‘ಶಿಲ್ಪಾನ ಮದುವೆ ಆಗಲು ರಾಜ್ ಕುಂದ್ರಾ ಹಣ ಸುರಿದಿದ್ದರು’; ಅನಿಲ್ ಕಪೂರ್  

ಶಿಲ್ಪಾ ಶೆಟ್ಟಿ ಅವರು ಮೊದಲಿನಷ್ಟು ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾದಲ್ಲಿ ಶಿಲ್ಪಾ ನಟಿಸುತ್ತಿದ್ದಾರೆ. ಅವರು ಹಣದ ಕಾರಣಕ್ಕೆ ರಾಜ್​ ಕುಂದ್ರಾನ ಮದುವೆ ಆಗಿದ್ದರಂತೆ.

‘ಶಿಲ್ಪಾನ ಮದುವೆ ಆಗಲು ರಾಜ್ ಕುಂದ್ರಾ ಹಣ ಸುರಿದಿದ್ದರು’; ಅನಿಲ್ ಕಪೂರ್  
‘ಶಿಲ್ಪಾನ ಮದುವೆ ಆಗಲು ರಾಜ್ ಕುಂದ್ರಾ ಹಣ ಸುರಿದಿದ್ದರು’; ಅನಿಲ್ ಕಪೂರ್  
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 28, 2024 | 8:51 AM

ಶಿಲ್ಪಾ ಶೆಟ್ಟಿ ಅವರು ಸದಾ ಸುದ್ದಿಯಲ್ಲಿ ಇರುತ್ತಾರೆ. ಅದರಲ್ಲೂ ರಾಜ್​ ಕುಂದ್ರಾ ಜೊತೆಗಿನ ಅವರ ದಾಂಪತ್ಯದ ವಿಚಾರ ಸದಾ ಚರ್ಚೆ ಆಗುತ್ತಲೇ ಇರುತ್ತದೆ. ರಾಜ್ ಕುಂದ್ರಾ ಅವರ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿವೆ. ಆದಾಗ್ಯೂ ಶಿಲ್ಪಾ ಅವರನ್ನು ಬಿಟ್ಟುಕೊಟ್ಟಿಲ್ಲ. ಇದಕ್ಕೆ ಕಾರಣ ಹಣ ಎನ್ನಲಾಗಿದೆ. ಇದೇ ರೀತಿಯ ಆರೋಪವನ್ನು ಅನಿಲ್ ಕಪೂರ್ ಅವರು ಕೂಡ ಮಾಡಿದ್ದರು. ಆದರೆ, ಇದನ್ನು ಫನ್ ಆಗಿ ಹೇಳಿದ್ದರು ಅವರು.

ಶಿಲ್ಪಾ ಶೆಟ್ಟಿ ಅವರು ಟಾಕ್ ಶೋ ಒಂದಕ್ಕೆ ಬಂದಿದ್ದರು. ಇದರಲ್ಲಿ ಅನಿಲ್ ಕಪೂರ್ ಕೂಡ ಇದ್ದರು. ಇದನ್ನು ನಡೆಸಿಕೊಟ್ಟಿದ್ದು ಫರಾ ಖಾನ್. ಈ ಮೂವರು ಒಟ್ಟಾಗಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಕೆಲವು ಫನಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಇದಕ್ಕೆ ಶಿಲ್ಪಾ ಶೆಟ್ಟಿ ಅವರು ಫನ್ನಿಯಾಗಿಯೇ ಉತ್ತರ ನೀಡಿದ್ದರು.

‘ರಾಜ್ ಜೊತೆ ಮದುವೆ ಆಗಲು ನೀವು ಓಕೆ ಎಂದಿದ್ದೀರಲ್ಲ. ಅವರೇನು ಸೀಟಿ ಹೊಡೆದರಾ ಅಥವಾ ತೋಳುಗಳನ್ನು ಚಾಚಿದ್ದರಾ’ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ್ದ ಅನಿಲ್ ಕಪೂರ್ ‘ಹಣ ಚಾಚಿದ್ದರು’ ಎಂದಿದ್ದಾರೆ. ಇದನ್ನು ನೋಡಿ ನಕ್ಕಿದ್ದ ಶಿಲ್ಪಾ, ‘ಕೈಯನ್ನು ಕೂಡ ಚಾಚಿದ್ದರು’ ಎಂದಿದ್ದರು. ಅಂದರೆ ಹಗ್ ಮಾಡಿದ್ದರು ಎಂಬರ್ಥದಲ್ಲಿ ಅವರು ಹೇಳಿದ್ದರು. ಇದಕ್ಕೂ ಅನಿಲ್ ಕಪೂರ್ ಕೌಂಟರ್ ನೀಡಿದ್ದರು. ಅವರ ಕೈಯಲ್ಲಿ ಹಣ ಇತ್ತಲ್ಲ ಎಂದು ನಕ್ಕಿದ್ದರು.

View this post on Instagram

A post shared by GlamBlitz (@glamblitz_)

ಈ ಮೊದಲು ಕಪಿಲ್ ಶರ್ಮಾ ಶೋಗೆ ಶಿಲ್ಪಾ ಹಾಗೂ ರಾಜ್​ ಕುಂದ್ರಾ ಆಗಮಿಸಿದ್ದರು. ಈ ವೇಳೆ ಕಪಿಲ್ ಶರ್ಮಾ ಅವರು ರಾಜ್ ಕುಂದ್ರಾ ಅವರ ಮೇಲೆ ಫನ್ ಆಗಿ ಮಾತನಾಡಿದ್ದರು. ‘ಯಾವಾಗಲೂ ನೀವು ಶಿಲ್ಪಾ ಜೊತೆಯೇ ಇರುತ್ತೀರಿ. ವೆಕೇಶನ್ ತೆರಳುತ್ತೀರಿ, ಫುಟ್​ಬಾಲ್ ಮ್ಯಾಚ್​ಗೆ ತೆರಳುತ್ತೀರಿ. ಯಾವುದೇ ಕೆಲಸ ಇದಲ್ಲದೆ ಹಣ ಹೇಗೆ ಗಳಿಸುತ್ತೀರಿ. ನನಗೂ ಹೇಳಿ’ ಎಂದು ಜೋಕ್ ಮಾಡಿದ್ದರು.

ಇದನ್ನೂ ಓದಿ: ಶಿಲ್ಪಾ ಶೆಟ್ಟಿಗೆ ತುಳು ಭಾಷೆಯ ಮೇಲೆ ಇರೋ ಪ್ರೀತಿ ಎಂಥದ್ದು? ಇಲ್ಲಿದೆ ವಿಡಿಯೋ

ಶಿಲ್ಪಾ ಶೆಟ್ಟಿ ಅವರು ಹಣಕ್ಕಾಗಿ ರಾಜ್​ ಕುಂದ್ರಾನ ಮದುವೆ ಆಗಿದ್ದೇನೆ ಎಂಬುದನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ‘ರಾಜ್ ಅವರನ್ನು ಮದುವೆ ಆಗುವುದಕ್ಕೂ ಮೊದಲು ನನ್ನ ಬಳಿ ಹಣ ಇತ್ತು. ಈಗಲೂ ಇದೆ’ ಎಂದು ಅವರು ಈ ಮೊದಲು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:50 am, Wed, 28 August 24

ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?