AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್​ ಮೀಡಿಯಾಗೆ ​ ರಾಜ್​ ಕುಂದ್ರಾ ಕಂಬ್ಯಾಕ್; ಶಿಲ್ಪಾ ಶೆಟ್ಟಿಯನ್ನೇ ಅನ್​ಫಾಲೋ ಮಾಡಿದ ಉದ್ಯಮಿ

ಕಳೆದ ಜುಲೈ ತಿಂಗಳಲ್ಲಿ ರಾಜ್​ಕುಂದ್ರಾ ಬಂಧನಕ್ಕೆ ಒಳಗಾಗಿದ್ದರು. ಒಂದು ತಿಂಗಳ ನಂತರ ಅವರು ಜೈಲಿನಿಂದ ಹೊರ ಬಂದಿದ್ದರು. ಈ ಮಧ್ಯೆ ಅವರು ಸೋಶಿಯಲ್​ ಮೀಡಿಯಾಗೆ ಗುಡ್​ಬೈ ಹೇಳಿದ್ದರು

ಸೋಶಿಯಲ್​ ಮೀಡಿಯಾಗೆ ​ ರಾಜ್​ ಕುಂದ್ರಾ ಕಂಬ್ಯಾಕ್; ಶಿಲ್ಪಾ ಶೆಟ್ಟಿಯನ್ನೇ ಅನ್​ಫಾಲೋ ಮಾಡಿದ ಉದ್ಯಮಿ
ರಾಜ್​ ಕುಂದ್ರಾ-ಶಿಲ್ಪಾ
TV9 Web
| Edited By: |

Updated on: Jan 16, 2022 | 1:49 PM

Share

ರಾಜ್​ ಕುಂದ್ರಾ (Raj Kundra) ಹಾಗೂ ಅವರ ಪತ್ನಿ ಶಿಲ್ಪಾ ಶೆಟ್ಟಿ (Shilpa Shetty) ಪಾಲಿಗೆ 2021 ತುಂಬಾನೇ ಕಹಿಯಾಗಿತ್ತು. ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಜೈಲಿಗೆ ಹೋಗಿ ಬಂದರು. ಪತಿ ಇಂಥ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದು ಶಿಲ್ಪಾ ಶೆಟ್ಟಿಗೆ ತುಂಬಾನೇ ಮುಜುಗರ ತಂದಿತ್ತು. ಸಮಾಜದಲ್ಲಿ ತಲೆಎತ್ತಿಕೊಂಡು ಓಡಾಡೋಕೆ ಅವರಿಗೆ ಆಗುತ್ತಿರಲಿಲ್ಲ. ಜೈಲಿನಿಂದ ಹೊರ ಬಂದ ನಂತರದಲ್ಲಿ ರಾಜ್​ ಕುಂದ್ರಾ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಬದಲಿಗೆ, ಸೈಲೆಂಟ್​ ಆದರು. ಸೋಶಿಯಲ್​ ಮೀಡಿಯಾದಿಂದ ದೂರ ಉಳಿದುಕೊಂಡರು. ಈಗ ಅವರು ಮತ್ತೆ ಇನ್​​ಸ್ಟಾಗ್ರಾಮ್​ಗೆ (Instagram) ಕಂಬ್ಯಾಕ್​ ಮಾಡಿದ್ದಾರೆ. ಅಚ್ಚರಿ ಎಂದರೆ ಅವರು ಪತ್ನಿ ಶಿಲ್ಪಾ ಶೆಟ್ಟಿಯನ್ನು ಹಿಂಬಾಲಿಸುತ್ತಿಲ್ಲ.

ಕಳೆದ ಜುಲೈ ತಿಂಗಳಲ್ಲಿ ರಾಜ್​ಕುಂದ್ರಾ ಬಂಧನಕ್ಕೆ ಒಳಗಾಗಿದ್ದರು. ಒಂದು ತಿಂಗಳ ನಂತರ ಅವರು ಜೈಲಿನಿಂದ ಹೊರ ಬಂದಿದ್ದರು. ಆದರೆ, ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ನವೆಂಬರ್​ನಲ್ಲಿ. ಈ ಮಧ್ಯೆ ಅವರು ಸೋಶಿಯಲ್​ ಮೀಡಿಯಾಗೆ ಗುಡ್​ಬೈ ಹೇಳಿದ್ದರು. ಈಗ ಅವರು ಮತ್ತೆ ಇನ್​ಸ್ಟಾಗ್ರಾಮ್​ಗೆ ಮರಳಿದ್ದಾರೆ. ಅವರು 9.77 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಹಿಂಬಾಲಿಸುತ್ತಿರುವುದು ಒಬ್ಬರನ್ನು ಮಾತ್ರ. ಆದರೆ ಅದು ಶಿಲ್ಪಾ ಶೆಟ್ಟಿ ಅಲ್ಲ.

ರಾಜ್​ ಕುಂದ್ರಾ ಹಿಂಬಾಲಿಸುತ್ತಿರುವ ಒಂದು ಖಾತೆ ಎಂದರೆ ಅದು ಬಾಂದ್ರಾದಲ್ಲಿರುವ ಸೀಫುಡ್​ ರೆಸ್ಟೋರೆಂಟ್​. ಹಾಗಾದರೆ ರಾಜ್​ಕುಂದ್ರಾ ಈ ಖಾತೆಯನ್ನೇಕೆ ಹಿಂಬಾಲಿಸುತ್ತಿದ್ದಾರೆ? ಅದಕ್ಕೂ ಕಾರಣವಿದೆ. ಈ ರೆಸ್ಟೋರೆಂಟ್​ಗೆ ಅವರ ಪತ್ನಿ ಶಿಲ್ಪಾ ಶೆಟ್ಟಿ ಸಹ ಮಾಲಕಿ. ಈ ಕಾರಣಕ್ಕೆ ರಾಜ್​ಕುಂದ್ರಾ ಇದನ್ನು ಹಿಂಬಾಲಿಸುತ್ತಿದ್ದಾರೆ ಎನ್ನಲಾಗಿದೆ. ಶಿಲ್ಪಾ ಅವರನ್ನು ರಾಜ್​ ಕುಂದ್ರಾ ಅನ್​​ಫಾಲೋ ಮಾಡಿದ್ದಾರೋ ಅಥವಾ ಅವರನ್ನು ಹಿಂಬಾಲಿಸುತ್ತಲೇ ಇರಲಿಲ್ಲವೋ ಎನ್ನುವ ವಿಚಾರ ತಿಳಿದಿಲ್ಲ. ಇನ್ನು, ಎಲ್ಲಾ ಪೋಸ್ಟ್​ಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಿಂದ ರಾಜ್​ ಕುಂದ್ರಾ ಡಿಲೀಟ್​ ಮಾಡಿದ್ದಾರೆ.

ಡಿಸೆಂಬರ್​ ತಿಂಗಳಲ್ಲಿ ರಾಜ್​ ಕುಂದ್ರಾ ಈ ಬಗ್ಗೆ ಮೌನ ಮುರಿದಿದ್ದರು. ‘ನನ್ನ ಕುರಿತು ಆಧಾರವಿಲ್ಲದ ಅನೇಕ ಮಾಹಿತಿ, ಲೇಖನಗಳು ಹರಿದಾಡುತ್ತಿವೆ. ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಲಾಗಿದೆ. ನನ್ನ ಜೀವನದಲ್ಲಿ ನಾನು ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ವಿತರಣೆಯನ್ನು ಮಾಡಿಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈ ಪ್ರಕರಣ ಈಗ ವಿಚಾರಣೆಯ ಹಂತದಲ್ಲಿದೆ. ಹಾಗಾಗಿ ನಾನು ಸ್ಪಷ್ಟನೆಗಳನ್ನು ನೀಡಲಾಗುವುದಿಲ್ಲ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅದರಲ್ಲಿ ಸತ್ಯ ಗೆಲ್ಲುತ್ತದೆ. ನಾನು ವಿಚಾರಣೆ ಎದುರಿಸಲು ಸಿದ್ಧನಿದ್ದೇನೆ’ ಎಂದು ಹೇಳಿದ್ದರು ಅವರು.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಾಂಪತ್ಯಕ್ಕೆ 12 ವರ್ಷದ ಸಂಭ್ರಮ; ಸುಖ ಸಂಸಾರದ ಗುಟ್ಟು ಬಿಚ್ಚಿಟ್ಟ ನಟಿ

‘ನಾನು ಅಶ್ಲೀಲ ಸಿನಿಮಾ ಮಾಡಿಲ್ಲ, ಮುಖ ಮುಚ್ಕೊಂಡು ಓಡಾಡಲ್ಲ’; ಮೌನ ಮುರಿದ ರಾಜ್​ ಕುಂದ್ರಾ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!