AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು

ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು
ರಾಜ್​ ಕುಂದ್ರಾ
TV9 Web
| Edited By: |

Updated on: Jul 21, 2021 | 9:07 PM

Share

ಅಶ್ಲೀಲ ಸಿನಿಮಾ ಮಾಡಿ ಅದನ್ನು ವಿವಿಧ ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತಂತೆ! ಇದಲ್ಲದೆ, ಪಾರ್ನ್​ ವಿಡಿಯೋ ಲೈವ್​ ಸ್ಟ್ರೀಮಿಂಗ್​ಗೆ ಭವಿಷ್ಯದಲ್ಲಿ ಭಾರೀ ಬೇಡಿಕೆ ಬರಲಿದೆ ಎಂಬುದು ರಾಜ್​ ಕುಂದ್ರಾ ಲೆಕ್ಕಾಚಾರವಾಗಿತ್ತು ಎಂದು ವರದಿಯಾಗಿದೆ.

ರಾಜ್ ಕುಂದ್ರಾ ಮತ್ತು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಅವರ ಸಹೋದರ ಇಬ್ಬರೂ ಸೇರಿ ಕೆನ್ರಿನ್ ಹೆಸರಿನ ಕಂಪನಿಯನ್ನು ಆರಂಭಿಸಿದ್ದರು. ನೀಲಿ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸಿ ನಂತರ ವಿ ಟ್ರಾನ್ಸ್‌ಫರ್ (ಫೈಲ್ ವರ್ಗಾವಣೆ ಸೇವೆ) ಮೂಲಕ ಅದು ಈ ಕಂಪನಿ ಸೇರುತ್ತಿತ್ತು. ಭಾರತದ ಸೈಬರ್ ಕಾನೂನಿಂದ ತಪ್ಪಿಸಿಕೊಳ್ಳಲು ಈ ಕಂಪನಿಯನ್ನು ವಿದೇಶದಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು.

ರಾಜ್ ಬಂಧನದ ನಂತರ, ಅಕ್ಟೋಬರ್​ನಲ್ಲಿ ನಡೆದ ಕೆಲವು ವಾಟ್ಸಾಪ್ ಚಾಟ್‌ಗಳು ಹೊರ ಬಂದಿವೆ. ಪಾರ್ನ್​ ಸಿನಿಮಾ ವ್ಯವಹಾರದಿಂದ ರಾಜ್ ಕುಂದ್ರಾ ಸಾಕಷ್ಟು ಹಣ ಸಂಪಾದಿಸಿದ್ದರು ಎಂಬುದು ಬಹಿರಂಗವಾಗಿದೆ. ‘ಎಚ್ ಅಕೌಂಟ್ಸ್’  ಹೆಸರಿನ ಗ್ರೂಪ್​ನ ಚಾಟ್​ಗಳು ಇವಾಗಿದೆ. ಇದರ ಅಡ್ಮಿನ್​ ರಾಜ್ ಕುಂದ್ರಾ. ಈ ಗ್ರೂಪ್​ನಲ್ಲಿ ರಾಜ್ ಅವರು ತಮ್ಮ ಸಂಬಂಧಿ ಮತ್ತು ಕೆನ್ರಿನ್ ಪ್ರೊಡಕ್ಷನ್ ಹೌಸ್ ಅಧ್ಯಕ್ಷ ಪ್ರದೀಪ್ ಭಕ್ಷಿ ಅವರೊಂದಿಗೆ ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಕಂಡು ಬಂದಿದೆ. ಸಿನಿಮಾದಿಂದ ದಿನಕ್ಕೆ ಲಕ್ಷಾಂತರ ರೂಪಾಯಿ ಹಣ ಬರುತ್ತಿತ್ತು ಎಂಬುದು ಚಾಟ್​ನಿಂದ ಗೊತ್ತಾಗಿದೆ.

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ. ಇದು ಪೊಲೀಸರಿಗೆ ಮಹತ್ವದ ದಾಖಲೆಯಾಗಿದೆ.

ಇದನ್ನೂ ಓದಿ: ‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

Raj Kundra: ಆ ಒಂದು ‘ಬಂಗಲೆ’ಯಿಂದಾಗಿ ರಾಜ್​ ಕುಂದ್ರಾ ಸಿಕ್ಕಿ ಹಾಕಿಕೊಂಡರಾ? ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್