ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು

ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು
ರಾಜ್​ ಕುಂದ್ರಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 21, 2021 | 9:07 PM

ಅಶ್ಲೀಲ ಸಿನಿಮಾ ಮಾಡಿ ಅದನ್ನು ವಿವಿಧ ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತಂತೆ! ಇದಲ್ಲದೆ, ಪಾರ್ನ್​ ವಿಡಿಯೋ ಲೈವ್​ ಸ್ಟ್ರೀಮಿಂಗ್​ಗೆ ಭವಿಷ್ಯದಲ್ಲಿ ಭಾರೀ ಬೇಡಿಕೆ ಬರಲಿದೆ ಎಂಬುದು ರಾಜ್​ ಕುಂದ್ರಾ ಲೆಕ್ಕಾಚಾರವಾಗಿತ್ತು ಎಂದು ವರದಿಯಾಗಿದೆ.

ರಾಜ್ ಕುಂದ್ರಾ ಮತ್ತು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಅವರ ಸಹೋದರ ಇಬ್ಬರೂ ಸೇರಿ ಕೆನ್ರಿನ್ ಹೆಸರಿನ ಕಂಪನಿಯನ್ನು ಆರಂಭಿಸಿದ್ದರು. ನೀಲಿ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸಿ ನಂತರ ವಿ ಟ್ರಾನ್ಸ್‌ಫರ್ (ಫೈಲ್ ವರ್ಗಾವಣೆ ಸೇವೆ) ಮೂಲಕ ಅದು ಈ ಕಂಪನಿ ಸೇರುತ್ತಿತ್ತು. ಭಾರತದ ಸೈಬರ್ ಕಾನೂನಿಂದ ತಪ್ಪಿಸಿಕೊಳ್ಳಲು ಈ ಕಂಪನಿಯನ್ನು ವಿದೇಶದಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು.

ರಾಜ್ ಬಂಧನದ ನಂತರ, ಅಕ್ಟೋಬರ್​ನಲ್ಲಿ ನಡೆದ ಕೆಲವು ವಾಟ್ಸಾಪ್ ಚಾಟ್‌ಗಳು ಹೊರ ಬಂದಿವೆ. ಪಾರ್ನ್​ ಸಿನಿಮಾ ವ್ಯವಹಾರದಿಂದ ರಾಜ್ ಕುಂದ್ರಾ ಸಾಕಷ್ಟು ಹಣ ಸಂಪಾದಿಸಿದ್ದರು ಎಂಬುದು ಬಹಿರಂಗವಾಗಿದೆ. ‘ಎಚ್ ಅಕೌಂಟ್ಸ್’  ಹೆಸರಿನ ಗ್ರೂಪ್​ನ ಚಾಟ್​ಗಳು ಇವಾಗಿದೆ. ಇದರ ಅಡ್ಮಿನ್​ ರಾಜ್ ಕುಂದ್ರಾ. ಈ ಗ್ರೂಪ್​ನಲ್ಲಿ ರಾಜ್ ಅವರು ತಮ್ಮ ಸಂಬಂಧಿ ಮತ್ತು ಕೆನ್ರಿನ್ ಪ್ರೊಡಕ್ಷನ್ ಹೌಸ್ ಅಧ್ಯಕ್ಷ ಪ್ರದೀಪ್ ಭಕ್ಷಿ ಅವರೊಂದಿಗೆ ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಕಂಡು ಬಂದಿದೆ. ಸಿನಿಮಾದಿಂದ ದಿನಕ್ಕೆ ಲಕ್ಷಾಂತರ ರೂಪಾಯಿ ಹಣ ಬರುತ್ತಿತ್ತು ಎಂಬುದು ಚಾಟ್​ನಿಂದ ಗೊತ್ತಾಗಿದೆ.

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ. ಇದು ಪೊಲೀಸರಿಗೆ ಮಹತ್ವದ ದಾಖಲೆಯಾಗಿದೆ.

ಇದನ್ನೂ ಓದಿ: ‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

Raj Kundra: ಆ ಒಂದು ‘ಬಂಗಲೆ’ಯಿಂದಾಗಿ ರಾಜ್​ ಕುಂದ್ರಾ ಸಿಕ್ಕಿ ಹಾಕಿಕೊಂಡರಾ? ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!