AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು

ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು
ರಾಜ್​ ಕುಂದ್ರಾ
TV9 Web
| Edited By: |

Updated on: Jul 21, 2021 | 9:07 PM

Share

ಅಶ್ಲೀಲ ಸಿನಿಮಾ ಮಾಡಿ ಅದನ್ನು ವಿವಿಧ ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತಂತೆ! ಇದಲ್ಲದೆ, ಪಾರ್ನ್​ ವಿಡಿಯೋ ಲೈವ್​ ಸ್ಟ್ರೀಮಿಂಗ್​ಗೆ ಭವಿಷ್ಯದಲ್ಲಿ ಭಾರೀ ಬೇಡಿಕೆ ಬರಲಿದೆ ಎಂಬುದು ರಾಜ್​ ಕುಂದ್ರಾ ಲೆಕ್ಕಾಚಾರವಾಗಿತ್ತು ಎಂದು ವರದಿಯಾಗಿದೆ.

ರಾಜ್ ಕುಂದ್ರಾ ಮತ್ತು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಅವರ ಸಹೋದರ ಇಬ್ಬರೂ ಸೇರಿ ಕೆನ್ರಿನ್ ಹೆಸರಿನ ಕಂಪನಿಯನ್ನು ಆರಂಭಿಸಿದ್ದರು. ನೀಲಿ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸಿ ನಂತರ ವಿ ಟ್ರಾನ್ಸ್‌ಫರ್ (ಫೈಲ್ ವರ್ಗಾವಣೆ ಸೇವೆ) ಮೂಲಕ ಅದು ಈ ಕಂಪನಿ ಸೇರುತ್ತಿತ್ತು. ಭಾರತದ ಸೈಬರ್ ಕಾನೂನಿಂದ ತಪ್ಪಿಸಿಕೊಳ್ಳಲು ಈ ಕಂಪನಿಯನ್ನು ವಿದೇಶದಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು.

ರಾಜ್ ಬಂಧನದ ನಂತರ, ಅಕ್ಟೋಬರ್​ನಲ್ಲಿ ನಡೆದ ಕೆಲವು ವಾಟ್ಸಾಪ್ ಚಾಟ್‌ಗಳು ಹೊರ ಬಂದಿವೆ. ಪಾರ್ನ್​ ಸಿನಿಮಾ ವ್ಯವಹಾರದಿಂದ ರಾಜ್ ಕುಂದ್ರಾ ಸಾಕಷ್ಟು ಹಣ ಸಂಪಾದಿಸಿದ್ದರು ಎಂಬುದು ಬಹಿರಂಗವಾಗಿದೆ. ‘ಎಚ್ ಅಕೌಂಟ್ಸ್’  ಹೆಸರಿನ ಗ್ರೂಪ್​ನ ಚಾಟ್​ಗಳು ಇವಾಗಿದೆ. ಇದರ ಅಡ್ಮಿನ್​ ರಾಜ್ ಕುಂದ್ರಾ. ಈ ಗ್ರೂಪ್​ನಲ್ಲಿ ರಾಜ್ ಅವರು ತಮ್ಮ ಸಂಬಂಧಿ ಮತ್ತು ಕೆನ್ರಿನ್ ಪ್ರೊಡಕ್ಷನ್ ಹೌಸ್ ಅಧ್ಯಕ್ಷ ಪ್ರದೀಪ್ ಭಕ್ಷಿ ಅವರೊಂದಿಗೆ ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಕಂಡು ಬಂದಿದೆ. ಸಿನಿಮಾದಿಂದ ದಿನಕ್ಕೆ ಲಕ್ಷಾಂತರ ರೂಪಾಯಿ ಹಣ ಬರುತ್ತಿತ್ತು ಎಂಬುದು ಚಾಟ್​ನಿಂದ ಗೊತ್ತಾಗಿದೆ.

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ. ಇದು ಪೊಲೀಸರಿಗೆ ಮಹತ್ವದ ದಾಖಲೆಯಾಗಿದೆ.

ಇದನ್ನೂ ಓದಿ: ‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

Raj Kundra: ಆ ಒಂದು ‘ಬಂಗಲೆ’ಯಿಂದಾಗಿ ರಾಜ್​ ಕುಂದ್ರಾ ಸಿಕ್ಕಿ ಹಾಕಿಕೊಂಡರಾ? ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ