AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

Raj Kundra: ನೀಲಿ ಚಿತ್ರ ಕೇಸ್​ನಲ್ಲಿ ಪೊಲೀಸರ ಅತಿಥಿ ಆಗಿರುವ ರಾಜ್​ ಕುಂದ್ರಾಗೆ ಜಾಮೀನು ಪಡೆಯುವಲ್ಲಿ ಹಿನ್ನಡೆ ಆಗಿದೆ. ಮಂಗಳವಾರ (ಜು.27) ವಿಚಾರಣೆ ನಡೆಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿ ಇರಿಸಲು ಆದೇಶಿಸಲಾಗಿದೆ.

Breaking News: ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ
ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ
TV9 Web
| Edited By: |

Updated on:Jul 27, 2021 | 2:01 PM

Share

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದಲ್ಲಿ ಸಿಕ್ಕಿ ಬಿದ್ದಿರುವ ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್ ಕುಂದ್ರಾಗೆ ಸಂಕಷ್ಟ ಹೆಚ್ಚಿದೆ. ಜು.19ರಂದು ಅವರನ್ನು ಪೊಲೀಸರು ಬಂಧಿಸಿದ್ದರು. ಜು.27ರವರೆಗೆ ನ್ಯಾಯಾಲಯವು ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಿತ್ತು. ಮಂಗಳವಾರ (ಜು.27) ವಿಚಾರಣೆ ನಡೆಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿ (Judicial Custody) ಇರಿಸಲು ಆದೇಶಿಸಲಾಗಿದೆ. ನಟಿಯರು ಮತ್ತು ಮಾಡೆಲ್​ಗಳನ್ನು ಬಳಸಿಕೊಂಡು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬ ಆರೋಪದ ಮೇಲೆ ರಾಜ್ ಕುಂದ್ರಾ (Raj Kundra) ಬಂಧನವಾಗಿದೆ. ಜಾಮೀನು ಪಡೆಯಲು ಅವರು ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ.

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಮಾಡುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷಿ ಇವೆ ಎನ್ನಲಾಗಿದೆ. ಆದರೆ ತನಿಖೆಗೆ ರಾಜ್​ ಕುಂದ್ರಾ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ಅವಧಿ ವಿಸ್ತರಣೆ ಅನಿವಾರ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ. ರಾಜ್ ಕುಂದ್ರಾ ಜೊತೆ ಸಂಪರ್ಕ ಹೊಂದಿದ್ದ ಅನೇಕರ ಮೇಲೆ ಅನುಮಾನ ಮೂಡಿದೆ.

ನೀಲಿ ಚಿತ್ರ ದಂಧೆಗೆ ಸಂಬಂಧಿಸಿದಂತೆ ರಾಜ್​ ಕುಂದ್ರಾ ಮತ್ತು ಉಮೇಶ್​ ಕಾಮತ್ ಎಂಬುವವರ ನಡುವೆ ವಾಟ್ಸ್​ಆ್ಯಪ್​ ಚಾಟ್​ ನಡೆದಿತ್ತು. ಅದರಲ್ಲಿ ನಟಿ ಪ್ಲೋರಾ ಸೈನಿ ಬಗ್ಗೆಯೂ ಪ್ರಸ್ತಾಪ ಮಾಡಲಾಗಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಆದರೆ ರಾಜ್​ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಫ್ಲೋರಾ ಸೈನಿ ಸ್ಪಷ್ಟನೆ ನೀಡಿದ್ದಾರೆ.

‘ಇಬ್ಬರು ವ್ಯಕ್ತಿಗಳು ಅವರ ಚಾಟ್​ನಲ್ಲಿ ನನ್ನ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರೆ ಅವರ ಕೃತ್ಯದಲ್ಲಿ ನಾನೂ ಭಾಗಿ ಆಗಿದ್ದೇನೆ ಎಂದರ್ಥವಲ್ಲ. ನಾನು ಯಾವುದೇ ಸಿನಿಮಾ ಹಿನ್ನೆಲೆಯ ಕುಟುಂಬದಿಂದ ಬಂದವಳಲ್ಲ. ಹಾಗಾಗಿ ನನ್ನ ಹೆಸರನ್ನು ಇದರಲ್ಲಿ ಎಳೆದು ತರಲಾಗಿದೆ. ರಾಜ್​ ಕುಂದ್ರಾ ಅಥವಾ ಅವರ ಕಡೆಯವರು ನನ್ನನ್ನು ಯಾವತ್ತೂ ಭೇಟಿ ಆಗಿಲ್ಲ’ ಎಂದು ಅವರು ಹೇಳಿದ್ದಾರೆ.

ಹಲವು ಆಯಾಮಗಳಿಂದ ಈ ಪ್ರಕರಣವನ್ನು ತನಿಖೆ ಮಾಡಲಾಗುತ್ತಿದೆ. ಮುಂಬೈನಲ್ಲಿರುವ ಶಿಲ್ಪಾ ಶೆಟ್ಟಿ ಅವರ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಕೆಲವು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಪೊಲೀಸರ ಜೊತೆ ಮನೆಗೆ ಬಂದ ರಾಜ್​ ಕುಂದ್ರಾ ಎದುರು ಶಿಲ್ಪಾ ಶೆಟ್ಟಿ ಕಣ್ಣೀರಿಟ್ಟು ರಂಪಾಟ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಅಶ್ಲೀಲ ಸಿನಿಮಾ ದಂಧೆ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೊತೆ ಈ ಸುಂದರಿಯರಿಗೆ ಏನು ಸಂಬಂಧ?

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

Published On - 1:33 pm, Tue, 27 July 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ