AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Vaidya: ಹಾಡಿನಲ್ಲಿ ದೇವಿಗೆ ಅಪಮಾನದ ಆರೋಪ; ಖ್ಯಾತ ಗಾಯಕನಿಗೆ ಜೀವ ಬೆದರಿಕೆ

Garbe Ki Raat: ಖ್ಯಾತ ಗಾಯಕ ರಾಹುಲ್ ವೈದ್ಯ ತಮ್ಮ ನೂತನ ಹಾಡಿನಲ್ಲಿ ದೇವಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಎಫ್​​ಐಆರ್​ ದಾಖಲಾಗಿದೆ.

Rahul Vaidya: ಹಾಡಿನಲ್ಲಿ ದೇವಿಗೆ ಅಪಮಾನದ ಆರೋಪ; ಖ್ಯಾತ ಗಾಯಕನಿಗೆ ಜೀವ ಬೆದರಿಕೆ
‘ಗಾರ್ಬೆ ಕೀ ರಾತ್’ ಹಾಡಿನ ದೃಶ್ಯ
TV9 Web
| Edited By: |

Updated on: Oct 15, 2021 | 11:52 AM

Share

ಖ್ಯಾತ ಗಾಯಕ ಹಾಗೂ ಮಾಜಿ ಬಿಗ್​ ಬಾಸ್ 14 ಸ್ಪರ್ಧಿ ರಾಹುಲ್ ವೈದ್ಯಗೆ (Rahul Vaidya) ಜೀವ ಬೆದರಿಕೆ ಎದುರಾಗಿದೆ. ಅವರ ಹೊಸ ಹಾಡು ‘ಗಾರ್ಬೆ ಕಿ ರಾತ್’ನಲ್ಲಿ (Gaarbe Ki Raat) ‘ಶ್ರೀ ಮೊಗಲ್ ಮಾ’ ದೇವಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕಾರಣದಿಂದ ದೇವಿಯ ಆರಾಧಕರು ತಿರುಗಿಬಿದ್ದಿದ್ದು, ರಾಹುಲ್​ಗೆ ಜೀವ ಬೆದರಿಕೆ ಎದುರಾಗಿದೆ. ಈ ಹಾಡನ್ನು ನವರಾತ್ರಿಯ ಎರಡನೇ ದಿನದಂದು ಬಿಡುಗಡೆ ಮಾಡಲಾಗಿತ್ತು. ಯೂಟ್ಯೂಬ್​ನಲ್ಲಿ ಸುಮಾರು 5 ಮಿಲಿಯನ್ ವೀಕ್ಷಣೆಯನ್ನು ಈ ಹಾಡು ಕಂಡಿದೆ.

‘ಗಾರ್ಬೆ ಕೀ ರಾತ್’ ಹಾಡಿನಲ್ಲಿ ರಾಹುಲ್ ವೈದ್ಯ ಅವರೊಂದಿಗೆ, ಖ್ಯಾತ ಕಿರುತೆರೆ ನಿರೂಪಕಿ ನಿಯಾ ಶರ್ಮಾ(Nia Sharma) ಕೂಡ ಕಾಣಿಸಿಕೊಂಡಿದ್ದಾರೆ. ಈ ಹಾಡು ಗುಜರಾತಿ ಹಿನ್ನೆಲೆಯನ್ನು ಹೊಂದಿದ್ದು, ಅಲ್ಲಿನ ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ನಂತರ ಇದೇ ವಿಷಯಕ್ಕೆ ಕುರಿತಂತೆ ರಾಹುಲ್ ವೈದ್ಯ ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ.

ಈ ಕುರಿತು ಭಕ್ತರು ರಾಹುಲ್ ವೈದ್ಯರಿಗೆ, ದೇವಿಯ ಹೆಸರನ್ನು ತೆಗೆಯುವಂತೆ ತಿಳಿಸಿದ್ದು, ಒಂದು ವೇಳೆ ತೆಗೆಯದಿದ್ದರೆ ಗಂಭೀರ ಕ್ರಮ ಎದುರಿಸಲು ಸಿದ್ಧರಾಗಿ ಎಂದು ತಿಳಿಸಿದ್ದಾರೆ. ಮತ್ತಷ್ಟು ಜನ ಆ ಹಾಡನ್ನೇ ಎಲ್ಲಾ ಮಾಧ್ಯಮಗಳಿಂದ ತೆಗೆಯಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಹಾಡಿನಲ್ಲಿ ನಿಯಾ ಶರ್ಮಾ ಅವರು ದೇವಿಯ ಕುರಿತು ಅವಹೇಳನಕಾರಿಯಾಗಿ ಪದ ಬಳಸಿದ್ದಾರೆ ಎಂಬುದು ಜನರ ಆರೋಪವಾಗಿದೆ.

ಈ ಕುರಿತು ರಾಹುಲ್ ವೈದ್ಯರ ವಕ್ತಾರ ಮಾಹಿತಿ ನೀಡಿದ್ದು, ಅವರಿಗೆ ಜೀವ ಬೆದರಿಕೆ ಬರುತ್ತಿರುವುದು ನಿಜ ಎಂದು ತಿಳಿಸಿದ್ದಾರೆ. ಸದ್ಯದಲ್ಲಿಯೇ ಹಾಡನ್ನು ಸರಿಪಡಿಸಲಾಗುವುದು ಎಂದೂ ಅವರು ತಿಳಿಸಿದ್ಧಾರೆ. ಹಾಡಿನಲ್ಲಿ ದೇವಿಯನ್ನು ಅಪಮಾನಿಸುವ ಯಾವ ಉದ್ದೇಶಗಳೂ ತಂಡಕ್ಕಿರಲಿಲ್ಲ ಎಂದು ಇದೇ ವೇಳೆ ಸ್ಪಷ್ಟನೆಯನ್ನೂ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಹುಲ್ ವೈದ್ಯ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿದೆ. ಈಗ ಆಗಿರುವ ಸಮಸ್ಯೆಯನ್ನು ಸರಿಪಡಿಸಲು ಕೆಲವು ಸಮಯ ಬೇಕು. ಅದಕ್ಕಾಗಿ ಈಗ ಕೆಲಸವನ್ನು ಆರಂಭಿಸಿದ್ದೇವೆ ಎಂದು ರಾಹುಲ್ ವಕ್ತಾರ ಮಾಹಿತಿ ನೀಡಿದ್ದಾರೆ. ಸದ್ಯ ‘ಗಾರ್ಬೆ ಕೀ ರಾತ್’ ಹಾಡನ್ನು ಯೂಟ್ಯೂಬ್​ನಲ್ಲಿ ಅಧಿಕೃತವಾಗಿ ಲಭ್ಯವಿಲ್ಲ.

ಇದನ್ನೂ ಓದಿ:

G. K. Govind Rao : ‘ಪ್ರೊಫೆಸರ್, ಇನ್ನ್ಯಾರೊಂದಿಗೆ ನಾನು ಜಗಳವಾಡಲಿ’ ನಿರ್ದೇಶಕ ಟಿ.ಎನ್. ಸೀತಾರಾಮ್

ತಾಲಿಬಾನ್ ಬದಲಾದರೂ ಪಾಕಿಸ್ತಾನ ಬದಲಾಗಲ್ಲ; ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ