ಇಡಿ ದಾಳಿ ಬಳಿಕ ‘ಬೆಳವಣಿಗೆ’ ಬಗ್ಗೆ ಮಾರ್ಮಿಕವಾಗಿ ಪೋಸ್ಟ್​ ಮಾಡಿದ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ

‘ನಿಮಗೆ ಅಗೌರವ ಆಗುತ್ತಿದೆ ಎಂಬುದು ತಿಳಿದಾಗಲೂ ಶಾಂತವಾಗಿ ಇರುವುದನ್ನು ಕಲಿಯುವುದು ಒಂದು ಬೇರೆ ರೀತಿಯ ಬೆಳವಣಿಗೆ’ ಎಂದು ಉದ್ಯಮಿ ರಾಜ್​ ಕುಂದ್ರಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಡಿ ಅಧಿಕಾರಿಗಳು ದಾಳಿ ಮಾಡಿದ ನಂತರ ರಾಜ್​ ಕುಂದ್ರಾ ಕಡೆಯಿಂದ ಬಂದ ಮೊದಲ ಪ್ರತಿಕ್ರಿಯೆ ಇದು. ಇಡಿ ದಾಳಿಯ ಬಗ್ಗೆಯೇ ಅವರು ಈ ರೀತಿಯಾಗಿ ಪೋಸ್ಟ್​ ಮಾಡಿದ್ದಾರೆ ಎಂದು ನೆಟ್ಟಿಗರು ಊಹಿಸಿದ್ದಾರೆ.

ಇಡಿ ದಾಳಿ ಬಳಿಕ ‘ಬೆಳವಣಿಗೆ’ ಬಗ್ಗೆ ಮಾರ್ಮಿಕವಾಗಿ ಪೋಸ್ಟ್​ ಮಾಡಿದ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ
Follow us
|

Updated on: Apr 19, 2024 | 5:54 PM

ಉದ್ಯಮಿ, ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್​ ಕುಂದ್ರಾಗೆ ಕಾನೂನಿನ ತೊಡಕು ಉಂಟಾಗಿದೆ. ಮುಂಬೈ ಮತ್ತು ಪುಣೆಯಲ್ಲಿ ಇರುವ ಅವರ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ (ED Raid) ಮಾಡಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ರಾಜ್​ ಕುಂದ್ರಾ ಅವರು ಪತ್ನಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ನೋಂದಾಯಿಸಿದ ಸುಮಾರು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯ ಬಳಿಕ ರಾಜ್​ ಕುಂದ್ರಾ (Raj Kundra) ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದಾರೆ.

‘ನಿಮಗೆ ಅಗೌರವ ತೋರುತ್ತಿರುವಾಗಲೂ ಶಾಂತವಾಗಿ ಇರುವುದನ್ನು ಕಲಿಯುವುದು ಒಂದು ಬೇರೆ ರೀತಿಯ ಬೆಳವಣಿಗೆ’ ಎಂದು ರಾಜ್​ ಕುಂದ್ರಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇಡಿ ದಾಳಿ ಮಾಡಿದ ಬಳಿಕ ಅವರ ಕಡೆಯಿಂದ ಬಂದಿರುವ ಮೊದಲ ಪ್ರತಿಕ್ರಿಯೆ ಇದು. ಇಡಿ ದಾಳಿಗೆ ಸಂಬಂಧಿಸಿದಂತೆಯೇ ಅವರು ಈ ರೀತಿ ಪೋಸ್ಟ್​ ಮಾಡಿದ್ದಾರೆ ಎಂದು ನೆಟ್ಟಿಗರು ಊಹಿಸಿದ್ದಾರೆ.

ಈ ಹಿಂದೆ ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದಲ್ಲಿ ಜೈಲು ಸೇರಿದ್ದರು. ಆ ಘಟನೆ ನಡೆದ ತಕ್ಷಣ ಅವರು ಸೋಶಿಯಲ್ ಮೀಡಿಯಾದಿಂದ ಮಾಯವಾಗಿದ್ದರು. ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳನ್ನು ನಿಷ್ಕ್ರಿಯಗೊಳಿದ್ದರು. ಅಷ್ಟೇ ಅಲ್ಲದೇ ಪೂರ್ತಿ ಮುಖ ಮುಚ್ಚಿಕೊಂಡು ತಿರುಗಾಡುತ್ತಿದ್ದರು. ಆದರೆ ಈ ಬಾರಿ ಅವರು ಆ ರೀತಿ ಕಣ್ತಪ್ಪಿಸಿಕೊಂಡು ಓಡಾಡುವುದಾಗಲಿ, ಸೋಶಿಯಲ್​ ಮೀಡಿಯಾದಿಂದ ಕಣ್ಮರೆ ಆಗುವುದಾಗಲಿ ಮಾಡುವುದಿಲ್ಲ ಎನಿಸುತ್ತದೆ. ಆ ಉದ್ದೇಶದಿಂದಲೇ ಮಾರ್ಮಿಕವಾಗಿ ಪೋಸ್ಟ್​ ಮಾಡಿದಂತಿದೆ.

ಇದನ್ನೂ ಓದಿ: ಇಡಿ ದಾಳಿ ಬಳಿಕ ಸಲ್ಮಾನ್​ ಖಾನ್​ ಮನೆಗೆ ಓಡೋಡಿ ಬಂದ ಶಿಲ್ಪಾ ಶೆಟ್ಟಿ

ನಟಿ ಶಿಲ್ಪಾ ಶೆಟ್ಟಿ ಅವರು ಕೂಡ ಇಡಿ ದಾಳಿಯಿಂದ ಹೆಚ್ಚೇನೂ ತಲೆ ಕೆಡಿಸಿಕೊಂಡಂತಿಲ್ಲ. ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ತಮ್ಮ ಆಸ್ತಿಯನ್ನು ವಶಪಡಿಸಿಕೊಂಡ ಬಳಿಕ ಶಿಲ್ಪಾ ಶೆಟ್ಟಿ ಅವರು ಸಲ್ಮಾನ್​ ಖಾನ್​ ನಿವಾಸಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ಶಿಲ್ಪಾ ಶೆಟ್ಟಿ ಜೊತೆ ಅವರ ತಾಯಿ ಸುನಂದಾ ಶೆಟ್ಟಿ ಕೂಡ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು