AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಿನಿಮಾ ದಂಧೆ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೊತೆ ಈ ಸುಂದರಿಯರಿಗೆ ಏನು ಸಂಬಂಧ?

ರಾಜ್​ ಕುಂದ್ರಾ ನಡೆಸುತ್ತಿದ್ದ ಅಶ್ಲೀಲ ಸಿನಿಮಾ ದಂಧೆಯಲ್ಲಿ ನಟಿ-ಮಾಡೆಲ್​ ಗೆಹನಾ ವಸಿಷ್ಠ ಕೂಡ ಅರೆಸ್ಟ್​ ಆಗಿದ್ದಾರೆ. ಈ ಬಗ್ಗೆ ಗೆಹನಾ ಪರ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಗೆಹನಾ ಬೋಲ್ಡ್​ ದೃಶ್ಯಗಳಲ್ಲಿ ನಟಿಸುತ್ತಿದ್ದರು.

ಅಶ್ಲೀಲ ಸಿನಿಮಾ ದಂಧೆ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೊತೆ ಈ ಸುಂದರಿಯರಿಗೆ ಏನು ಸಂಬಂಧ?
ಅಶ್ಲೀಲ ಸಿನಿಮಾ ದಂದೆ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೊತೆ ಈ ಸುಂದರಿಯರಿಗೆ ಏನು ಸಂಬಂಧ?
TV9 Web
| Edited By: |

Updated on:Jul 21, 2021 | 5:26 PM

Share

ಶಿಲ್ಪಾ ಶೆಟ್ಟಿ (Shilpa Shetty) ಪತಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಬಗ್ಗೆ ಶಾಕಿಂಗ್​ ಆದಂತಹ ವಿವರಗಳು ಹೊರಬರುತ್ತಲೇ ಇವೆ. ನೀಲಿ ಚಿತ್ರಗಳ ದಂಧೆಯಲ್ಲಿ ತೊಡಗಿಕೊಂಡ ಅವರೀಗ ಪೊಲೀಸರ ಅತಿಥಿ ಆಗಿದ್ದಾರೆ. ಅತ್ತ ಅವರು ಅರೆಸ್ಟ್​ ಆಗುತ್ತಿದ್ದಂತೆಯೇ ಅನೇಕ ನಟಿಯರ ಹೆಸರು ಕೂಡ ಹೊರಬರುತ್ತಿವೆ. ಅಶ್ಲೀಲ ಸಿನಿಮಾಗಳನ್ನು ತಯಾರಿಸಿ, ಆ್ಯಪ್​ಗಳ ಮೂಲಕ ಹಣ ಸಂಪಾದನೆ ಮಾಡುವ ಈ ಕೃತ್ಯದಲ್ಲಿ ಹಲವು ಸುಂದರಿಯರು ಭಾಗಿ ಆಗಿರುವ ಸಾಧ್ಯತೆ ದಟ್ಟವಾಗಿದೆ. ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ರಾಜ್​ ಕುಂದ್ರಾ ಜೊತೆ ಒಡನಾಟ ಹೊಂದಿದ್ದ ಅನೇಕ ನಟಿಯರು ಈಗ ಸುದ್ದಿ ಆಗುತ್ತಿದ್ದಾರೆ.

ಬಾಲಿವುಡ್​ ನಟಿ ಶರ್ಲಿನ್​ ಚೋಪ್ರಾ ಅವರು ಕೂಡ ನೀಲಿ ಚಿತ್ರಗಳ ದಂಧೆಯಲ್ಲಿ ಭಾಗಿ ಆಗಿದ್ದರು. ಈ ಬಗ್ಗೆ ಅವರನ್ನು ಪೊಲೀಸರು ಈ ಮೊದಲೇ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ರಾಜ್​ ಕುಂದ್ರಾ ಬಗ್ಗೆ ಶರ್ಲಿನ್​ ಚೋಪ್ರಾ ಬಾಯಿ ಬಿಟ್ಟಿದ್ದರು. ‘ಈ ದಂಧೆಗೆ ರಾಜ್​ ಕುಂದ್ರಾ ನನ್ನನ್ನು ನೂಕಿದರು’ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ. ಪ್ರತಿ ಪ್ರಾಜೆಕ್ಟ್​ನಲ್ಲಿ ಶರ್ಲಿನ್​ ಚೋಪ್ರಾಗೆ 30 ಲಕ್ಷ ರೂ. ಸಿಗುತ್ತಿತ್ತು. ಆ ರೀತಿ 15ರಿಂದ 30 ಪ್ರಾಜೆಕ್ಟ್​ಗಳಲ್ಲಿ ರಾಜ್​ ಕುಂದ್ರಾ ಜೊತೆ ಶರ್ಲಿನ್​ ಚೋಪ್ರಾ ಕೆಲಸ ಮಾಡಿದ್ದರು ಎಂಬುದು ಮೂಲಗಳ ಮಾಹಿತಿ.

2019ರಲ್ಲಿಯೇ ನಟಿ ಪೂನಂ ಪಾಂಡೆ ಮತ್ತು ರಾಜ್​ ಕುಂದ್ರಾ ನಡುವೆ ಕಿರಿಕ್​ ಆಗಿತ್ತು. ತಮ್ಮ ಮೊಬೈಲ್​ ಆ್ಯಪ್​ಗಾಗಿ ಪೂನಂ ಅವರು ರಾಜ್​ ಕುಂದ್ರಾ ಜೊತೆ ಕೈ ಜೋಡಿಸಿದ್ದರು. ಆದರೆ ಅವರಿಬ್ಬರ ವ್ಯವಹಾರದಲ್ಲಿ ಜಟಾಪಟಿ ಉಂಟಾಯಿತು. ತಮ್ಮ ಫೋಟೋ ಮತ್ತು ವಿಡಿಯೋಗಳನ್ನು ಅನುಮತಿ ಇಲ್ಲದೆ ರಾಜ್​ ಕುಂದ್ರಾ ಬಳಸಿಕೊಳ್ಳುತ್ತಿದ್ದಾರೆ ಎಂದು ಪೂನಂ ಪಾಂಡೆ ತಕರಾರು ತೆಗೆದಿದ್ದರು. ಪೂನಂ ಪಾಂಡೆ ಕೂಡ ಮಾದಕ​ ಫೋಟೋ ಮತ್ತು ವಿಡಿಯೋಗಳ ಮೂಲಕ ಜನಪ್ರಿಯರಾಗಿದ್ದಾರೆ.

ರಾಜ್​ ಕುಂದ್ರಾ ನಡೆಸುತ್ತಿದ್ದ ಅಶ್ಲೀಲ ಸಿನಿಮಾ ದಂಧೆಯಲ್ಲಿ ನಟಿ-ಮಾಡೆಲ್​ ಗೆಹನಾ ವಸಿಷ್ಠ ಕೂಡ ಅರೆಸ್ಟ್​ ಆಗಿದ್ದಾರೆ. ಈ ಬಗ್ಗೆ ಗೆಹನಾ ಪರ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಗೆಹನಾ ಬೋಲ್ಡ್​ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಅದನ್ನು ಅಶ್ಲೀಲ/ನೀಲಿ ಚಿತ್ರಗಳ ಜೊತೆ ಹೋಲಿಸಬಾರದು. ಮುಂಬೈ ಪೊಲೀಸರ ಮೇಲೆ ನಮಗೆ ನಂಬಿಕೆ ಇದೆ. ಯಾರು ನಿಜವಾದ ಅಪರಾಧಿಗಳು ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸದ್ಯ ಗೆಹನಾ ಜಾಮೀನು ಪಡೆದು ಹೊರಬಂದಿದ್ದಾರೆ.

ಇದನ್ನೂ ಓದಿ:

ಪಾರ್ನ್​ ದಂಧೆ ಆರೋಪ; ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ ಕುಂದ್ರಾ ಜುಲೈ 23ರವರೆಗೆ ಪೊಲೀಸ್ ಕಸ್ಟಡಿಗೆ

ಖ್ಯಾತ ನಟಿ ಶಿಲ್ಪಾ ಶೆಟ್ಟಿಗೆ ರಾಜ್​ ಕುಂದ್ರಾ ಸಿಕ್ಕಿದ್ದು ಹೇಗೆ? ಆ ಬಗ್ಗೆ ರಾಜ್​ನ ಮೊದಲ ಪತ್ನಿ ಕವಿತಾ ಏನೆಂದಿದ್ದರು?

Published On - 5:19 pm, Wed, 21 July 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?