AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಳಿದಷ್ಟು ಚಿಕ್ಕದಿಲ್ಲ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆ; ಚಾರ್ಜ್​ಶೀಟ್​ನಿಂದ ಬಯಲಾಯ್ತು ಅಚ್ಚರಿಯ ವಿಚಾರ

ಮುಂಬೈ ಪೊಲೀಸರು ರಾಜ್​ ಕುಂದ್ರಾ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ಚಾರ್ಜ್​ಶೀಟ್​ನಲ್ಲಿ ರಾಜ್​ ಕುಂದ್ರಾ ಅವರ ಕರ್ಮಕಾಂಡವನ್ನು ಬಿಚ್ಚಿಡಲಾಗಿದೆ.

ತಿಳಿದಷ್ಟು ಚಿಕ್ಕದಿಲ್ಲ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆ; ಚಾರ್ಜ್​ಶೀಟ್​ನಿಂದ ಬಯಲಾಯ್ತು ಅಚ್ಚರಿಯ ವಿಚಾರ
ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ ದಂಪತಿ
TV9 Web
| Edited By: |

Updated on: Jul 28, 2021 | 4:19 PM

Share

ರಾಜ್​ ಕುಂದ್ರಾ ಅವರ ಪಾರ್ನ್​ ಸಿನಿಮಾ ದಂಧೆ ಪ್ರಕರಣ ನಿತ್ಯ ಹೊಸಹೊಸ ತಿರುವು ಪಡೆದುಕೊಳ್ಳುತ್ತಿದೆ. ವಿಚಾರಣೆಯಿಂದ, ತನಿಖೆಯಿಂದ ಒಂದಷ್ಟು ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಮುಂದಿನ ಮೂರು ವರ್ಷಗಳಲ್ಲಿ ಈ ಉದ್ಯಮದಿಂದ ದೊಡ್ಡ ಮೊತ್ತದ ಹಣ ಗಳಿಕೆ ಮಾಡಲು ರಾಜ್​ ಕುಂದ್ರಾ ಪ್ಲ್ಯಾನ್​ ಮಾಡಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಮುಂಬೈ ಪೊಲೀಸರು ರಾಜ್​ ಕುಂದ್ರಾ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ಚಾರ್ಜ್​ಶೀಟ್​ನಲ್ಲಿ ರಾಜ್​ ಕುಂದ್ರಾ ಅವರ ಕರ್ಮಕಾಂಡವನ್ನು ಬಿಚ್ಚಿಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಎಷ್ಟು ಹಣ ಗಳಿಕೆ ಮಾಡಬೇಕು ಎನ್ನುವ ರಾಜ್​ ಕುಂದ್ರಾ ಲೆಕ್ಕಾಚಾರದ ಬಗ್ಗೆ ಈ ಚಾರ್ಜ್​ಶೀಟ್​ನಲ್ಲಿದೆಯಂತೆ.

ಹಾಟ್​ಶಾಟ್ಸ್​ ಆ್ಯಪ್​ನಲ್ಲಿ ಪಾರ್ನ್​ ಸಿನಿಮಾಗಳ ಪ್ರಸಾರವನ್ನು ರಾಜ್​ಕುಂದ್ರಾ ಮಾಡುತ್ತಿದ್ದರು. ಈ ಕಾರಣಕ್ಕೆ ಗೂಗಲ್​ ಪ್ಲೇಸ್ಟೋರ್​ ಈ ಆ್ಯಪ್​ಅನ್ನು ತೆಗೆದು ಹಾಕಿತ್ತು. ಇದಾದ ನಂತರದಲ್ಲಿ ಬಾಲಿಫೇಮ್​ ಹೆಸರಿನ ಆ್ಯಪ್​ಅನ್ನು ರಾಜ್​ ಕುಂದ್ರಾ ಲಾಂಚ್​ ಮಾಡಿದ್ದರು. 2023-24ರ ವೇಳೆಗೆ ಈ ಉದ್ಯಮದಿಂದ 146 ಕೋಟಿ ಒಟ್ಟು ಆದಾಯ ಹಾಗೂ 34 ಕೋಟಿ ರೂಪಾಯಿ ಲಾಭಾಂಶ ಗಳಿಕೆ ಮಾಡುವ ಗುರಿ ಅವರದ್ದಾಗಿತ್ತು.

2021-22ರ ಅವಧಿಯಲ್ಲಿ 36.50 ಕೋಟಿ ಒಟ್ಟು ಆದಾಯ ಹಾಗೂ ಹಾಗೂ 4.77 ಕೋಟಿ ರೂಪಾಯಿ ಲಾಭ, 2021-22 ಅವಧಿಯಲ್ಲಿ 73 ಕೋಟಿ ಒಟ್ಟು ಆದಾಯ ಗಳಿಕೆ ಮಾಡುವ ಗುರಿಯನ್ನು ರಾಜ್​ ಹೊಂದಿದ್ದರು.

ರಾಜ್ ಕುಂದ್ರಾ ಅವರ ಈ ಅಶ್ಲೀಲ ದಂಧೆ ಪ್ರಕರಣಕ್ಕೂ ಉತ್ತರ ಪ್ರದೇಶದ ಕಾನ್ಪುರಕ್ಕೂ ನಂಟು ಸಿಕ್ಕಿತ್ತು. ಕಾನ್ಪುರ್ ಮಹಿಳೆಯ ಖಾತೆಗೆ ರಾಜ್ ​ಕುಂದ್ರಾ ಹಣ ವರ್ಗಾವಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿತ್ತು. ಹರ್ಷಿತಾ ಶ್ರೀವಾಸ್ತವ ಎಂಬ ಮಹಿಳೆಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಈ ಖಾತೆಯನ್ನು ವಶಕ್ಕೆ ಪಡೆಯಲಾಗಿದ್ದು, ಈ ಖಾತೆಯಲ್ಲಿ ಸುಮಾರು 2,32,45,222 ರೂಪಾಯಿ ಇತ್ತು. ಹಾಟ್ ಶಾಟ್ಸ್​​ ವಾಟ್ಸಾಪ್ ಗ್ರೂಪ್‌ನಲ್ಲಿ ಅರವಿಂದ್ ಕುಮಾರ್ ಶ್ರೀವಾಸ್ತವ ಹೆಸರಿನ ವ್ಯಕ್ತಿ ಇದ್ದಾರೆ. ಈ ಅರವಿಂದ್ ಅವರ ಪತ್ನಿ ಹರ್ಷಿತಾ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:  ಗಂಡನ ಅಶ್ಲೀಲ ಸಿನಿಮಾ ಕೇಸ್ ಬಯಲಾದ ಬಳಿಕ ರಿಯಾಲಿಟಿ ಶೋಗೆ ಕೈ ಎತ್ತಿದ ಶಿಲ್ಪಾ ಶೆಟ್ಟಿ

ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ