ಸೋಶಿಯಲ್​ ಮೀಡಿಯಾಗೆ ​ ರಾಜ್​ ಕುಂದ್ರಾ ಕಂಬ್ಯಾಕ್; ಶಿಲ್ಪಾ ಶೆಟ್ಟಿಯನ್ನೇ ಅನ್​ಫಾಲೋ ಮಾಡಿದ ಉದ್ಯಮಿ

ಕಳೆದ ಜುಲೈ ತಿಂಗಳಲ್ಲಿ ರಾಜ್​ಕುಂದ್ರಾ ಬಂಧನಕ್ಕೆ ಒಳಗಾಗಿದ್ದರು. ಒಂದು ತಿಂಗಳ ನಂತರ ಅವರು ಜೈಲಿನಿಂದ ಹೊರ ಬಂದಿದ್ದರು. ಈ ಮಧ್ಯೆ ಅವರು ಸೋಶಿಯಲ್​ ಮೀಡಿಯಾಗೆ ಗುಡ್​ಬೈ ಹೇಳಿದ್ದರು

ಸೋಶಿಯಲ್​ ಮೀಡಿಯಾಗೆ ​ ರಾಜ್​ ಕುಂದ್ರಾ ಕಂಬ್ಯಾಕ್; ಶಿಲ್ಪಾ ಶೆಟ್ಟಿಯನ್ನೇ ಅನ್​ಫಾಲೋ ಮಾಡಿದ ಉದ್ಯಮಿ
ರಾಜ್​ ಕುಂದ್ರಾ-ಶಿಲ್ಪಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 16, 2022 | 1:49 PM

ರಾಜ್​ ಕುಂದ್ರಾ (Raj Kundra) ಹಾಗೂ ಅವರ ಪತ್ನಿ ಶಿಲ್ಪಾ ಶೆಟ್ಟಿ (Shilpa Shetty) ಪಾಲಿಗೆ 2021 ತುಂಬಾನೇ ಕಹಿಯಾಗಿತ್ತು. ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಜೈಲಿಗೆ ಹೋಗಿ ಬಂದರು. ಪತಿ ಇಂಥ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದು ಶಿಲ್ಪಾ ಶೆಟ್ಟಿಗೆ ತುಂಬಾನೇ ಮುಜುಗರ ತಂದಿತ್ತು. ಸಮಾಜದಲ್ಲಿ ತಲೆಎತ್ತಿಕೊಂಡು ಓಡಾಡೋಕೆ ಅವರಿಗೆ ಆಗುತ್ತಿರಲಿಲ್ಲ. ಜೈಲಿನಿಂದ ಹೊರ ಬಂದ ನಂತರದಲ್ಲಿ ರಾಜ್​ ಕುಂದ್ರಾ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಬದಲಿಗೆ, ಸೈಲೆಂಟ್​ ಆದರು. ಸೋಶಿಯಲ್​ ಮೀಡಿಯಾದಿಂದ ದೂರ ಉಳಿದುಕೊಂಡರು. ಈಗ ಅವರು ಮತ್ತೆ ಇನ್​​ಸ್ಟಾಗ್ರಾಮ್​ಗೆ (Instagram) ಕಂಬ್ಯಾಕ್​ ಮಾಡಿದ್ದಾರೆ. ಅಚ್ಚರಿ ಎಂದರೆ ಅವರು ಪತ್ನಿ ಶಿಲ್ಪಾ ಶೆಟ್ಟಿಯನ್ನು ಹಿಂಬಾಲಿಸುತ್ತಿಲ್ಲ.

ಕಳೆದ ಜುಲೈ ತಿಂಗಳಲ್ಲಿ ರಾಜ್​ಕುಂದ್ರಾ ಬಂಧನಕ್ಕೆ ಒಳಗಾಗಿದ್ದರು. ಒಂದು ತಿಂಗಳ ನಂತರ ಅವರು ಜೈಲಿನಿಂದ ಹೊರ ಬಂದಿದ್ದರು. ಆದರೆ, ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ನವೆಂಬರ್​ನಲ್ಲಿ. ಈ ಮಧ್ಯೆ ಅವರು ಸೋಶಿಯಲ್​ ಮೀಡಿಯಾಗೆ ಗುಡ್​ಬೈ ಹೇಳಿದ್ದರು. ಈಗ ಅವರು ಮತ್ತೆ ಇನ್​ಸ್ಟಾಗ್ರಾಮ್​ಗೆ ಮರಳಿದ್ದಾರೆ. ಅವರು 9.77 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಹಿಂಬಾಲಿಸುತ್ತಿರುವುದು ಒಬ್ಬರನ್ನು ಮಾತ್ರ. ಆದರೆ ಅದು ಶಿಲ್ಪಾ ಶೆಟ್ಟಿ ಅಲ್ಲ.

ರಾಜ್​ ಕುಂದ್ರಾ ಹಿಂಬಾಲಿಸುತ್ತಿರುವ ಒಂದು ಖಾತೆ ಎಂದರೆ ಅದು ಬಾಂದ್ರಾದಲ್ಲಿರುವ ಸೀಫುಡ್​ ರೆಸ್ಟೋರೆಂಟ್​. ಹಾಗಾದರೆ ರಾಜ್​ಕುಂದ್ರಾ ಈ ಖಾತೆಯನ್ನೇಕೆ ಹಿಂಬಾಲಿಸುತ್ತಿದ್ದಾರೆ? ಅದಕ್ಕೂ ಕಾರಣವಿದೆ. ಈ ರೆಸ್ಟೋರೆಂಟ್​ಗೆ ಅವರ ಪತ್ನಿ ಶಿಲ್ಪಾ ಶೆಟ್ಟಿ ಸಹ ಮಾಲಕಿ. ಈ ಕಾರಣಕ್ಕೆ ರಾಜ್​ಕುಂದ್ರಾ ಇದನ್ನು ಹಿಂಬಾಲಿಸುತ್ತಿದ್ದಾರೆ ಎನ್ನಲಾಗಿದೆ. ಶಿಲ್ಪಾ ಅವರನ್ನು ರಾಜ್​ ಕುಂದ್ರಾ ಅನ್​​ಫಾಲೋ ಮಾಡಿದ್ದಾರೋ ಅಥವಾ ಅವರನ್ನು ಹಿಂಬಾಲಿಸುತ್ತಲೇ ಇರಲಿಲ್ಲವೋ ಎನ್ನುವ ವಿಚಾರ ತಿಳಿದಿಲ್ಲ. ಇನ್ನು, ಎಲ್ಲಾ ಪೋಸ್ಟ್​ಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಿಂದ ರಾಜ್​ ಕುಂದ್ರಾ ಡಿಲೀಟ್​ ಮಾಡಿದ್ದಾರೆ.

ಡಿಸೆಂಬರ್​ ತಿಂಗಳಲ್ಲಿ ರಾಜ್​ ಕುಂದ್ರಾ ಈ ಬಗ್ಗೆ ಮೌನ ಮುರಿದಿದ್ದರು. ‘ನನ್ನ ಕುರಿತು ಆಧಾರವಿಲ್ಲದ ಅನೇಕ ಮಾಹಿತಿ, ಲೇಖನಗಳು ಹರಿದಾಡುತ್ತಿವೆ. ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಲಾಗಿದೆ. ನನ್ನ ಜೀವನದಲ್ಲಿ ನಾನು ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ವಿತರಣೆಯನ್ನು ಮಾಡಿಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈ ಪ್ರಕರಣ ಈಗ ವಿಚಾರಣೆಯ ಹಂತದಲ್ಲಿದೆ. ಹಾಗಾಗಿ ನಾನು ಸ್ಪಷ್ಟನೆಗಳನ್ನು ನೀಡಲಾಗುವುದಿಲ್ಲ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅದರಲ್ಲಿ ಸತ್ಯ ಗೆಲ್ಲುತ್ತದೆ. ನಾನು ವಿಚಾರಣೆ ಎದುರಿಸಲು ಸಿದ್ಧನಿದ್ದೇನೆ’ ಎಂದು ಹೇಳಿದ್ದರು ಅವರು.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಾಂಪತ್ಯಕ್ಕೆ 12 ವರ್ಷದ ಸಂಭ್ರಮ; ಸುಖ ಸಂಸಾರದ ಗುಟ್ಟು ಬಿಚ್ಚಿಟ್ಟ ನಟಿ

‘ನಾನು ಅಶ್ಲೀಲ ಸಿನಿಮಾ ಮಾಡಿಲ್ಲ, ಮುಖ ಮುಚ್ಕೊಂಡು ಓಡಾಡಲ್ಲ’; ಮೌನ ಮುರಿದ ರಾಜ್​ ಕುಂದ್ರಾ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ