AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ದಾಳಿ ಬಳಿಕ ‘ಬೆಳವಣಿಗೆ’ ಬಗ್ಗೆ ಮಾರ್ಮಿಕವಾಗಿ ಪೋಸ್ಟ್​ ಮಾಡಿದ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ

‘ನಿಮಗೆ ಅಗೌರವ ಆಗುತ್ತಿದೆ ಎಂಬುದು ತಿಳಿದಾಗಲೂ ಶಾಂತವಾಗಿ ಇರುವುದನ್ನು ಕಲಿಯುವುದು ಒಂದು ಬೇರೆ ರೀತಿಯ ಬೆಳವಣಿಗೆ’ ಎಂದು ಉದ್ಯಮಿ ರಾಜ್​ ಕುಂದ್ರಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಡಿ ಅಧಿಕಾರಿಗಳು ದಾಳಿ ಮಾಡಿದ ನಂತರ ರಾಜ್​ ಕುಂದ್ರಾ ಕಡೆಯಿಂದ ಬಂದ ಮೊದಲ ಪ್ರತಿಕ್ರಿಯೆ ಇದು. ಇಡಿ ದಾಳಿಯ ಬಗ್ಗೆಯೇ ಅವರು ಈ ರೀತಿಯಾಗಿ ಪೋಸ್ಟ್​ ಮಾಡಿದ್ದಾರೆ ಎಂದು ನೆಟ್ಟಿಗರು ಊಹಿಸಿದ್ದಾರೆ.

ಇಡಿ ದಾಳಿ ಬಳಿಕ ‘ಬೆಳವಣಿಗೆ’ ಬಗ್ಗೆ ಮಾರ್ಮಿಕವಾಗಿ ಪೋಸ್ಟ್​ ಮಾಡಿದ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ
ಮದನ್​ ಕುಮಾರ್​
|

Updated on: Apr 19, 2024 | 5:54 PM

Share

ಉದ್ಯಮಿ, ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್​ ಕುಂದ್ರಾಗೆ ಕಾನೂನಿನ ತೊಡಕು ಉಂಟಾಗಿದೆ. ಮುಂಬೈ ಮತ್ತು ಪುಣೆಯಲ್ಲಿ ಇರುವ ಅವರ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ (ED Raid) ಮಾಡಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ರಾಜ್​ ಕುಂದ್ರಾ ಅವರು ಪತ್ನಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ನೋಂದಾಯಿಸಿದ ಸುಮಾರು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯ ಬಳಿಕ ರಾಜ್​ ಕುಂದ್ರಾ (Raj Kundra) ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದಾರೆ.

‘ನಿಮಗೆ ಅಗೌರವ ತೋರುತ್ತಿರುವಾಗಲೂ ಶಾಂತವಾಗಿ ಇರುವುದನ್ನು ಕಲಿಯುವುದು ಒಂದು ಬೇರೆ ರೀತಿಯ ಬೆಳವಣಿಗೆ’ ಎಂದು ರಾಜ್​ ಕುಂದ್ರಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇಡಿ ದಾಳಿ ಮಾಡಿದ ಬಳಿಕ ಅವರ ಕಡೆಯಿಂದ ಬಂದಿರುವ ಮೊದಲ ಪ್ರತಿಕ್ರಿಯೆ ಇದು. ಇಡಿ ದಾಳಿಗೆ ಸಂಬಂಧಿಸಿದಂತೆಯೇ ಅವರು ಈ ರೀತಿ ಪೋಸ್ಟ್​ ಮಾಡಿದ್ದಾರೆ ಎಂದು ನೆಟ್ಟಿಗರು ಊಹಿಸಿದ್ದಾರೆ.

ಈ ಹಿಂದೆ ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದಲ್ಲಿ ಜೈಲು ಸೇರಿದ್ದರು. ಆ ಘಟನೆ ನಡೆದ ತಕ್ಷಣ ಅವರು ಸೋಶಿಯಲ್ ಮೀಡಿಯಾದಿಂದ ಮಾಯವಾಗಿದ್ದರು. ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳನ್ನು ನಿಷ್ಕ್ರಿಯಗೊಳಿದ್ದರು. ಅಷ್ಟೇ ಅಲ್ಲದೇ ಪೂರ್ತಿ ಮುಖ ಮುಚ್ಚಿಕೊಂಡು ತಿರುಗಾಡುತ್ತಿದ್ದರು. ಆದರೆ ಈ ಬಾರಿ ಅವರು ಆ ರೀತಿ ಕಣ್ತಪ್ಪಿಸಿಕೊಂಡು ಓಡಾಡುವುದಾಗಲಿ, ಸೋಶಿಯಲ್​ ಮೀಡಿಯಾದಿಂದ ಕಣ್ಮರೆ ಆಗುವುದಾಗಲಿ ಮಾಡುವುದಿಲ್ಲ ಎನಿಸುತ್ತದೆ. ಆ ಉದ್ದೇಶದಿಂದಲೇ ಮಾರ್ಮಿಕವಾಗಿ ಪೋಸ್ಟ್​ ಮಾಡಿದಂತಿದೆ.

ಇದನ್ನೂ ಓದಿ: ಇಡಿ ದಾಳಿ ಬಳಿಕ ಸಲ್ಮಾನ್​ ಖಾನ್​ ಮನೆಗೆ ಓಡೋಡಿ ಬಂದ ಶಿಲ್ಪಾ ಶೆಟ್ಟಿ

ನಟಿ ಶಿಲ್ಪಾ ಶೆಟ್ಟಿ ಅವರು ಕೂಡ ಇಡಿ ದಾಳಿಯಿಂದ ಹೆಚ್ಚೇನೂ ತಲೆ ಕೆಡಿಸಿಕೊಂಡಂತಿಲ್ಲ. ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ತಮ್ಮ ಆಸ್ತಿಯನ್ನು ವಶಪಡಿಸಿಕೊಂಡ ಬಳಿಕ ಶಿಲ್ಪಾ ಶೆಟ್ಟಿ ಅವರು ಸಲ್ಮಾನ್​ ಖಾನ್​ ನಿವಾಸಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ಶಿಲ್ಪಾ ಶೆಟ್ಟಿ ಜೊತೆ ಅವರ ತಾಯಿ ಸುನಂದಾ ಶೆಟ್ಟಿ ಕೂಡ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ