AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು

ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು
ರಾಜ್​ ಕುಂದ್ರಾ
TV9 Web
| Edited By: |

Updated on: Jul 21, 2021 | 9:07 PM

Share

ಅಶ್ಲೀಲ ಸಿನಿಮಾ ಮಾಡಿ ಅದನ್ನು ವಿವಿಧ ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತಂತೆ! ಇದಲ್ಲದೆ, ಪಾರ್ನ್​ ವಿಡಿಯೋ ಲೈವ್​ ಸ್ಟ್ರೀಮಿಂಗ್​ಗೆ ಭವಿಷ್ಯದಲ್ಲಿ ಭಾರೀ ಬೇಡಿಕೆ ಬರಲಿದೆ ಎಂಬುದು ರಾಜ್​ ಕುಂದ್ರಾ ಲೆಕ್ಕಾಚಾರವಾಗಿತ್ತು ಎಂದು ವರದಿಯಾಗಿದೆ.

ರಾಜ್ ಕುಂದ್ರಾ ಮತ್ತು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಅವರ ಸಹೋದರ ಇಬ್ಬರೂ ಸೇರಿ ಕೆನ್ರಿನ್ ಹೆಸರಿನ ಕಂಪನಿಯನ್ನು ಆರಂಭಿಸಿದ್ದರು. ನೀಲಿ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸಿ ನಂತರ ವಿ ಟ್ರಾನ್ಸ್‌ಫರ್ (ಫೈಲ್ ವರ್ಗಾವಣೆ ಸೇವೆ) ಮೂಲಕ ಅದು ಈ ಕಂಪನಿ ಸೇರುತ್ತಿತ್ತು. ಭಾರತದ ಸೈಬರ್ ಕಾನೂನಿಂದ ತಪ್ಪಿಸಿಕೊಳ್ಳಲು ಈ ಕಂಪನಿಯನ್ನು ವಿದೇಶದಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು.

ರಾಜ್ ಬಂಧನದ ನಂತರ, ಅಕ್ಟೋಬರ್​ನಲ್ಲಿ ನಡೆದ ಕೆಲವು ವಾಟ್ಸಾಪ್ ಚಾಟ್‌ಗಳು ಹೊರ ಬಂದಿವೆ. ಪಾರ್ನ್​ ಸಿನಿಮಾ ವ್ಯವಹಾರದಿಂದ ರಾಜ್ ಕುಂದ್ರಾ ಸಾಕಷ್ಟು ಹಣ ಸಂಪಾದಿಸಿದ್ದರು ಎಂಬುದು ಬಹಿರಂಗವಾಗಿದೆ. ‘ಎಚ್ ಅಕೌಂಟ್ಸ್’  ಹೆಸರಿನ ಗ್ರೂಪ್​ನ ಚಾಟ್​ಗಳು ಇವಾಗಿದೆ. ಇದರ ಅಡ್ಮಿನ್​ ರಾಜ್ ಕುಂದ್ರಾ. ಈ ಗ್ರೂಪ್​ನಲ್ಲಿ ರಾಜ್ ಅವರು ತಮ್ಮ ಸಂಬಂಧಿ ಮತ್ತು ಕೆನ್ರಿನ್ ಪ್ರೊಡಕ್ಷನ್ ಹೌಸ್ ಅಧ್ಯಕ್ಷ ಪ್ರದೀಪ್ ಭಕ್ಷಿ ಅವರೊಂದಿಗೆ ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಕಂಡು ಬಂದಿದೆ. ಸಿನಿಮಾದಿಂದ ದಿನಕ್ಕೆ ಲಕ್ಷಾಂತರ ರೂಪಾಯಿ ಹಣ ಬರುತ್ತಿತ್ತು ಎಂಬುದು ಚಾಟ್​ನಿಂದ ಗೊತ್ತಾಗಿದೆ.

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ. ಇದು ಪೊಲೀಸರಿಗೆ ಮಹತ್ವದ ದಾಖಲೆಯಾಗಿದೆ.

ಇದನ್ನೂ ಓದಿ: ‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

Raj Kundra: ಆ ಒಂದು ‘ಬಂಗಲೆ’ಯಿಂದಾಗಿ ರಾಜ್​ ಕುಂದ್ರಾ ಸಿಕ್ಕಿ ಹಾಕಿಕೊಂಡರಾ? ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ