AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶನಿವಾರ ನಡೆಯಲಿದೆ ರಾಜ್​ಕುಂದ್ರಾ ಜಾಮೀನು ಅರ್ಜಿ ವಿಚಾರಣೆ; ಶೆರ್ಲಿನ್​ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ.  ಹೀಗಾಗಿ, ರಾಜ್​ ಕುಂದ್ರಾಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನವಿಧಿಸಿತ್ತು.

ಶನಿವಾರ ನಡೆಯಲಿದೆ ರಾಜ್​ಕುಂದ್ರಾ ಜಾಮೀನು ಅರ್ಜಿ ವಿಚಾರಣೆ; ಶೆರ್ಲಿನ್​ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ರಾಜ್​ ಕುಂದ್ರಾ- ಶೆರ್ಲಿನ್​ ಚೋಪ್ರಾ
TV9 Web
| Edited By: |

Updated on:Jul 29, 2021 | 5:56 PM

Share

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವುದನ್ನು ಪ್ರಶ್ನಿಸಿ ಶಿಲ್ಪಾಶೆಟ್ಟಿ ಪತಿ ರಾಜ್​ಕುಂದ್ರಾ  ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್​ ಶನಿವಾರ ವಿಚಾರಣೆ ಮಾಡಲಿದೆ.  ಈ ಪ್ರಕರಣಕ್ಕೆ ಸಂಬಂಧಿಸಿ ಶೆರ್ಲಿನ್ ಚೋಪ್ರಾ ಸಲ್ಲಿಸಿದ್ದ​ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. 

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಮಾಡುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷಿ ಇವೆ ಎನ್ನಲಾಗಿದೆ. ಆದರೆ ತನಿಖೆಗೆ ರಾಜ್​ ಕುಂದ್ರಾ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ಅವಧಿ ವಿಸ್ತರಣೆ ಅನಿವಾರ್ಯವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ.  ಹೀಗಾಗಿ, ರಾಜ್​ ಕುಂದ್ರಾಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನವಿಧಿಸಿತ್ತು.

ಇದನ್ನು ರಾಜ್​ ಕುಂದ್ರಾ ಪರ ವಕೀಲರು ಎಸ್‍ಪ್ಲನೇಡ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ‘ಈ ಪ್ರಕರಣದಲ್ಲಿ ಸಿಲುಕಿದ ಅನೇಕರಿಗೆ ಜಾಮೀನು ಸಿಕ್ಕಿದೆ. ರಾಜ್​ ಕುಂದ್ರಾ ಅವರು ತನಿಖೆಗೆ ಸಹಕರಿಸುತ್ತಿದ್ದಾರೆ. ಆದಾಗ್ಯೂ, ಅವರಿಗೆ ಜಾಮೀನು ಏಕೆ ನೀಡುತ್ತಿಲ್ಲ’ ಎಂದು ಕುಂದ್ರಾ ವಕೀಲರು ಕೇಳಿದರು. ಆದರೆ, ಇದನ್ನು ನ್ಯಾಯಾಲಯ ತಳ್ಳಿ ಹಾಕಿದೆ. ‘ರಾಜ್​ ಕುಂದ್ರಾ ಪ್ರಭಾವಿ ವ್ಯಕ್ತಿಯಾಗಿದ್ದು ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಈಗ ಮುಂಬೈ ಹೈಕೋರ್ಟ್​ನಲ್ಲಿ ಅವರ ಜಾಮೀನು ಅರ್ಜಿ ಇಂದು ವಿಚಾರಣೆಗೆ ಬರಬೇಕಿತ್ತು. ಆದರೆ, ಇಂದಿನ ಕೋರ್ಟ್​ ಅವಧಿ ಮುಗಿದ ಕಾರಣ, ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಲ್ಪಟ್ಟಿದೆ.

ಶೆರ್ಲಿನ್​ ನಿರೀಕ್ಷಣಾ ಜಾಮೀನು ಅರ್ಜಿ ವಜಾ:

ನಟಿ ಶೆರ್ಲಿನ್​ ಚೋಪ್ರಾ ಅವರು ರಾಜ್​ ಕುಂದ್ರಾ ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಶಿಲ್ಪಾ ಶೆಟ್ಟಿಗೆ ಆಘಾತ ಮೂಡಿಸುವಂತಹ ಕೆಲವು ಮಾಹಿತಿಯನ್ನು ಶೆರ್ಲಿನ್​ ಚೋಪ್ರಾ ಬಹಿರಂಗಪಡಿಸಿದ್ದಾರೆ. ರಾಜ್ ಕುಂದ್ರಾ ಜೊತೆ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ಶರ್ಲಿನ್​ ಚೋಪ್ರಾ ಅವರಿಗೂ ಬಂಧನದ ಭಯ ಕಾಡುತ್ತಿದೆ. ಹಾಗಾಗಿ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಇದನ್ನು ನ್ಯಾಯಾಲಯ ರಿಜೆಕ್ಟ್​ ಮಾಡಿದೆ.

ಇದನ್ನೂ ಓದಿ: ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ

Published On - 5:54 pm, Thu, 29 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್