣದ ಬಗ್ಗೆ ಇಲ್ಲಿದೆ ಮಾಹಿತಿ.

ಈ ಪ್ಯಾನ್​ ಇಂಡಿಯಾ ಸ್ಟಾರ್​​ಗಳ ಪತ್ನಿಯರ ಶಿಕ್ಷಣದ ಬಗ್ಗೆ ನಿಮಗೆಷ್ಟು ಗೊತ್ತು?
ಈ ಪ್ಯಾನ್​ ಇಂಡಿಯಾ ಸ್ಟಾರ್​​ಗಳ ಪತ್ನಿಯರ ಶಿಕ್ಷಣದ ಬಗ್ಗೆ ನಿಮಗೆಷ್ಟು ಗೊತ್ತು?
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Dec 15, 2023 | 9:43 AM

ದಕ್ಷಿಣದಲ್ಲಿ ಹಲವು ಪ್ಯಾನ್​ ಇಂಡಿಯಾ (Pan India) ಹೀರೋಗಳಿದ್ದಾರೆ. ಬಹುತೇಕ ಹೀರೋಗಳು ಮದುವೆ ಆಗಿದ್ದಾರೆ. ಅವರ ಪತ್ನಿಯ ಬಗ್ಗೆಯೂ ಚರ್ಚೆ ಆಗುತ್ತದೆ. ಕೆಲವು ಹೀರೋಗಳು ಸ್ಟಾರ್ ನಟಿಯರನ್ನೇ ಮದುವೆ ಆಗಿದ್ದಾರೆ. ಮದುವೆ ಬಳಿಕ ಕೆಲವರು ನಟನೆ ತೊರೆದಿದ್ದಾರೆ. ಇನ್ನೂ ಕೆಲವರು ನಟನೆಯಲ್ಲಿ ಮುಂದುವರಿದಿದ್ದಾರೆ. ನಟಿಯರ ಶಿಕ್ಷಣದ ಬಗ್ಗೆ ಇಲ್ಲಿದೆ ಮಾಹಿತಿ.

ಯಶ್ ಪತ್ನಿ ರಾಧಿಕಾ ಪಂಡಿತ್

ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಅವರು ನಟನೆಯಿಂದ ದೂರ ಇದ್ದಾರೆ. ಸದ್ಯ, ಪತಿಯ ವೃತ್ತಿ ಜೀವನಕ್ಕೆ ಬೆಂಬಲವಾಗಿದ್ದಾರೆ. ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್​ನಲ್ಲಿ ಬಿಕಾಮ್ ಪದವಿ ಪಡೆದರು. ನಂತರ ಎಂಬಿಎ ಓದಿದರು. ಅವರಿಗೆ ಟೀಚರ್ ಆಗಬೇಕು ಎನ್ನುವ ಕನಸು ಇತ್ತು. ಆದರೆ, ನಟನೆ ಅವರನ್ನು ಸೆಳೆಯಿತು.

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ

ಅಲ್ಲು ಅರ್ಜುನ್ ಹಾಗೂ ಅಲ್ಲು ಸ್ನೇಹಾ ರೆಡ್ಡಿ ದಂಪತಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರು ಬ್ಯೂಟಿಫುಲ್ ಕಪಲ್ ಎಂಬುದು ಫ್ಯಾನ್ಸ್ ಅಭಿಪ್ರಾಯ. ಸ್ನೇಹಾ ರೆಡ್ಡಿ ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಕುಟುಂಬದ ಆರೈಕೆಯಲ್ಲಿ ಸ್ನೇಹಾ ಬ್ಯುಸಿ ಆಗಿದ್ದಾರೆ.

ದುಲ್ಕರ್ ಸಲ್ಮಾನ್ ಪತ್ನಿ ಅಮಲ್ ಸೂಫಿಯಾ

ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋ ದುಲ್ಕರ್ ಸಲ್ಮಾನ್ ಅವರ ಪತ್ನಿ ಅಮಲ್ ಸೂಫಿಯಾ ಅವರು ವೃತ್ತಿಯಲ್ಲಿ ಆರ್ಕಿಟೆಕ್ಟ್ ಆಗಿದ್ದರು. ಚೆನ್ನೈನಲ್ಲಿ ಅವರು ಶಿಕ್ಷಣ ಪಡೆದಿದ್ದಾರೆ. ಈಗ ಕುಟುಂಬದ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ.

ದಳಪತಿ ವಿಜಯ್ ಪತ್ನಿ ಸಂಗೀತಾ

ದಳಪತಿ ವಿಜಯ್ ಪತ್ನಿ ಸಂಗೀತಾ ಅವರು ಶ್ರೀಲಂಕಾದವರು. ಅವರು ಇಂಗ್ಲೆಂಡ್​ನಲ್ಲಿ ಸೆಟಲ್ ಆಗಿದ್ದಾರೆ ಎನ್ನಲಾಗಿದೆ. ಅವರು ಚೆನ್ನೈನಲ್ಲಿ ಪದವಿ ಪಡೆದಿದ್ದಾರೆ. ಇಬ್ಬರೂ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದು ವದಂತಿ ಅನ್ನೋದು ಬಳಿಕ ಗೊತ್ತಾಯಿತು.

ಸೂರ್ಯ ಪತ್ನಿ ಜ್ಯೋತಿಕಾ

ಸೂರ್ಯ ಹಾಗೂ ಅವರ ಪತ್ನಿ ಜ್ಯೋತಿಕಾ ಇಬ್ಬರೂ ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಜ್ಯೋತಿಕಾ ಅವರು ಮುಂಬೈನಲ್ಲಿ ಶಿಕ್ಷಣ ಪಡೆದಿದ್ದಾರೆ. ಅವರು ಸೈಕಾಲಜಿಯಲ್ಲಿ ಮಾಸ್ಟರ್​ ಡಿಗ್ರೀ ಹೊಂದಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ

ರಾಮ್ ಚರಣ್ ಕುಟುಂಬದ ರೀತಿ ಅವರ ಪತ್ನಿ ಉಪಾಸನಾ ಕೂಡ ಸಾಕಷ್ಟು ದೊಡ್ಡ ಹಿನ್ನೆಲೆ ಹೊಂದಿದ್ದಾರೆ. ಅವರು ಪ್ರಾಥಮಿಕ ಶಿಕ್ಷಣವನ್ನು ಹೈದರಾಬಾದ್​ನಲ್ಲಿ ಪಡೆದರು. ನಂತರ ಲಂಡನ್ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದರು. ಅವರು ಮಾರ್ಕೆಟಿಂಗ್ ಹಾಗೂ ಬಿಸ್ನೆಸ್​​ ಮ್ಯಾನೇಜ್​ಮೆಂಟ್​ನಲ್ಲಿ ಪದವಿ ಪಡೆದಿದ್ದಾರೆ.

ರಾಣಾ ದಗ್ಗುಬಾಟಿ ಪತ್ನಿ ಮಿಹೀಕಾ ಬಜಾಜ್

ರಾಣಾ ದಗ್ಗುಬಾಟಿ ಅವರ ಪತ್ನಿ ಮಿಹೀಕಾ ಬಜಾಜ್ ಅವರು ಲಂಡನ್​ನಲ್ಲಿ ಇಂಟೀರಿಯರ್ ಡಿಸೈನ್​ ಡಿಗ್ರೀ ಪಡೆದಿದ್ದಾರೆ. ಅವರು ತಮ್ಮದೇ ಡೆಕೋರ್ ಬಿಸ್ನೆಸ್ ಹೊಂದಿದ್ದಾರೆ. ಇವೆಂಟ್​ಗಳನ್ನು ಅವರು ಮಾಡುತ್ತಾರೆ.

ಜೂನಿಯರ್ ಎನ್​ಟಿಆರ್ ಪತ್ನು ಲಕ್ಷ್ಮೀ ಪ್ರಣತಿ

ಜೂನಿಯರ್ ಎನ್​ಟಿಆರ್ ಅವರ ಪತ್ನಿ ಲಕ್ಷ್ಮೀ ಪ್ರಣತಿ ಅವರು ಹೈದರಾಬಾದ್​ನಲ್ಲಿ ಶಿಕ್ಷಣ ಪಡೆದರು. ನಂತರ ನಜೆರ್ ಜೂನಿಯರ್ ಕಾಲೇಜ್​ನಲ್ಲಿ ಪದವಿ ಪಡೆದರು.

ಇದನ್ನೂ ಓದಿ: ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದ ನಿರ್ದೇಶಕಿ ಬಗ್ಗೆ ನಿಮಗೆಷ್ಟು ಗೊತ್ತು?

 ಮಹೇಶ್​ ಬಾಬು ಹಾಗೂ ನಮ್ರತಾ ಶಿರೋಡ್ಕರ್

ಮಹೇಶ್ ಬಾಬು ಅವರು ತೆಲುಗುನಲ್ಲಿ ಸೂಪರ್​ಸ್ಟಾರ್. ಅವರು ಪ್ಯಾನ್ ಇಂಡಿಯಾ ಸಿನಿಮಾ ಮಾಡೋಕೆ ರೆಡಿ ಆಗಿದ್ದಾರೆ. ಅವರ ಪತ್ನಿ ನಮ್ರತಾ ಅವರು ನಟಿ ಆಗಿದ್ದರು. ಮದುವೆ ನಂತರ ಚಿತ್ರರಂಗ ತೊರೆದರು. ಅವರು ಮುಂಬೈನಲ್ಲಿ ಪದವಿ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Fri, 15 December 23

ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್