AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆಯಲ್ಲಿ ಕನ್ನಡ ಸಿನಿಮಾ ನಟಿ ಹೆಸರು ಪ್ರಸ್ತಾಪ; ಅಸಲಿಯತ್ತು ಏನು?

Raj Kundra Case: ಸುದೀಪ್​ ನಾಯಕತ್ವದ ‘ನಮ್ಮಣ್ಣ’, ರವಿಚಂದ್ರನ್​ ಹಾಗೂ ಶಿವರಾಜ್​ಕುಮಾರ್​ ನಟನೆಯ ‘ಕೋದಂಡರಾಮ’ ಮುಂತಾದ ಸಿನಿಮಾಗಳಲ್ಲಿ ಫ್ಲೋರಾ ಸೈನಿ ಅಭಿನಯಿಸಿದ್ದಾರೆ. ಅವರ ಹೆಸರು ನೀಲಿ ಚಿತ್ರಗಳ ದಂಧೆಯ ವಿಷಯದಲ್ಲಿ ಪ್ರಸ್ತಾಪ ಆಗಲು ಕಾರಣ ಕೂಡ ಇದೆ.

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆಯಲ್ಲಿ ಕನ್ನಡ ಸಿನಿಮಾ ನಟಿ ಹೆಸರು ಪ್ರಸ್ತಾಪ; ಅಸಲಿಯತ್ತು ಏನು?
ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ದಂಧೆಯಲ್ಲಿ ಕನ್ನಡ ಸಿನಿಮಾ ನಟಿ ಹೆಸರು ಪ್ರಸ್ತಾಪ; ಅಸಲಿಯತ್ತು ಏನು?
TV9 Web
| Updated By: Digi Tech Desk|

Updated on:Jul 27, 2021 | 10:42 AM

Share

ಉದ್ಯಮಿ ರಾಜ್​ ಕುಂದ್ರಾ ಅವರು ತೊಡಗಿಕೊಂಡಿದ್ದಾರೆ ಎನ್ನಲಾದ ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಅನೇಕರ ಹೆಸರು ಕೇಳಿಬರುತ್ತಿದೆ. ನಟಿಯರನ್ನು ಮತ್ತು ಮಾಡೆಲ್​ಗಳನ್ನು ಬಳಸಿಕೊಂಡು ರಾಜ್​ಕುಂದ್ರಾ ನೀಲಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದರು ಎಂಬ ಆರೋಪ ಇದೆ. ಹಾಗಾಗಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ, ತನಿಖೆಗೆ ಒಳಪಡಿಸಿದ್ದಾರೆ. ಈ ನಡುವೆ ಹಲವು ನಟಿಯರ ಮೇಲೆ ಅನುಮಾನ ಮೂಡಿವಂತಾಗಿದೆ. ಅಚ್ಚರಿ ಎಂದರೆ, ಕನ್ನಡದ ಕೆಲವು ಚಿತ್ರಗಳಲ್ಲಿ ನಟಿಸಿರುವ ಫ್ಲೋರಾ ಸೈನಿ ಹೆಸರನ್ನು ಕೂಡ ಈಗ ಎಳೆದು ತರಲಾಗಿದೆ.

ಸುದೀಪ್​ ನಾಯಕತ್ವದ ‘ನಮ್ಮಣ್ಣ’, ರವಿಚಂದ್ರನ್​ ಹಾಗೂ ಶಿವರಾಜ್​ಕುಮಾರ್​ ನಟನೆಯ ‘ಕೋದಂಡರಾಮ’ ಮುಂತಾದ ಸಿನಿಮಾಗಳಲ್ಲಿ ಫ್ಲೋರಾ ಸೈನಿ (ಆಶಾ ಸೈನಿ) ಅಭಿನಯಿಸಿದ್ದಾರೆ. ಹಿಂದಿ, ತೆಲುಗು, ತಮಿಳು ಮತ್ತು ಪಂಜಾಬಿ ಸಿನಿಮಾ ಪ್ರೇಕ್ಷಕರಿಗೂ ಅವರು ಪರಿಚಿತ. ಅವರ ಹೆಸರು ನೀಲಿ ಚಿತ್ರಗಳ ದಂಧೆಯ ವಿಷಯದಲ್ಲಿ ಪ್ರಸ್ತಾಪ ಆಗಲು ಕಾರಣವಾಗಿರುವುದು ರಾಜ್​ ಕುಂದ್ರಾ ಮತ್ತು ಉಮೇಶ್​ ಕಾಮತ್​ ಎಂಬುವವರ ನಡುವೆ ನಡೆದ ವಾಟ್ಸ್​ಆ್ಯಪ್​ ಚಾಟ್​!

ರಾಜ್​ ಕುಂದ್ರಾ ಮತ್ತು ಉಮೇಶ್​ ಕಾಮತ್ ವಿನಿಮಯ ಮಾಡಿಕೊಂಡಿರುವ ಮೆಸೇಜ್​ಗಳಲ್ಲಿ ಫ್ಲೋರಾ ಸೈನಿ ಬಗ್ಗೆ ಚರ್ಚೆ ಮಾಡಲಾಗಿತ್ತು. ಹಾಗಾಗಿ ಫ್ಲೋರಾ ಕೂಡ ಇವರ ಗ್ಯಾಂಗ್​ನಲ್ಲಿ ಇರಬಹುದು ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. ಅದಕ್ಕೆ ಫ್ಲೋರಾ ಸ್ಪಷ್ಟನೆ ನೀಡಿದ್ದಾರೆ. ‘ನಾನು ಸುಮ್ಮನೆ ಮೌನವಾಗಿದ್ದರೆ, ನಾನು ಏನೋ ಮುಚ್ಚಿಡುತ್ತಿದ್ದೇನೆ ಎಂದು ಜನರು ಊಹಿಸುತ್ತಾರೆ. ಇಬ್ಬರು ವ್ಯಕ್ತಿಗಳು ಅವರ ಚಾಟ್​ನಲ್ಲಿ ನನ್ನ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರೆ ಅವರ ಕೃತ್ಯದಲ್ಲಿ ನಾನೂ ಭಾಗಿ ಆಗಿದ್ದೇನೆ ಎಂದರ್ಥವಲ್ಲ’ ಎಂದು ಫ್ಲೋರಾ ಸೈನಿ ಹೇಳಿದ್ದಾರೆ.

View this post on Instagram

A post shared by Flora Saini (@florasaini)

‘ನಾನು ಯಾವುದೇ ಸಿನಿಮಾ ಹಿನ್ನೆಲೆಯ ಕುಟುಂಬದಿಂದ ಬಂದವಳಲ್ಲ. ಹಾಗಾಗಿ ನನ್ನ ಹೆಸರನ್ನು ಇದರಲ್ಲಿ ಎಳೆದು ತರಲಾಗಿದೆ. ಇದರಿಂದ ನನ್ನ ಹೆಸರು ಕೆಡಿಸಲು ಸಾಧ್ಯವಿಲ್ಲ. ರಾಜ್​ ಕುಂದ್ರಾ ಅಥವಾ ಅವರ ಕಡೆಯವರು ನನ್ನನ್ನು ಯಾವತ್ತೂ ಭೇಟಿ ಆಗಿಲ್ಲ. ಒಂದು ವೇಳೆ ಅವರು ನನಗೆ ಆಫರ್​ ನೀಡಿದ್ದರೂ ಕೂಡ ನಾನು ಒಪ್ಪಿಕೊಳ್ಳುತ್ತಿರಲಿಲ್ಲ. ಯಾಕೆಂದರೆ ಈ ರೀತಿಯ ಹೊಸ ಪ್ಲಾಟ್​ಫಾರ್ಮ್​ಗಳಲ್ಲಿ ನಾನು ನಟಿಸುತ್ತಿಲ್ಲ’ ಎಂದು ಫ್ಲೋರಾ ಸೈನಿ ಹೇಳಿದ್ದಾರೆ.

ಇದನ್ನೂ ಓದಿ:

ಅಶ್ಲೀಲ ಸಿನಿಮಾ ದಂಧೆ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೊತೆ ಈ ಸುಂದರಿಯರಿಗೆ ಏನು ಸಂಬಂಧ?

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

Published On - 8:10 am, Tue, 27 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ