AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು

ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು
ರಾಜ್​ ಕುಂದ್ರಾ
TV9 Web
| Edited By: |

Updated on: Jul 21, 2021 | 9:07 PM

Share

ಅಶ್ಲೀಲ ಸಿನಿಮಾ ಮಾಡಿ ಅದನ್ನು ವಿವಿಧ ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತಂತೆ! ಇದಲ್ಲದೆ, ಪಾರ್ನ್​ ವಿಡಿಯೋ ಲೈವ್​ ಸ್ಟ್ರೀಮಿಂಗ್​ಗೆ ಭವಿಷ್ಯದಲ್ಲಿ ಭಾರೀ ಬೇಡಿಕೆ ಬರಲಿದೆ ಎಂಬುದು ರಾಜ್​ ಕುಂದ್ರಾ ಲೆಕ್ಕಾಚಾರವಾಗಿತ್ತು ಎಂದು ವರದಿಯಾಗಿದೆ.

ರಾಜ್ ಕುಂದ್ರಾ ಮತ್ತು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಅವರ ಸಹೋದರ ಇಬ್ಬರೂ ಸೇರಿ ಕೆನ್ರಿನ್ ಹೆಸರಿನ ಕಂಪನಿಯನ್ನು ಆರಂಭಿಸಿದ್ದರು. ನೀಲಿ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸಿ ನಂತರ ವಿ ಟ್ರಾನ್ಸ್‌ಫರ್ (ಫೈಲ್ ವರ್ಗಾವಣೆ ಸೇವೆ) ಮೂಲಕ ಅದು ಈ ಕಂಪನಿ ಸೇರುತ್ತಿತ್ತು. ಭಾರತದ ಸೈಬರ್ ಕಾನೂನಿಂದ ತಪ್ಪಿಸಿಕೊಳ್ಳಲು ಈ ಕಂಪನಿಯನ್ನು ವಿದೇಶದಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು.

ರಾಜ್ ಬಂಧನದ ನಂತರ, ಅಕ್ಟೋಬರ್​ನಲ್ಲಿ ನಡೆದ ಕೆಲವು ವಾಟ್ಸಾಪ್ ಚಾಟ್‌ಗಳು ಹೊರ ಬಂದಿವೆ. ಪಾರ್ನ್​ ಸಿನಿಮಾ ವ್ಯವಹಾರದಿಂದ ರಾಜ್ ಕುಂದ್ರಾ ಸಾಕಷ್ಟು ಹಣ ಸಂಪಾದಿಸಿದ್ದರು ಎಂಬುದು ಬಹಿರಂಗವಾಗಿದೆ. ‘ಎಚ್ ಅಕೌಂಟ್ಸ್’  ಹೆಸರಿನ ಗ್ರೂಪ್​ನ ಚಾಟ್​ಗಳು ಇವಾಗಿದೆ. ಇದರ ಅಡ್ಮಿನ್​ ರಾಜ್ ಕುಂದ್ರಾ. ಈ ಗ್ರೂಪ್​ನಲ್ಲಿ ರಾಜ್ ಅವರು ತಮ್ಮ ಸಂಬಂಧಿ ಮತ್ತು ಕೆನ್ರಿನ್ ಪ್ರೊಡಕ್ಷನ್ ಹೌಸ್ ಅಧ್ಯಕ್ಷ ಪ್ರದೀಪ್ ಭಕ್ಷಿ ಅವರೊಂದಿಗೆ ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಕಂಡು ಬಂದಿದೆ. ಸಿನಿಮಾದಿಂದ ದಿನಕ್ಕೆ ಲಕ್ಷಾಂತರ ರೂಪಾಯಿ ಹಣ ಬರುತ್ತಿತ್ತು ಎಂಬುದು ಚಾಟ್​ನಿಂದ ಗೊತ್ತಾಗಿದೆ.

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ. ಇದು ಪೊಲೀಸರಿಗೆ ಮಹತ್ವದ ದಾಖಲೆಯಾಗಿದೆ.

ಇದನ್ನೂ ಓದಿ: ‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

Raj Kundra: ಆ ಒಂದು ‘ಬಂಗಲೆ’ಯಿಂದಾಗಿ ರಾಜ್​ ಕುಂದ್ರಾ ಸಿಕ್ಕಿ ಹಾಕಿಕೊಂಡರಾ? ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ