AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆಯಲ್ಲಿ ಕನ್ನಡ ಸಿನಿಮಾ ನಟಿ ಹೆಸರು ಪ್ರಸ್ತಾಪ; ಅಸಲಿಯತ್ತು ಏನು?

Raj Kundra Case: ಸುದೀಪ್​ ನಾಯಕತ್ವದ ‘ನಮ್ಮಣ್ಣ’, ರವಿಚಂದ್ರನ್​ ಹಾಗೂ ಶಿವರಾಜ್​ಕುಮಾರ್​ ನಟನೆಯ ‘ಕೋದಂಡರಾಮ’ ಮುಂತಾದ ಸಿನಿಮಾಗಳಲ್ಲಿ ಫ್ಲೋರಾ ಸೈನಿ ಅಭಿನಯಿಸಿದ್ದಾರೆ. ಅವರ ಹೆಸರು ನೀಲಿ ಚಿತ್ರಗಳ ದಂಧೆಯ ವಿಷಯದಲ್ಲಿ ಪ್ರಸ್ತಾಪ ಆಗಲು ಕಾರಣ ಕೂಡ ಇದೆ.

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆಯಲ್ಲಿ ಕನ್ನಡ ಸಿನಿಮಾ ನಟಿ ಹೆಸರು ಪ್ರಸ್ತಾಪ; ಅಸಲಿಯತ್ತು ಏನು?
ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆಯಲ್ಲಿ ಕನ್ನಡ ಸಿನಿಮಾ ನಟಿ ಹೆಸರು ಪ್ರಸ್ತಾಪ; ಅಸಲಿಯತ್ತು ಏನು?
TV9 Web
| Edited By: |

Updated on:Jul 27, 2021 | 10:42 AM

Share

ಉದ್ಯಮಿ ರಾಜ್​ ಕುಂದ್ರಾ ಅವರು ತೊಡಗಿಕೊಂಡಿದ್ದಾರೆ ಎನ್ನಲಾದ ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಅನೇಕರ ಹೆಸರು ಕೇಳಿಬರುತ್ತಿದೆ. ನಟಿಯರನ್ನು ಮತ್ತು ಮಾಡೆಲ್​ಗಳನ್ನು ಬಳಸಿಕೊಂಡು ರಾಜ್​ಕುಂದ್ರಾ ನೀಲಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದರು ಎಂಬ ಆರೋಪ ಇದೆ. ಹಾಗಾಗಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ, ತನಿಖೆಗೆ ಒಳಪಡಿಸಿದ್ದಾರೆ. ಈ ನಡುವೆ ಹಲವು ನಟಿಯರ ಮೇಲೆ ಅನುಮಾನ ಮೂಡಿವಂತಾಗಿದೆ. ಅಚ್ಚರಿ ಎಂದರೆ, ಕನ್ನಡದ ಕೆಲವು ಚಿತ್ರಗಳಲ್ಲಿ ನಟಿಸಿರುವ ಫ್ಲೋರಾ ಸೈನಿ ಹೆಸರನ್ನು ಕೂಡ ಈಗ ಎಳೆದು ತರಲಾಗಿದೆ.

ಸುದೀಪ್​ ನಾಯಕತ್ವದ ‘ನಮ್ಮಣ್ಣ’, ರವಿಚಂದ್ರನ್​ ಹಾಗೂ ಶಿವರಾಜ್​ಕುಮಾರ್​ ನಟನೆಯ ‘ಕೋದಂಡರಾಮ’ ಮುಂತಾದ ಸಿನಿಮಾಗಳಲ್ಲಿ ಫ್ಲೋರಾ ಸೈನಿ (ಆಶಾ ಸೈನಿ) ಅಭಿನಯಿಸಿದ್ದಾರೆ. ಹಿಂದಿ, ತೆಲುಗು, ತಮಿಳು ಮತ್ತು ಪಂಜಾಬಿ ಸಿನಿಮಾ ಪ್ರೇಕ್ಷಕರಿಗೂ ಅವರು ಪರಿಚಿತ. ಅವರ ಹೆಸರು ನೀಲಿ ಚಿತ್ರಗಳ ದಂಧೆಯ ವಿಷಯದಲ್ಲಿ ಪ್ರಸ್ತಾಪ ಆಗಲು ಕಾರಣವಾಗಿರುವುದು ರಾಜ್​ ಕುಂದ್ರಾ ಮತ್ತು ಉಮೇಶ್​ ಕಾಮತ್​ ಎಂಬುವವರ ನಡುವೆ ನಡೆದ ವಾಟ್ಸ್​ಆ್ಯಪ್​ ಚಾಟ್​!

ರಾಜ್​ ಕುಂದ್ರಾ ಮತ್ತು ಉಮೇಶ್​ ಕಾಮತ್ ವಿನಿಮಯ ಮಾಡಿಕೊಂಡಿರುವ ಮೆಸೇಜ್​ಗಳಲ್ಲಿ ಫ್ಲೋರಾ ಸೈನಿ ಬಗ್ಗೆ ಚರ್ಚೆ ಮಾಡಲಾಗಿತ್ತು. ಹಾಗಾಗಿ ಫ್ಲೋರಾ ಕೂಡ ಇವರ ಗ್ಯಾಂಗ್​ನಲ್ಲಿ ಇರಬಹುದು ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. ಅದಕ್ಕೆ ಫ್ಲೋರಾ ಸ್ಪಷ್ಟನೆ ನೀಡಿದ್ದಾರೆ. ‘ನಾನು ಸುಮ್ಮನೆ ಮೌನವಾಗಿದ್ದರೆ, ನಾನು ಏನೋ ಮುಚ್ಚಿಡುತ್ತಿದ್ದೇನೆ ಎಂದು ಜನರು ಊಹಿಸುತ್ತಾರೆ. ಇಬ್ಬರು ವ್ಯಕ್ತಿಗಳು ಅವರ ಚಾಟ್​ನಲ್ಲಿ ನನ್ನ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರೆ ಅವರ ಕೃತ್ಯದಲ್ಲಿ ನಾನೂ ಭಾಗಿ ಆಗಿದ್ದೇನೆ ಎಂದರ್ಥವಲ್ಲ’ ಎಂದು ಫ್ಲೋರಾ ಸೈನಿ ಹೇಳಿದ್ದಾರೆ.

View this post on Instagram

A post shared by Flora Saini (@florasaini)

‘ನಾನು ಯಾವುದೇ ಸಿನಿಮಾ ಹಿನ್ನೆಲೆಯ ಕುಟುಂಬದಿಂದ ಬಂದವಳಲ್ಲ. ಹಾಗಾಗಿ ನನ್ನ ಹೆಸರನ್ನು ಇದರಲ್ಲಿ ಎಳೆದು ತರಲಾಗಿದೆ. ಇದರಿಂದ ನನ್ನ ಹೆಸರು ಕೆಡಿಸಲು ಸಾಧ್ಯವಿಲ್ಲ. ರಾಜ್​ ಕುಂದ್ರಾ ಅಥವಾ ಅವರ ಕಡೆಯವರು ನನ್ನನ್ನು ಯಾವತ್ತೂ ಭೇಟಿ ಆಗಿಲ್ಲ. ಒಂದು ವೇಳೆ ಅವರು ನನಗೆ ಆಫರ್​ ನೀಡಿದ್ದರೂ ಕೂಡ ನಾನು ಒಪ್ಪಿಕೊಳ್ಳುತ್ತಿರಲಿಲ್ಲ. ಯಾಕೆಂದರೆ ಈ ರೀತಿಯ ಹೊಸ ಪ್ಲಾಟ್​ಫಾರ್ಮ್​ಗಳಲ್ಲಿ ನಾನು ನಟಿಸುತ್ತಿಲ್ಲ’ ಎಂದು ಫ್ಲೋರಾ ಸೈನಿ ಹೇಳಿದ್ದಾರೆ.

ಇದನ್ನೂ ಓದಿ:

ಅಶ್ಲೀಲ ಸಿನಿಮಾ ದಂಧೆ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೊತೆ ಈ ಸುಂದರಿಯರಿಗೆ ಏನು ಸಂಬಂಧ?

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

Published On - 8:10 am, Tue, 27 July 21

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು