AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಂಚವನ್ನು ನಾನು ಸ್ವೀಕರಿಸುವುದೂ ಇಲ್ಲ, ಕೊಡುವುದೂ ಇಲ್ಲ’; ವೈರಲ್​ ಆಯ್ತು ರಾಜ್​ ಕುಂದ್ರಾ ಹಳೆಯ ವಿಡಿಯೋ

ಬಂಧನಕ್ಕೂ ಮೊದಲು ರಾಜ್​ ಕುಂದ್ರಾ ಮುಂಬೈ ಪೊಲೀಸ್​ ಅಪರಾಧ ಇಲಾಖೆ ಜತೆ ಸಂಭಾಷಣೆ ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮನ್ನು ಬಂಧಿಸದಿದ್ದರೆ 25 ಲಕ್ಷ ರೂಪಾಯಿ ಲಂಚ ಕೊಡುವುದಾಗಿ ಹೇಳಿಕೊಂಡಿದ್ದರು.

‘ಲಂಚವನ್ನು ನಾನು ಸ್ವೀಕರಿಸುವುದೂ ಇಲ್ಲ, ಕೊಡುವುದೂ ಇಲ್ಲ’; ವೈರಲ್​ ಆಯ್ತು ರಾಜ್​ ಕುಂದ್ರಾ ಹಳೆಯ ವಿಡಿಯೋ
ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಂಪತಿಗೆ ಶಾಕ್​; ದೊಡ್ಡ ಮೊತ್ತದ ದಂಡ ವಿಧಿಸಿದ ಸೆಬಿ
TV9 Web
| Edited By: |

Updated on: Jul 23, 2021 | 8:32 PM

Share

ಅಶ್ಲೀಲ ವಿಡಿಯೋ ನಿರ್ಮಾಣದ​ ಆರೋಪದ ಮೇಲೆ ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಕೋರ್ಟ್​ ಆದೇಶದಂತೆ ಜುಲೈ 27ರವರೆಗೆ ಅವರು ಪೊಲೀಸ್​ ಕಸ್ಟಡಿಯಲ್ಲಿರೋದು ಅನಿವಾರ್ಯವಾಗಿದೆ. ಈ ಮಧ್ಯೆ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಬಂಧನಕ್ಕೂ ಮೊದಲು ರಾಜ್​ ಕುಂದ್ರಾ ಮುಂಬೈ ಪೊಲೀಸ್​ ಅಪರಾಧ ಇಲಾಖೆ ಜತೆ ಸಂಭಾಷಣೆ ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮನ್ನು ಬಂಧಿಸದಿದ್ದರೆ 25 ಲಕ್ಷ ರೂಪಾಯಿ ಲಂಚ ಕೊಡುವುದಾಗಿ ಹೇಳಿಕೊಂಡಿದ್ದರು. ಈ ವಿಚಾರವನ್ನು ಭ್ರಷ್ಟಾಚಾರ ನಿಗ್ರಹ ದಳದ ಗಮನಕ್ಕೆ ಬಂದಿದೆ. ಈ ಮೂಲಕ ರಾಜ್​ ಕುಂದ್ರಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ವಿಚಿತ್ರ ಎಂದರೆ ರಾಜ್​ ಕುಂದ್ರಾ ಲಂಚ ನೀಡುವುದು ಹಾಗೂ ತೆಗೆದುಕೊಳ್ಳುವುದನ್ನು ವಿರೋಧಿಸಿದ್ದರು! ಈ ವಿಡಿಯೋ ಈಗ ವೈರಲ್​ ಆಗಿದೆ.

‘ನಾನು ಹುಟ್ಟಿ ಬೆಳೆದಿದ್ದು ಇಂಗ್ಲೆಡ್​ನಲ್ಲಿ. ನನ್ನ ಮಟ್ಟಿಗೆ, ಇಂಗ್ಲೆಂಡ್‌ನಲ್ಲಿನ ಉದ್ಯಮಗಳು ಹೆಚ್ಚು ಸುಲಭ. ಉದ್ಯಮದಿಂದ ನಾನು ಸಾಕಷ್ಟು ಹಣ ಸಂಪಾದಿಸಿದೆ. ಆದರೆ, ಇದಕ್ಕೆ ಸಾಕಷ್ಟು ಸಮಯ ತೆಗೆದುಕೊಂಡಿತು. ನಾನು ಇಂದು ನನ್ನ ವ್ಯವಹಾರವನ್ನು ಮೊಬೈಲ್ ಫೋನ್‌ನಿಂದ ನಡೆಸಬಲ್ಲೆ. ಮೊಬೈಲ್​ ಅತ್ಯುತ್ತಮ ಸಾಧನ ಮತ್ತು ಅದನ್ನು ಸರಿಯಾಗಿ ಬಳಸಬೇಕಿದೆ’ ಎಂದು ಅವರು ಹೇಳಿದ್ದಾರೆ.

‘ಕಳೆದ 10 ವರ್ಷಗಳಲ್ಲಿ ನಾನು ಭಾರತದಲ್ಲಿದ್ದೇನೆ. ನನ್ನ ದೊಡ್ಡ ವೈಫಲ್ಯಗಳನ್ನು ನಾನು ನೋಡಿದ್ದೇನೆ. ಇದು ಆಗೋಕೆ ಕಾರಣ ತಿಳುವಳಿಕೆಯ ಕೊರತೆ. ಕೆಲಸ ಆಗಬೆಕು ಎಂದರೆ ಮೊದಲು ನೀವು ಜನರನ್ನು ತಿಳಿದುಕೊಳ್ಳಬೇಕು. ಲಂಚ ಕೊಟ್ಟು ಕೆಲಸ ಮಾಡಿಸಿಕೊಳ್ಳೋದು ನನಗೆ ಇಷ್ಟವಿಲ್ಲ. ನಾನು ಈ ವಿಚಾರದಲ್ಲಿ ತುಂಬಾ ಕಟ್ಟುನಿಟ್ಟು ಕಾಯ್ದುಕೊಂಡಿದ್ದೇನೆ. ಯಾರಾದರೂ ನನ್ನ ಬಳಿಯಲ್ಲಿ ಅಂಥ ಪ್ರಯತ್ನ ಮಾಡಿದರೆ ನಾನು ಖಡಾಖಂಡಿತವಾಗಿ ಆಗುವುದಿಲ್ಲ ಎನ್ನುತ್ತೇನೆ’ ಎಂದಿದ್ದರು ರಾಜ್​ ಕುಂದ್ರಾ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

ರಾಜ್​ ಕುಂದ್ರಾ ನಡೆಸುತ್ತಿದ್ದ ದಂಧೆ ಬಗ್ಗೆ ಶಿಲ್ಪಾ ಶೆಟ್ಟಿಗೆ ಇತ್ತು ಮಾಹಿತಿ? ಪೊಲೀಸರಿಂದ ವಿಚಾರಣೆ

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!