AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ಅವರನ್ನು ಕ್ಷಮಿಸಿದ್ರಾ ಶಿಲ್ಪಾ? ವಿಚ್ಛೇದನ ವದಂತಿಗೆ ಕೊನೆಗೂ ಬಿತ್ತು ಬ್ರೇಕ್​

ಶಿಲ್ಪಾ-ರಾಜ್​ ಮಕ್ಕಳು ಈಗಿನ್ನೂ ಸಣ್ಣವರು. ಮುಂದೆ ಅವರ ಭವಿಷ್ಯ ಉತ್ತಮವಾಗಿರಬೇಕು ಎಂದಾದರೆ, ಪತಿಯಿಂದ ದೂರ ಉಳಿಯಲೇಬೇಕಾದ ಅನಿವಾರ್ಯತೆ ಶಿಲ್ಪಾಗೆ ಎದುರಾಗಿದೆ ಎಂದು ವರದಿ ಆಗಿತ್ತು.

ರಾಜ್​ ಕುಂದ್ರಾ ಅವರನ್ನು ಕ್ಷಮಿಸಿದ್ರಾ ಶಿಲ್ಪಾ? ವಿಚ್ಛೇದನ ವದಂತಿಗೆ ಕೊನೆಗೂ ಬಿತ್ತು ಬ್ರೇಕ್​
ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ
TV9 Web
| Edited By: |

Updated on:Nov 09, 2021 | 7:46 PM

Share

ಶಿಲ್ಪಾ ಶೆಟ್ಟಿ (Shilpa Shetty)  ಪತಿ ರಾಜ್​ ಕುಂದ್ರಾ (Raj Kundra) ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಲುಕಿದ್ದರು. ಸದ್ಯ, ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಈ ಪ್ರಕರಣ ಶಿಲ್ಪಾ ಕುಟುಂಬಕ್ಕೆ ಸಾಕಷ್ಟು ಮುಜುಗರ ತಂದಿತ್ತು. ಆರಂಭದಲ್ಲಿ ಶಿಲ್ಪಾ ಸೋಶಿಯಲ್​ ಮೀಡಿಯಾದಿಂದ ಕೆಲ ದಿನ ದೂರ ಉಳಿದಿದ್ದರು. ನಂತರ ಅವರು ಮತ್ತೆ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಆದರೆ, ಪತಿ ಜತೆ ಅವರು ಎಂದಿಗೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ, ವಿಚ್ಛೇದನ (Divorce) ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದನ್ನು ಶಿಲ್ಪಾ ಸುಳ್ಳು ಮಾಡಿದ್ದಾರೆ. ಪತಿ ರಾಜ್​ ಕುಂದ್ರಾ ಜತೆಗೆ ಅವರು ಇದೇ ಮೊದಲ ಬಾರಿಗೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ವದಂತಿಗೆ ಬ್ರೇಕ್​ ಹಾಕಿದ್ದಾರೆ. ರಾಜ್​ ಕುಂದ್ರಾ ಅವರನ್ನು ಶಿಲ್ಪಾ ಕ್ಷಮಿಸಿದರಾ ಎನ್ನುವ ಪ್ರಶ್ನೆ ಮೂಡಿದೆ.

ಶಿಲ್ಪಾ ಶೆಟ್ಟಿ ಹಾಗೂ ರಾಜ್​ ಕುಂದ್ರಾ ಇತ್ತೀಚೆಗೆ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಶಿಲ್ಪಾ-ರಾಜ್​ ಮಕ್ಕಳು ಈಗಿನ್ನೂ ಸಣ್ಣವರು. ಮುಂದೆ ಅವರ ಭವಿಷ್ಯ ಉತ್ತಮವಾಗಿರಬೇಕು ಎಂದಾದರೆ, ಪತಿಯಿಂದ ದೂರ ಉಳಿಯಲೇಬೇಕಾದ ಅನಿವಾರ್ಯತೆ ಶಿಲ್ಪಾಗೆ ಎದುರಾಗಿದೆ ಎಂದು ವರದಿ ಆಗಿತ್ತು. ಆದರೆ, ಈಗ ಅದು ಸುಳ್ಳಾಗಿದೆ. ಶಿಲ್ಪಾ ಅವರು ಪತಿ ರಾಜ್​ ಕುಂದ್ರಾ ಜತೆ ಹಿಮಾಚಲ ಪ್ರದೇಶದ ಧರ್ಮಶಾಲಾದ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ಫೋಟೋ, ಹಾಗೂ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ರಾಜ್​ ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಲಾಗಿತ್ತು. ರಾಜ್​ ಕುಂದ್ರಾ ವಿರುದ್ಧ ಮಾಡೆಲ್​, ನಟಿ ಶೆರ್ಲಿನ್​ ಚೋಪ್ರಾ ಗಂಭೀರ ಆರೋಪ ಮಾಡಿದ್ದರು. ಸಿನಿಮಾ ಆಫರ್​ ಕೊಡುವುದಾಗಿ ನಂಬಿಸಿ ರಾಜ್​ ಕುಂದ್ರಾ ಮೋಸ ಮಾಡಿದ್ದರು. ತಮ್ಮನ್ನು ಬೆತ್ತಲೆಯಾಗಿ ಚಿತ್ರೀಕರಿಸಲಾಗಿತ್ತು ಎಂದು ಅವರು ಆರೋಪಿಸಿದ್ದರು. ಈ ಆರೋಪದಿಂದ ರಾಜ್​ಗೆ ಮತ್ತಷ್ಟು ತೊಂದರೆ ಎದುರಾಗಿತ್ತು. ಸೆಪ್ಟೆಂಬರ್​ನಲ್ಲಿ ಅವರಿಗೆ ಜಾಮೀನು ಸಿಕ್ಕಿತ್ತು. ಇದಾದ ನಂತರ ಅವರು ಮನೆಯಿಂದ ಹೊರಗೆ ಕಾಣಿಸಿಕೊಂಡಿರಲಿಲ್ಲ.

ಇದನ್ನೂ ಓದಿ: ‘ನನಗೆ 75 ಕೋಟಿ ರೂಪಾಯಿ ನೀಡಿ’; ಶಿಲ್ಪಾ ಶೆಟ್ಟಿಗೆ ಶೆರ್ಲಿನ್ ಕಡೆಯಿಂದ ಬಂತು ಹೊಸ ಆಗ್ರಹ

Shilpa Shetty: ಸಾಮಾಜಿಕ ಜಾಲತಾಣಗಳಿಂದ ರಾಜ್ ಕುಂದ್ರಾ ಹೊರ ನಡೆದ ಬೆನ್ನಲ್ಲೇ ಕುತೂಹಲ ಹುಟ್ಟಿಸಿದ ಶಿಲ್ಪಾ ಪೋಸ್ಟ್

Published On - 7:43 pm, Tue, 9 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?