AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಚಿತ್ತ, ಏಕಾಗ್ರತೆ ಹೊಂದೋದು ಹೇಗೆ? ಅಭಿಮಾನಿಗಳಿಗೆ ಟಿಪ್ಸ್​ ನೀಡಿದ ಶಿಲ್ಪಾ ಶೆಟ್ಟಿ

ರಾಜ್​ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಒಂದು ತಿಂಗಳು ಸಂಪೂರ್ಣ ಸೈಲೆಂಟ್​ ಆಗಿದ್ದರು. ನಂತರ ಮತ್ತೆ ತಮ್ಮ ಕೆಲಸಕ್ಕೆ ಮರಳಿದ್ದಾರೆ ಅವರು.

ಸಮಚಿತ್ತ, ಏಕಾಗ್ರತೆ ಹೊಂದೋದು ಹೇಗೆ? ಅಭಿಮಾನಿಗಳಿಗೆ ಟಿಪ್ಸ್​ ನೀಡಿದ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Sep 13, 2021 | 6:56 PM

Share

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಜೈಲು ಸೇರಿ ಹಲವು ದಿನಗಳಾಗಿವೆ. ಅವರಿಗೆ ಜಾಮೀನು ಸಿಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಜಾಮೀನು ಪಡೆಯೋಕೆ ರಾಜ್​ ಕುಂದ್ರಾ ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅವರ ಪರ ವಕೀಲರು ನಾನಾ ಕೋರ್ಟ್​ ಅಲೆಯುತ್ತಿದ್ದಾರೆ. ಆದರೆ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಇತ್ತ ಪತಿಯಿಂದ ಶಿಲ್ಪಾ ಶೆಟ್ಟಿ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಇದನ್ನು ಅವರು ಚಾಲೆಂಜ್​ ಆಗಿ ಸ್ವೀಕರಿಸಿದ್ದಾರೆ. ಪತಿ ಬಂಧನದ ನಂತರ ಸ್ವಲ್ಪ ದಿನ ಮನೆಯಲ್ಲೇ ಇದ್ದ ಅವರು ಈಗ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಅಭಿಮಾನಿಗಳಿಗೆ ಕೆಲ ಟಿಪ್ಸ್​ ಕೂಡ ನೀಡಿದ್ದಾರೆ.

ರಾಜ್​ ಕುಂದ್ರಾ ಬಂಧನದ ನಂತರದಲ್ಲಿ ಶಿಲ್ಪಾ ಒಂದು ತಿಂಗಳು ಸಂಪೂರ್ಣ ಸೈಲೆಂಟ್​ ಆಗಿದ್ದರು. ನಂತರ ಮತ್ತೆ ತಮ್ಮ ಕೆಲಸಕ್ಕೆ ಮರಳಿದ್ದಾರೆ ಅವರು. ‘ಸೂಪರ್​ ಡಾನ್ಸರ್​’ ರಿಯಾಲಿಟಿ ಶೋ ಜಡ್ಜ್​ ಆಗಿರುವ ಶಿಲ್ಪಾ ಮತ್ತೆ ಕೆಲಸಕ್ಕೆ ಮರಳಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿಯೂ ಕೂಡ ಅವರು ಆ್ಯಕ್ಟೀವ್​ ಆಗಿದ್ದಾರೆ. ಈಗ ಅವರು ಸಮಚಿತ್ತ ಹೊಂದೋದು ಹೇಗೆ ಎನ್ನುವ ಬಗ್ಗೆ ಪಾಠ ಮಾಡಿದ್ದಾರೆ.

ಶಿಲ್ಪಾ ಶೆಟ್ಟಿ ವಯಸ್ಸು 46. ಆದಾಗ್ಯೂ ಅವರು ಫಿಟ್​ ಆಗಿದ್ದಾರೆ. ಅವರಿಗೆ ವಯಸ್ಸಾದಂತೆ ಕಾಣುವುದೇ ಇಲ್ಲ. ಇದಕ್ಕೆ ಕಾರಣವಾಗಿದ್ದು ಯೋಗ. ಶಿಲ್ಪಾ ಯೋಗದಲ್ಲಿ ಪಳಗಿದ್ದಾರೆ. ನಿತ್ಯ ಅವರು ಯೋಗ ಮಾಡುವುದನ್ನು ತಪ್ಪಿಸುವುದಿಲ್ಲ. ಈಗ ಕೆಲ ಆಸನಗಳನ್ನು ಅವರು ಅಭಿಮಾನಿಗಳಿಗೂ ಹೇಳಿಕೊಟ್ಟಿದ್ದಾರೆ. ಈ ಆಸನಗಳಿಂದ ಏಕಾಗ್ರತೆ ಹಾಗೂ ಸಮಚಿತ್ತ ಹೊಂದಲು ಸಾಧ್ಯ ಎಂದು ಅವರು ಬರೆದುಕೊಂಡಿದ್ದಾರೆ.

ಶಿಲ್ಪಾ ಶೆಟ್ಟಿ ಅವರು ನಟನೆಯಿಂದ ದೂರವೇ ಉಳಿದಿದ್ದರು. ಇತ್ತೀಚೆಗೆ ಅವರ ನಟನೆಯ ‘ಹಂಗಾಮಾ 2’ ಒಟಿಟಿಯಲ್ಲಿ ರಿಲೀಸ್​ ಆಗಿತ್ತು. ಇದೇ ಸಂದರ್ಭದಲ್ಲಿ ರಾಜ್​ ಕುಂದ್ರಾ ವಿವಾದ ಭುಗಿಲೆದ್ದಿತ್ತು. ಇದು ಸಿನಿಮಾಗೆ ಕೊಂಚ ಹಿನ್ನಡೆ ಆಗಿತ್ತು. ಇನ್ನು, ಸಿನಿಮಾಗೆ ಎಲ್ಲ ಕಡೆಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ, ಈ ಸಿನಿಮಾ ಸೋತಿತ್ತು. ಇನ್ನು ಶಿಲ್ಪಾ ಸಹೋದರಿ ಶಮಿತಾ ಶೆಟ್ಟಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟು ಮಿಂಚುತ್ತಿದ್ದಾರೆ.

ಇದನ್ನೂ ಓದಿ: Shilpa Shetty: ರಾಜ್​ ಕುಂದ್ರಾ ಪೋರ್ನ್​ ದಂಧೆಯಲ್ಲಿ ಶಿಲ್ಪಾ ಶೆಟ್ಟಿ ತಪ್ಪು ಒಪ್ಪಿಕೊಳ್ಳಲಿ ಎಂದು ಹಠ ಹಿಡಿದ ಶೆರ್ಲಿನ್​ ಚೋಪ್ರಾ

ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾಗೆ ಹೊಸ ಸಂಕಷ್ಟ; 41 ಲಕ್ಷ ರೂ ವಂಚಿಸಿದ್ದಾರೆಂದು ದೂರು ನೀಡಿದ ದೆಹಲಿ ಮೂಲದ ಉದ್ಯಮಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್