AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಅವರು ಬಾಲಿವುಡ್​ಗೆ ಹೊಸಬರೇನೂ ಅಲ್ಲ. ಬೇವಫಾ, ಜೆಹರ್​ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ, ಶಮಿತಾ ಶೆಟ್ಟಿ
TV9 Web
| Updated By: ಮದನ್​ ಕುಮಾರ್​|

Updated on: Jul 23, 2021 | 2:34 PM

Share

ನೀಲಿ ಚಿತ್ರಗಳ ನಿರ್ಮಾಣದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ರಾಜ್​ ಕುಂದ್ರಾ (Raj Kundra) ಬಗ್ಗೆ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಶಿಲ್ಪಾ ಶೆಟ್ಟಿ (Shilpa Shetty) ಪತಿ ಎಂಬ ಕಾರಣಕ್ಕೆ ಸಿಕ್ಕಾಪಟ್ಟೆ ಫೇಮಸ್​ ಆಗಿದ್ದರು ಉದ್ಯಮಿ ರಾಜ್​ ಕುಂದ್ರಾ. ಹಲವು ಬ್ಯುಸಿನೆಸ್​ಗಳನ್ನು ಹೊಂದಿದ್ದ ಅವರು ನೀಲಿ ಚಿತ್ರಗಳ ದಂಧೆಗೆ ಇಳಿದಿದ್ದು ಇಡೀ ಚಿತ್ರರಂಗಕ್ಕೆ ಶಾಕ್​ ನೀಡಿದೆ. ಅವರ ಜೊತೆ ಅನೇಕ ಮಾಡೆಲ್​ಗಳು ಮತ್ತು ನಟಿಯರು ಸಂಪರ್ಕ ಹೊಂದಿದ್ದರು. ಆ ಪೈಕಿ ಹಲವರು ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ (Shamita Shetty) ಜೊತೆಗೂ ಸಿನಿಮಾ ಮಾಡಲು ರಾಜ್​ ಕುಂದ್ರಾ ಪ್ಲ್ಯಾನ್ ಮಾಡಿದ್ದರು ಎಂಬ ವಿಷಯ ಈಗ ಬಹಿರಂಗ ಆಗಿದೆ.

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಅವರು ಬಾಲಿವುಡ್​ಗೆ ಹೊಸಬರೇನೂ ಅಲ್ಲ. ಬೇವಫಾ, ಜೆಹರ್​ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ 2008ರ ನಂತರ ಅವರು ಚಿತ್ರರಂಗದಲ್ಲಿ ಸಕ್ರಿಯವಾಗಿಲ್ಲ. ಅವರ ಜೊತೆ ಒಂದು ಸಿನಿಮಾ ಮಾಡಲು ರಾಜ್​ ಕುಂದ್ರಾ ಪ್ಲ್ಯಾನ್​ ಮಾಡಿದ್ದರು ಎಂಬ ವಿಚಾರವನ್ನು ನಟಿ ಗೆಹನಾ ವಸಿಷ್ಠ ಬಾಯಿ ಬಿಟ್ಟಿದ್ದಾರೆ. ನೀಲಿ ಚಿತ್ರಗಳ ನಿರ್ಮಾಣದಲ್ಲಿ ಗೆಹನಾ ವಸಿಷ್ಠ ಕೂಡ ಭಾಗಿ ಆಗಿದ್ದರು ಎಂಬ ಗಂಭೀರ ಆರೋಪ ಇದೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ವಿಚಾರವನ್ನು ಗೆಹನಾ ಬಹಿರಂಗಪಡಿಸಿದ್ದಾರೆ. ‘ರಾಜ್​ ಕುಂದ್ರಾ ಅರೆಸ್ಟ್​ ಆಗುವುದಕ್ಕಿಂತ ಕೆಲವೇ ದಿನಗಳ ಮುನ್ನ ನಾನು ಅವರು ಆಫೀಸ್​ಗೆ ಹೋಗಿದ್ದೆ. ಅವರು ಬಾಲಿಫೇಮ್​ ಎಂಬ ಹೊಸ ಆ್ಯಪ್​ ಲಾಂಚ್​ ಮಾಡಲು ಪ್ಲ್ಯಾನ್​ ರೂಪಿಸಿದ್ದಾರೆ ಎಂಬುದು ನನಗೆ ಆಗ ಗೊತ್ತಾಯಿತು. ಆ ಆ್ಯಪ್​ಗಾಗಿ ಸಿನಿಮಾ, ಚಾಟ್​ ಶೋ, ರಿಯಾಲಿಟಿ ಶೋ, ಮ್ಯೂಸಿಕ್​ ವಿಡಿಯೋಗಳನ್ನು ತಯಾರಿಸುವ ಐಡಿಯಾ ಇತ್ತು. ಹಲವು ಸ್ಕ್ರಿಪ್ಟ್​ಗಳ ಬಗ್ಗೆ ನಾವು ಚರ್ಚೆ ಮಾಡಿದ್ವಿ. ಆ ಪೈಕಿ ಒಂದು ಸಿನಿಮಾದಲ್ಲಿ ಶಮಿತಾ ಶೆಟ್ಟಿ ನಟಿಸುವುದು ಎಂದು ಪ್ಲ್ಯಾನ್​ ಆಗಿತ್ತು’ ಅಂತ ಗೆಹನಾ ವಸಿಷ್ಠ ಹೇಳಿದ್ದಾರೆ.

ಅನೇಕ ನಟಿಯರನ್ನು ಮತ್ತು ಮಾಡೆಲ್​ಗಳನ್ನು ಬಳಸಿಕೊಂಡು ರಾಜ್​ ಕುಂದ್ರಾ ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷ್ಯಗಳು ಇವೆ ಎನ್ನಲಾಗಿದೆ. ಆದರೂ ಕೂಡ ರಾಜ್ ಕುಂದ್ರಾ ಈ ಆರೋಪಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಅವರು ಹೊಸ ವಾದವನ್ನು ಮಾಡುತ್ತಿದ್ದಾರೆ. ‘ನಾನು ಮಾಡಿದ್ದು ನೀಲಿ ಚಿತ್ರಗಳಲ್ಲ. ಅವು ಬರೀ ಕಾಮೋದ್ರೇಕ (Erotic) ಸಿನಿಮಾಗಳು’ ಎಂದು ರಾಜ್​ ಕುಂದ್ರಾ ಹೇಳುತ್ತಿದ್ದಾರೆ. ಈ ವಾದವನ್ನು ನ್ಯಾಯಾಲಯ ಯಾವ ರೀತಿ ಒಪ್ಪಲಿದೆ ಎಂಬ ಕೌತುಕ ಈಗ ಮೂಡಿದೆ.

ಇದನ್ನೂ ಓದಿ:

ಅಶ್ಲೀಲ ಸಿನಿಮಾ ದಂಧೆ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೊತೆ ಈ ಸುಂದರಿಯರಿಗೆ ಏನು ಸಂಬಂಧ?

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ