AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು

ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು
ರಾಜ್​ ಕುಂದ್ರಾ
TV9 Web
| Edited By: |

Updated on: Jul 21, 2021 | 9:07 PM

Share

ಅಶ್ಲೀಲ ಸಿನಿಮಾ ಮಾಡಿ ಅದನ್ನು ವಿವಿಧ ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಈ ಬಂಧನದ ನಂತರ ಒಂದಾದಮೇಲೆ ಒಂದು ಸತ್ಯಗಳು ಹೊರ ಬೀಳುತ್ತಿವೆ.  

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತಂತೆ! ಇದಲ್ಲದೆ, ಪಾರ್ನ್​ ವಿಡಿಯೋ ಲೈವ್​ ಸ್ಟ್ರೀಮಿಂಗ್​ಗೆ ಭವಿಷ್ಯದಲ್ಲಿ ಭಾರೀ ಬೇಡಿಕೆ ಬರಲಿದೆ ಎಂಬುದು ರಾಜ್​ ಕುಂದ್ರಾ ಲೆಕ್ಕಾಚಾರವಾಗಿತ್ತು ಎಂದು ವರದಿಯಾಗಿದೆ.

ರಾಜ್ ಕುಂದ್ರಾ ಮತ್ತು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಅವರ ಸಹೋದರ ಇಬ್ಬರೂ ಸೇರಿ ಕೆನ್ರಿನ್ ಹೆಸರಿನ ಕಂಪನಿಯನ್ನು ಆರಂಭಿಸಿದ್ದರು. ನೀಲಿ ಚಿತ್ರಗಳನ್ನು ಭಾರತದಲ್ಲಿ ಚಿತ್ರೀಕರಿಸಿ ನಂತರ ವಿ ಟ್ರಾನ್ಸ್‌ಫರ್ (ಫೈಲ್ ವರ್ಗಾವಣೆ ಸೇವೆ) ಮೂಲಕ ಅದು ಈ ಕಂಪನಿ ಸೇರುತ್ತಿತ್ತು. ಭಾರತದ ಸೈಬರ್ ಕಾನೂನಿಂದ ತಪ್ಪಿಸಿಕೊಳ್ಳಲು ಈ ಕಂಪನಿಯನ್ನು ವಿದೇಶದಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು.

ರಾಜ್ ಬಂಧನದ ನಂತರ, ಅಕ್ಟೋಬರ್​ನಲ್ಲಿ ನಡೆದ ಕೆಲವು ವಾಟ್ಸಾಪ್ ಚಾಟ್‌ಗಳು ಹೊರ ಬಂದಿವೆ. ಪಾರ್ನ್​ ಸಿನಿಮಾ ವ್ಯವಹಾರದಿಂದ ರಾಜ್ ಕುಂದ್ರಾ ಸಾಕಷ್ಟು ಹಣ ಸಂಪಾದಿಸಿದ್ದರು ಎಂಬುದು ಬಹಿರಂಗವಾಗಿದೆ. ‘ಎಚ್ ಅಕೌಂಟ್ಸ್’  ಹೆಸರಿನ ಗ್ರೂಪ್​ನ ಚಾಟ್​ಗಳು ಇವಾಗಿದೆ. ಇದರ ಅಡ್ಮಿನ್​ ರಾಜ್ ಕುಂದ್ರಾ. ಈ ಗ್ರೂಪ್​ನಲ್ಲಿ ರಾಜ್ ಅವರು ತಮ್ಮ ಸಂಬಂಧಿ ಮತ್ತು ಕೆನ್ರಿನ್ ಪ್ರೊಡಕ್ಷನ್ ಹೌಸ್ ಅಧ್ಯಕ್ಷ ಪ್ರದೀಪ್ ಭಕ್ಷಿ ಅವರೊಂದಿಗೆ ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಕಂಡು ಬಂದಿದೆ. ಸಿನಿಮಾದಿಂದ ದಿನಕ್ಕೆ ಲಕ್ಷಾಂತರ ರೂಪಾಯಿ ಹಣ ಬರುತ್ತಿತ್ತು ಎಂಬುದು ಚಾಟ್​ನಿಂದ ಗೊತ್ತಾಗಿದೆ.

ಈ ಗ್ರೂಪ್​ನಲ್ಲಿ ಐದು ಜನರಿದ್ದಾರೆ. ಪ್ರದೀಪ್ ಮತ್ತು ರಾಜ್ ಕುಂದ್ರಾ ನಡುವೆ ವ್ಯವಹಾರದಲ್ಲಿನ ಗಳಿಕೆ, ಮಾರ್ಕೆಟಿಂಗ್ ತಂತ್ರ, ಅಶ್ಲೀಲ ಸಿನಿಮಾದಲ್ಲಿ ನಟಿಸಿದವರಿಗೆ ಸಂಭಾವನೆ ಸಿಕ್ಕಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಮುಕ್ತ ಚರ್ಚೆ ನಡೆದಿದೆ. ಇದು ಪೊಲೀಸರಿಗೆ ಮಹತ್ವದ ದಾಖಲೆಯಾಗಿದೆ.

ಇದನ್ನೂ ಓದಿ: ‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

Raj Kundra: ಆ ಒಂದು ‘ಬಂಗಲೆ’ಯಿಂದಾಗಿ ರಾಜ್​ ಕುಂದ್ರಾ ಸಿಕ್ಕಿ ಹಾಕಿಕೊಂಡರಾ? ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ