AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ

Sherlyn Chopra: ರಾಜ್ ಕುಂದ್ರಾ ಬಳಿ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ನಟಿ  ಶೆರ್ಲಿನ್​ ಚೋಪ್ರಾ ಅವರಿಗೂ ಬಂಧನದ ಭಯ ಕಾಡುತ್ತಿದೆ. ಹಾಗಾಗಿ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ
ರಾಜ್​ ಕುಂದ್ರಾ- ಶೆರ್ಲಿನ್​ ಚೋಪ್ರಾ
TV9 Web
| Updated By: Digi Tech Desk|

Updated on:Jul 29, 2021 | 1:02 PM

Share

ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್ ಕುಂದ್ರಾ (Raj Kundra) ಮಾಡಿಕೊಂಡಿರುವ ಹಗರಣಗಳು ಒಂದೆರಡಲ್ಲ. ನೀಲಿ ಚಿತ್ರ ಕೇಸ್​ನಲ್ಲಿ ಪೊಲೀಸರ ಅತಿಥಿ ಆಗಿರುವ ಅವರ ಬಗ್ಗೆ ದಿನಕ್ಕೊಂದು ಹೊಸಹೊಸ ಶಾಕಿಂಗ್​ ಸತ್ಯಗಳು ಹೊರಬೀಳುತ್ತಿವೆ.​ ಸದ್ಯ ಜಾಮೀನು ಪಡೆಯುವಲ್ಲಿ ಅವರಿಗೆ ಹಿನ್ನಡೆ ಆಗಿದೆ. 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲು ನ್ಯಾಯಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ನಟಿ ಶೆರ್ಲಿನ್​ ಚೋಪ್ರಾ (Sherlyn Chopra)  ಅವರು ರಾಜ್​ ಕುಂದ್ರಾ ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಶಿಲ್ಪಾ ಶೆಟ್ಟಿಗೆ ಆಘಾತ ಮೂಡಿಸುವಂತಹ ಕೆಲವು ಮಾಹಿತಿಯನ್ನು ಶೆರ್ಲಿನ್​ ಚೋಪ್ರಾ ಬಹಿರಂಗಪಡಿಸಿದ್ದಾರೆ. 

ಏಪ್ರಿಲ್​ನಲ್ಲಿಯೇ ರಾಜ್​ ಕುಂದ್ರಾ ವಿರುದ್ಧ ಶೆರ್ಲಿನ್​ ಚೋಪ್ರಾ ದೂರು ನೀಡಿದ್ದರು. ಆ ದೂರಿನಲ್ಲಿ ರಾಜ್​ ಕುಂದ್ರಾ ಬಗ್ಗೆ ಹಲವು ಆರೋಪಗಳನ್ನು ಮಾಡಲಾಗಿದೆ. ‘2019ರ ಆರಂಭದಲ್ಲಿಯೇ ಒಂದು ಆ್ಯಪ್​ ಬ್ಯುಸಿನೆಸ್​ಗಾಗಿ ರಾಜ್​ ಕುಂದ್ರಾ ಅವರು ನನ್ನನ್ನು ಕರೆದಿದ್ದರು. ಮೀಟಿಂಗ್​ ಮುಗಿದ ಬಳಿಕ ಅವರು ನನ್ನ ಜೊತೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದರು. ಇದರಿಂದ ನಮ್ಮ ನಡುವೆ ಜಗಳ ಶುರುವಾಯಿತು’ ಎಂದು ದೂರಿನಲ್ಲಿ ಶೆರ್ಲಿನ್​ ಚೋಪ್ರಾ ತಿಳಿಸಿದ್ದಾರೆ.

‘ನಾನು ಬೇಡ ಎಂದು ವಿರೋಧಿಸಿದರೂ ಕೂಡ ರಾಜ್​ ಕುಂದ್ರಾ ಬಲವಂತವಾಗಿ ಕಿಸ್​ ಮಾಡಲು ಬಂದರು. ನನಗೆ ಭಯವಾಯಿತು. ಇದನ್ನೆಲ್ಲ ನಿಲ್ಲಿಸುವಂತೆ ಕೇಳಿಕೊಂಡೆ. ನಂತರ ಅವರನ್ನು ತಳ್ಳಿ ಎಸ್ಕೇಪ್​ ಆದೆ. ಶೌಚಾಲಯಕ್ಕೆ ತೆರಳಿ ಅಡಗಿಕೊಂಡೆ’ ಎಂದು ಶೆರ್ಲಿನ್​ ಚೋಪ್ರಾ ಹೇಳಿದ್ದಾರೆ. ‘ಶಿಲ್ಪಾ ಶೆಟ್ಟಿ ಜೊತೆ ನನ್ನ ಸಂಬಂಧ ಸರಿಯಿಲ್ಲ. ಹಾಗಾಗಿ ನಾನು ಸದಾ ಒತ್ತಡದಲ್ಲಿ ಇರುತ್ತೇನೆ’ ಎಂದು ಶರ್ಲಿನ್​​ ಬಳಿ ರಾಜ್​ ಕುಂದ್ರಾ ಹೇಳಿಕೊಂಡಿದ್ದರು ಎಂಬ ಸುದ್ದಿ ಈಗ ಬಹಿರಂಗ ಆಗಿದೆ.

ರಾಜ್ ಕುಂದ್ರಾ ಜೊತೆ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ಶೆರ್ಲಿನ್​ ಚೋಪ್ರಾ ಅವರಿಗೂ ಬಂಧನದ ಭಯ ಕಾಡುತ್ತಿದೆ. ಹಾಗಾಗಿ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ರಾಜ್​ ಕುಂದ್ರಾ ಅವರ ಬಗ್ಗೆ ಮೊದಲು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು ತಾವೇ ಎಂದು ಶೆರ್ಲಿನ್​ ಚೋಪ್ರಾ ಹೇಳುತ್ತಿದ್ದಾರೆ. ಹಲವು ಆಯಾಮಗಳಿಂದ ತನಿಖೆ ಮುಂದುವರಿದಿದ್ದು, ಅನೇಕ ನಟಿಯರ ಹೆಸರುಗಳು ಹೊರಬರುತ್ತಿವೆ. ಶಿಲ್ಪಾ ಶೆಟ್ಟಿಗೆ ಪೊಲೀಸರು ಇನ್ನೂ ಕ್ಲೀನ್ ಚಿಟ್ ಕೊಟ್ಟಿಲ್ಲ ಎಂಬ ಮಾಹಿತಿ ಕೂಡ ಕೇಳಿಬಂದಿದೆ.

ಇದನ್ನೂ ಓದಿ:

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆಯಲ್ಲಿ ಕನ್ನಡ ಸಿನಿಮಾ ನಟಿ ಹೆಸರು ಪ್ರಸ್ತಾಪ; ಅಸಲಿಯತ್ತು ಏನು?

Breaking News: ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

Published On - 12:12 pm, Thu, 29 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ