AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಚಿತ್ತ, ಏಕಾಗ್ರತೆ ಹೊಂದೋದು ಹೇಗೆ? ಅಭಿಮಾನಿಗಳಿಗೆ ಟಿಪ್ಸ್​ ನೀಡಿದ ಶಿಲ್ಪಾ ಶೆಟ್ಟಿ

ರಾಜ್​ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಒಂದು ತಿಂಗಳು ಸಂಪೂರ್ಣ ಸೈಲೆಂಟ್​ ಆಗಿದ್ದರು. ನಂತರ ಮತ್ತೆ ತಮ್ಮ ಕೆಲಸಕ್ಕೆ ಮರಳಿದ್ದಾರೆ ಅವರು.

ಸಮಚಿತ್ತ, ಏಕಾಗ್ರತೆ ಹೊಂದೋದು ಹೇಗೆ? ಅಭಿಮಾನಿಗಳಿಗೆ ಟಿಪ್ಸ್​ ನೀಡಿದ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Sep 13, 2021 | 6:56 PM

Share

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಜೈಲು ಸೇರಿ ಹಲವು ದಿನಗಳಾಗಿವೆ. ಅವರಿಗೆ ಜಾಮೀನು ಸಿಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಜಾಮೀನು ಪಡೆಯೋಕೆ ರಾಜ್​ ಕುಂದ್ರಾ ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅವರ ಪರ ವಕೀಲರು ನಾನಾ ಕೋರ್ಟ್​ ಅಲೆಯುತ್ತಿದ್ದಾರೆ. ಆದರೆ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಇತ್ತ ಪತಿಯಿಂದ ಶಿಲ್ಪಾ ಶೆಟ್ಟಿ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಇದನ್ನು ಅವರು ಚಾಲೆಂಜ್​ ಆಗಿ ಸ್ವೀಕರಿಸಿದ್ದಾರೆ. ಪತಿ ಬಂಧನದ ನಂತರ ಸ್ವಲ್ಪ ದಿನ ಮನೆಯಲ್ಲೇ ಇದ್ದ ಅವರು ಈಗ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಅಭಿಮಾನಿಗಳಿಗೆ ಕೆಲ ಟಿಪ್ಸ್​ ಕೂಡ ನೀಡಿದ್ದಾರೆ.

ರಾಜ್​ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಒಂದು ತಿಂಗಳು ಸಂಪೂರ್ಣ ಸೈಲೆಂಟ್​ ಆಗಿದ್ದರು. ನಂತರ ಮತ್ತೆ ತಮ್ಮ ಕೆಲಸಕ್ಕೆ ಮರಳಿದ್ದಾರೆ ಅವರು. ‘ಸೂಪರ್​ ಡಾನ್ಸರ್​’ ರಿಯಾಲಿಟಿ ಶೋ ಜಡ್ಜ್​ ಆಗಿರುವ ಶಿಲ್ಪಾ ಮತ್ತೆ ಕೆಲಸಕ್ಕೆ ಮರಳಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿಯೂ ಕೂಡ ಅವರು ಆ್ಯಕ್ಟೀವ್​ ಆಗಿದ್ದಾರೆ. ಈಗ ಅವರು ಸಮಚಿತ್ತ ಹೊಂದೋದು ಹೇಗೆ ಎನ್ನುವ ಬಗ್ಗೆ ಪಾಠ ಮಾಡಿದ್ದಾರೆ.

ಶಿಲ್ಪಾ ಶೆಟ್ಟಿ ವಯಸ್ಸು 46. ಆದಾಗ್ಯೂ ಅವರು ಫಿಟ್​ ಆಗಿದ್ದಾರೆ. ಅವರಿಗೆ ವಯಸ್ಸಾದಂತೆ ಕಾಣುವುದೇ ಇಲ್ಲ. ಇದಕ್ಕೆ ಕಾರಣವಾಗಿದ್ದು ಯೋಗ. ಶಿಲ್ಪಾ ಯೋಗದಲ್ಲಿ ಪಳಗಿದ್ದಾರೆ. ನಿತ್ಯ ಅವರು ಯೋಗ ಮಾಡುವುದನ್ನು ತಪ್ಪಿಸುವುದಿಲ್ಲ. ಈಗ ಕೆಲ ಆಸನಗಳನ್ನು ಅವರು ಅಭಿಮಾನಿಗಳಿಗೂ ಹೇಳಿಕೊಟ್ಟಿದ್ದಾರೆ. ಈ ಆಸನಗಳಿಂದ ಏಕಾಗ್ರತೆ ಹಾಗೂ ಸಮಚಿತ್ತ ಹೊಂದಲು ಸಾಧ್ಯ ಎಂದು ಅವರು ಬರೆದುಕೊಂಡಿದ್ದಾರೆ.

ಶಿಲ್ಪಾ ಶೆಟ್ಟಿ ಅವರು ನಟನೆಯಿಂದ ದೂರವೇ ಉಳಿದಿದ್ದರು. ಇತ್ತೀಚೆಗೆ ಅವರ ನಟನೆಯ ‘ಹಂಗಾಮಾ 2’ ಒಟಿಟಿಯಲ್ಲಿ ರಿಲೀಸ್​ ಆಗಿತ್ತು. ಇದೇ ಸಂದರ್ಭದಲ್ಲಿ ರಾಜ್​ ಕುಂದ್ರಾ ವಿವಾದ ಭುಗಿಲೆದ್ದಿತ್ತು. ಇದು ಸಿನಿಮಾಗೆ ಕೊಂಚ ಹಿನ್ನಡೆ ಆಗಿತ್ತು. ಇನ್ನು, ಸಿನಿಮಾಗೆ ಎಲ್ಲ ಕಡೆಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ, ಈ ಸಿನಿಮಾ ಸೋತಿತ್ತು. ಇನ್ನು ಶಿಲ್ಪಾ ಸಹೋದರಿ ಶಮಿತಾ ಶೆಟ್ಟಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟು ಮಿಂಚುತ್ತಿದ್ದಾರೆ.

ಇದನ್ನೂ ಓದಿ: Shilpa Shetty: ರಾಜ್​ ಕುಂದ್ರಾ ಪೋರ್ನ್​ ದಂಧೆಯಲ್ಲಿ ಶಿಲ್ಪಾ ಶೆಟ್ಟಿ ತಪ್ಪು ಒಪ್ಪಿಕೊಳ್ಳಲಿ ಎಂದು ಹಠ ಹಿಡಿದ ಶೆರ್ಲಿನ್​ ಚೋಪ್ರಾ

ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾಗೆ ಹೊಸ ಸಂಕಷ್ಟ; 41 ಲಕ್ಷ ರೂ ವಂಚಿಸಿದ್ದಾರೆಂದು ದೂರು ನೀಡಿದ ದೆಹಲಿ ಮೂಲದ ಉದ್ಯಮಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ