AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ಅವರನ್ನು ಕ್ಷಮಿಸಿದ್ರಾ ಶಿಲ್ಪಾ? ವಿಚ್ಛೇದನ ವದಂತಿಗೆ ಕೊನೆಗೂ ಬಿತ್ತು ಬ್ರೇಕ್​

ಶಿಲ್ಪಾ-ರಾಜ್​ ಮಕ್ಕಳು ಈಗಿನ್ನೂ ಸಣ್ಣವರು. ಮುಂದೆ ಅವರ ಭವಿಷ್ಯ ಉತ್ತಮವಾಗಿರಬೇಕು ಎಂದಾದರೆ, ಪತಿಯಿಂದ ದೂರ ಉಳಿಯಲೇಬೇಕಾದ ಅನಿವಾರ್ಯತೆ ಶಿಲ್ಪಾಗೆ ಎದುರಾಗಿದೆ ಎಂದು ವರದಿ ಆಗಿತ್ತು.

ರಾಜ್​ ಕುಂದ್ರಾ ಅವರನ್ನು ಕ್ಷಮಿಸಿದ್ರಾ ಶಿಲ್ಪಾ? ವಿಚ್ಛೇದನ ವದಂತಿಗೆ ಕೊನೆಗೂ ಬಿತ್ತು ಬ್ರೇಕ್​
ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ
TV9 Web
| Edited By: |

Updated on:Nov 09, 2021 | 7:46 PM

Share

ಶಿಲ್ಪಾ ಶೆಟ್ಟಿ (Shilpa Shetty)  ಪತಿ ರಾಜ್​ ಕುಂದ್ರಾ (Raj Kundra) ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಲುಕಿದ್ದರು. ಸದ್ಯ, ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಈ ಪ್ರಕರಣ ಶಿಲ್ಪಾ ಕುಟುಂಬಕ್ಕೆ ಸಾಕಷ್ಟು ಮುಜುಗರ ತಂದಿತ್ತು. ಆರಂಭದಲ್ಲಿ ಶಿಲ್ಪಾ ಸೋಶಿಯಲ್​ ಮೀಡಿಯಾದಿಂದ ಕೆಲ ದಿನ ದೂರ ಉಳಿದಿದ್ದರು. ನಂತರ ಅವರು ಮತ್ತೆ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಆದರೆ, ಪತಿ ಜತೆ ಅವರು ಎಂದಿಗೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ, ವಿಚ್ಛೇದನ (Divorce) ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದನ್ನು ಶಿಲ್ಪಾ ಸುಳ್ಳು ಮಾಡಿದ್ದಾರೆ. ಪತಿ ರಾಜ್​ ಕುಂದ್ರಾ ಜತೆಗೆ ಅವರು ಇದೇ ಮೊದಲ ಬಾರಿಗೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ವದಂತಿಗೆ ಬ್ರೇಕ್​ ಹಾಕಿದ್ದಾರೆ. ರಾಜ್​ ಕುಂದ್ರಾ ಅವರನ್ನು ಶಿಲ್ಪಾ ಕ್ಷಮಿಸಿದರಾ ಎನ್ನುವ ಪ್ರಶ್ನೆ ಮೂಡಿದೆ.

ಶಿಲ್ಪಾ ಶೆಟ್ಟಿ ಹಾಗೂ ರಾಜ್​ ಕುಂದ್ರಾ ಇತ್ತೀಚೆಗೆ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಶಿಲ್ಪಾ-ರಾಜ್​ ಮಕ್ಕಳು ಈಗಿನ್ನೂ ಸಣ್ಣವರು. ಮುಂದೆ ಅವರ ಭವಿಷ್ಯ ಉತ್ತಮವಾಗಿರಬೇಕು ಎಂದಾದರೆ, ಪತಿಯಿಂದ ದೂರ ಉಳಿಯಲೇಬೇಕಾದ ಅನಿವಾರ್ಯತೆ ಶಿಲ್ಪಾಗೆ ಎದುರಾಗಿದೆ ಎಂದು ವರದಿ ಆಗಿತ್ತು. ಆದರೆ, ಈಗ ಅದು ಸುಳ್ಳಾಗಿದೆ. ಶಿಲ್ಪಾ ಅವರು ಪತಿ ರಾಜ್​ ಕುಂದ್ರಾ ಜತೆ ಹಿಮಾಚಲ ಪ್ರದೇಶದ ಧರ್ಮಶಾಲಾದ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ಫೋಟೋ, ಹಾಗೂ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ರಾಜ್​ ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಲಾಗಿತ್ತು. ರಾಜ್​ ಕುಂದ್ರಾ ವಿರುದ್ಧ ಮಾಡೆಲ್​, ನಟಿ ಶೆರ್ಲಿನ್​ ಚೋಪ್ರಾ ಗಂಭೀರ ಆರೋಪ ಮಾಡಿದ್ದರು. ಸಿನಿಮಾ ಆಫರ್​ ಕೊಡುವುದಾಗಿ ನಂಬಿಸಿ ರಾಜ್​ ಕುಂದ್ರಾ ಮೋಸ ಮಾಡಿದ್ದರು. ತಮ್ಮನ್ನು ಬೆತ್ತಲೆಯಾಗಿ ಚಿತ್ರೀಕರಿಸಲಾಗಿತ್ತು ಎಂದು ಅವರು ಆರೋಪಿಸಿದ್ದರು. ಈ ಆರೋಪದಿಂದ ರಾಜ್​ಗೆ ಮತ್ತಷ್ಟು ತೊಂದರೆ ಎದುರಾಗಿತ್ತು. ಸೆಪ್ಟೆಂಬರ್​ನಲ್ಲಿ ಅವರಿಗೆ ಜಾಮೀನು ಸಿಕ್ಕಿತ್ತು. ಇದಾದ ನಂತರ ಅವರು ಮನೆಯಿಂದ ಹೊರಗೆ ಕಾಣಿಸಿಕೊಂಡಿರಲಿಲ್ಲ.

ಇದನ್ನೂ ಓದಿ: ‘ನನಗೆ 75 ಕೋಟಿ ರೂಪಾಯಿ ನೀಡಿ’; ಶಿಲ್ಪಾ ಶೆಟ್ಟಿಗೆ ಶೆರ್ಲಿನ್ ಕಡೆಯಿಂದ ಬಂತು ಹೊಸ ಆಗ್ರಹ

Shilpa Shetty: ಸಾಮಾಜಿಕ ಜಾಲತಾಣಗಳಿಂದ ರಾಜ್ ಕುಂದ್ರಾ ಹೊರ ನಡೆದ ಬೆನ್ನಲ್ಲೇ ಕುತೂಹಲ ಹುಟ್ಟಿಸಿದ ಶಿಲ್ಪಾ ಪೋಸ್ಟ್

Published On - 7:43 pm, Tue, 9 November 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು