AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಂಪತಿಗೆ ಶಾಕ್​; ದೊಡ್ಡ ಮೊತ್ತದ ದಂಡ ವಿಧಿಸಿದ ಸೆಬಿ

ವಿಯಾನ್​ ಇಂಡಸ್ಟ್ರೀಸ್​ ಕಂಪೆನಿಯನ್ನು ರಾಜ್​ ಕುಂದ್ರಾ ಹೊಂದಿದ್ದಾರೆ. ಶಿಲ್ಪಾ ಶೆಟ್ಟಿ ಈ ಕಂಪನಿಯ ನಿರ್ದೇಶಕಿಯಾಗಿದ್ದರು. ಕಳೆದ ವರ್ಷ ಈ ಹುದ್ದೆಗೆ ಶಿಲ್ಪಾ ರಾಜೀನಾಮೆ ನೀಡಿದ್ದರು.

ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಂಪತಿಗೆ ಶಾಕ್​; ದೊಡ್ಡ ಮೊತ್ತದ ದಂಡ ವಿಧಿಸಿದ ಸೆಬಿ
ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಂಪತಿಗೆ ಶಾಕ್​; ದೊಡ್ಡ ಮೊತ್ತದ ದಂಡ ವಿಧಿಸಿದ ಸೆಬಿ
TV9 Web
| Edited By: |

Updated on: Jul 29, 2021 | 5:26 PM

Share

ರಾಜ್​ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆ ಪ್ರಕರಣ ಹೊಸಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ನಿತ್ಯ ಹೊಸಹೊಸ ಹೆಸರು ತಳುಕು ಹಾಕಿಕೊಳ್ಳುತ್ತಿದೆ. ಈ ಮಧ್ಯೆ ಭಾರತದ ಭದ್ರತೆ ಮತ್ತು ವಿನಿಮಯ ಮಂಡಳಿ (SEBI) ರಾಜ್​ ಕುಂದ್ರಾ-ಶಿಲ್ಪಾ ದಂಪತಿಗೆ ಸೇರಿದ ಕಂಪೆನಿಯಿಂದ ಆದ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 3 ಲಕ್ಷ ರೂಪಾಯಿ ದಂಡ ವಿಧಿಸಿದೆ.

ವಿಯಾನ್​ ಇಂಡಸ್ಟ್ರೀಸ್​ ಕಂಪೆನಿಯನ್ನು ರಾಜ್​ ಕುಂದ್ರಾ ಹೊಂದಿದ್ದಾರೆ. ಶಿಲ್ಪಾ ಶೆಟ್ಟಿ ಈ ಕಂಪನಿಯ ನಿರ್ದೇಶಕಿಯಾಗಿದ್ದರು. ಕಳೆದ ವರ್ಷ ಈ ಹುದ್ದೆಗೆ ಶಿಲ್ಪಾ ರಾಜೀನಾಮೆ ನೀಡಿದ್ದರು. 2013ರ ಸೆಪ್ಟೆಂಬರ್ 1  ಮತ್ತು ಡಿಸೆಂಬರ್ 2015ರ ಡಿಸೆಂಬರ್ 23ರ ಮಧ್ಯೆ ನಡೆದ ಈ ಕಂಪೆನಿಯ ವ್ಯವಹಾರಗಳ ಬಗ್ಗೆ ಸೆಬಿ ತನಿಖೆ ನಡೆಸಿದೆ. ಈ ಕಂಪೆನಿಯ ಷೇರುಗಳು ಬಾಂಬೆ ಷೇರು ಮಾರುಕಟ್ಟೆಯಲ್ಲಿ (ಬಿಎಸ್​ಇ) ಲಿಸ್ಟ್ ಆಗಿದೆ. ರಿಪು ಸೂದನ್ ಅಲಿಯಾಸ್​ ರಾಜ್​ ಕುಂದ್ರಾ​, ಶಿಲ್ಪಾ ಕುಂದ್ರಾ ಅಲಿಯಾಸ್​ ಶಿಲ್ಪಾ ಶೆಟ್ಟಿ ಈ ಕಂಪೆನಿಯ ಪ್ರಮೋಟರ್​ಗಳಾಗಿದ್ದಾರೆ.

ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ಮಾಡುತ್ತಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಪ್ರತಿದಿನ ಹೊಸಹೊಸ ವಿಚಾರವನ್ನು ಪತ್ತೆ ಮಾಡುತ್ತಿದೆ. ರಾಜ್ ಕುಂದ್ರಾ ಅವರ ಈ ಅಶ್ಲೀಲ ದಂಧೆ ಪ್ರಕರಣಕ್ಕೂ ಉತ್ತರ ಪ್ರದೇಶದ ಕಾನ್ಪುರಕ್ಕೂ ನಂಟು ಸಿಕ್ಕಿದೆ. ಕಾನ್ಪುರ್ ಮಹಿಳೆಯ ಖಾತೆಗೆ ರಾಜ್ ​ಕುಂದ್ರಾ ಹಣ ವರ್ಗಾವಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಹರ್ಷಿತಾ ಶ್ರೀವಾಸ್ತವ ಎಂಬ ಮಹಿಳೆಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಈ ಖಾತೆಯನ್ನು ವಶಕ್ಕೆ ಪಡೆಯಲಾಗಿದ್ದು, ಈ ಖಾತೆಯಲ್ಲಿ ಸುಮಾರು 2,32,45,222 ರೂಪಾಯಿ ಇತ್ತು. ಹಾಟ್ ಶಾಟ್ಸ್​​ ವಾಟ್ಸಾಪ್ ಗ್ರೂಪ್‌ನಲ್ಲಿ ಅರವಿಂದ್ ಕುಮಾರ್ ಶ್ರೀವಾಸ್ತವ ಹೆಸರಿನ ವ್ಯಕ್ತಿ ಇದ್ದಾರೆ. ಈ ಅರವಿಂದ್ ಅವರ ಪತ್ನಿ ಹರ್ಷಿತಾ. ಅರವಿಂದ್ ಕೋಟ್ಯಂತರ ರೂಪಾಯಿಗಳನ್ನು ಹರ್ಷಿತಾಗೆ ಮಾತ್ರವಲ್ಲ, ತಂದೆ ನರ್ವದ ಶ್ರೀವಾಸ್ತವ ಹೆಸರಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದ್ದರು. ಆದರೆ, ಪಾರ್ನ್​ ದಂಧೆಯಿಂದ ಗಳಿಸಿದ ಹಣವನ್ನು ಅರವಿಂದ್ ತನ್ನ ಕುಟುಂಬದ ಖಾತೆಗೆ ಏಕೆ ಕಳುಹಿಸುತ್ತಿದ್ದಾನೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ