AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ನನ್ನಿಂದ ಬಲವಂತವಾಗಿ ರಾಜ್​ ಕುಂದ್ರಾ ಹೆಸರು ಹೇಳಿಸಲು ಪ್ರಯತ್ನಿಸಿದ್ರು; ನಟಿ ಗೆಹನಾ ಸ್ಫೋಟಕ ಆರೋಪ

ಪೊಲೀಸರ ವಿರುದ್ಧವೇ ಗೆಹನಾ ವಸಿಷ್ಠ್​ ಇಷ್ಟೆಲ್ಲ ಆರೋಪಗಳನ್ನು ಹೊರಿಸಿದ್ದಾರೆ. ಆದ್ದರಿಂದ ಪೊಲೀಸರು ಅವರನ್ನು ಮತ್ತೆ ಬಂಧಿಸುವ ಸಾಧ್ಯತೆ ಇದೆ.

ಪೊಲೀಸರು ನನ್ನಿಂದ ಬಲವಂತವಾಗಿ ರಾಜ್​ ಕುಂದ್ರಾ ಹೆಸರು ಹೇಳಿಸಲು ಪ್ರಯತ್ನಿಸಿದ್ರು; ನಟಿ ಗೆಹನಾ ಸ್ಫೋಟಕ ಆರೋಪ
ಗೆಹನಾ ವಸಿಷ್ಠ್​, ರಾಜ್​ ಕುಂದ್ರಾ ಶೆಲ್ಪಾ ಶೆಟ್ಟಿ
TV9 Web
| Edited By: |

Updated on: Aug 01, 2021 | 1:31 PM

Share

ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್ ಕುಂದ್ರಾ (Raj Kunda) ಅವರ ನೀಲಿ ಚಿತ್ರ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಕೇಸ್​ಗೆ ಸಂಬಂಧಪಟ್ಟಂತೆ ಅನೇಕರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ತನಿಖೆ ವೇಳೆ ಹೊಸ ಹೊಸ ರಹಸ್ಯಗಳು ಬಯಲಾಗುತ್ತಿವೆ. ಅಶ್ಲೀಲ ಸಿನಿಮಾ ದಂಧೆಗೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ್​ (Gehana Vasisth) ಅವರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ  ಮುಂಬೈ ಪೊಲೀಸರ (Mumbai Police) ವಿರುದ್ಧವೇ ಗೆಹನಾ ಹಲವು ಆರೋಪಗಳನ್ನು ಮಾಡಿದ್ದಾರೆ.

ಈ ವರ್ಷ ಫೆಬ್ರವರಿಯಲ್ಲಿ ಗೆಹನಾ ವಸಿಷ್ಠ್​ ಬಂಧನವಾಗಿತ್ತು. ಅಶ್ಲೀಲ ಸಿನಿಮಾ ದಂಧೆಯಲ್ಲಿ ಅವರು ಭಾಗಿ ಆಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಒಟ್ಟು ಮೂರು ಎಫ್​ಐಆರ್​ಗಳು ದಾಖಲಾಗಿವೆ. ‘ನನ್ನ ಬಳಿ ಪೊಲೀಸರು ಲಂಚ ಕೇಳಿದ್ದರು. 15 ಲಕ್ಷ ರೂ. ನೀಡಿದರೆ ಬಂಧಿಸುವುದಿಲ್ಲ ಎಂದಿದ್ದರು. ನಾನು ಏನೂ ತಪ್ಪು ಮಾಡಿಲ್ಲ ಎಂದಿದ್ದಕ್ಕೆ, ತಾವು ಯಾರ ಮೇಲೆ ಯಾವ ಕೇಸ್​ ಬೇಕಾದರು ಹಾಕಬಹುದು ಅಂತ ಪೊಲೀಸರು ಹೇಳಿದ್ದರು’ ಎಂದು ಗೆಹನಾ ಸ್ಫೋಟಕ ಆರೋಪ ಮಾಡಿದ್ದಾರೆ.

ರಾಜ್​ ಕುಂದ್ರಾ ಅವರ ಹಾಟ್​ಶಾಟ್ಸ್​ ಆ್ಯಪ್​ಗಾಗಿ ತಾವು ಕೆಲವು ಬೋಲ್ಡ್​ ಸಿನಿಮಾಗಳಲ್ಲಿ ನಟಿಸಿದ್ದು ಹೌದು ಎಂದು ಗೆಹನಾ ಒಪ್ಪಿಕೊಂಡಿದ್ದಾರೆ. ಆದರೆ ಅವು ನೀಲಿ ಅಥವಾ ಅಶ್ಲೀಲ ಸಿನಿಮಾ ಅಲ್ಲ ಎಂಬುದು ಗೆಹನಾ ವಾದ. ಈ ಪ್ರಕರಣದಲ್ಲಿ ರಾಜ್​ ಕುಂದ್ರಾ ಹೆಸರನ್ನು ಹೇಳುವಂತೆ ಪೊಲೀಸರು ತಮ್ಮ ಮೇಲೆ ಒತ್ತಡ ಹೇಳಿದ್ದರು ಎಂಬುದಾಗಿಯೂ ಗೆಹನಾ ಹೇಳಿದ್ದಾರೆ. ‘ನನ್ನ ಹೇಳಿಕೆಯಲ್ಲಿ ರಾಜ್​ ಕುಂದ್ರಾ ಮತ್ತು ನಿರ್ಮಾಪಕಿ ಏಕ್ತಾ ಕಪೂರ್​ ಅವರ ಹೆಸರನ್ನು ಉಲ್ಲೇಖಿಸುವಂತೆ ಪೊಲೀಸರು ಒತ್ತಾಯಿಸಿದ್ದರು. ಆದರೆ ನಾನು ಅದನ್ನು ನಿರಾಕರಿಸಿದೆ. ರಾಜ್​ ಕುಂದ್ರಾ ಮತ್ತು ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಗೆಹನಾ ಹೇಳಿದ್ದಾರೆ.

ಪೊಲೀಸರ ವಿರುದ್ಧವೇ ಗೆಹನಾ ಇಷ್ಟೆಲ್ಲ ಆರೋಪಗಳನ್ನು ಹೊರಿಸಿದ್ದಾರೆ. ಪೊಲೀಸರು ಮಾಧ್ಯಮಗಳಿಗೆ ತಮ್ಮ ಬಗ್ಗೆ ತಪ್ಪು ಮಾಹಿತಿಯನ್ನು ನೀಡಿದ್ದಾರೆ ಎಂಬುದಾಗಿಯೂ ಅವರು ಆರೋಪಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಪೊಲೀಸರು ಅವರನ್ನು ಮತ್ತೆ ಬಂಧಿಸುವ ಸಾಧ್ಯತೆ ಇದೆ. ಹಾಗಾಗಿ ನಿರೀಕ್ಷಣಾ ಜಾಮೀನಿಗೆ ಗೆಹನಾ ಪರ ವಕೀಲರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:

ಪತಿ ರಾಜ್​ ಕುಂದ್ರಾ ನೀಲಿ ಚಿತ್ರ ಕರ್ಮಕಾಂಡದಿಂದ ಶಿಲ್ಪಾ ಶೆಟ್ಟಿಗೆ ಆಗುತ್ತಿದೆ ಕೋಟಿ ಕೋಟಿ ನಷ್ಟ

ತಿಳಿದಷ್ಟು ಚಿಕ್ಕದಿಲ್ಲ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆ; ಚಾರ್ಜ್​ಶೀಟ್​ನಿಂದ ಬಯಲಾಯ್ತು ಅಚ್ಚರಿಯ ವಿಚಾರ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ