AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮಾಡಿದ್ದು ನೀಲಿ ಚಿತ್ರ ಅಲ್ಲ, ಕಾಮೋದ್ರೇಕದ ಸಿನಿಮಾ ಮಾತ್ರ’: ರಾಜ್​ ಕುಂದ್ರಾ

ನಟಿಯರನ್ನು ಮತ್ತು ಮಾಡೆಲ್​ಗಳನ್ನು ಬಳಸಿಕೊಂಡು ರಾಜ್​ ಕುಂದ್ರಾ ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷ್ಯಗಳು ಇವೆ ಎನ್ನಲಾಗಿದೆ. ಆದರೂ ಕೂಡ ರಾಜ್ ಕುಂದ್ರಾ ಈ ಆರೋಪಗಳನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ.

‘ನಾನು ಮಾಡಿದ್ದು ನೀಲಿ ಚಿತ್ರ ಅಲ್ಲ, ಕಾಮೋದ್ರೇಕದ ಸಿನಿಮಾ ಮಾತ್ರ’: ರಾಜ್​ ಕುಂದ್ರಾ
ರಾಜ್​ ಕುಂದ್ರಾ
TV9 Web
| Edited By: |

Updated on: Jul 23, 2021 | 1:41 PM

Share

ನೀಲಿ ಚಿತ್ರಗಳ (Porn) ನಿರ್ಮಾಣ ದಂಧೆಯಲ್ಲಿ ತೊಡಗಿದ್ದ ಆರೋಪವನ್ನು ಎದುರಿಸುತ್ತಿರುವ ಉದ್ಯಮಿ, ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಹಲವು ಬಗೆಯಲ್ಲಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಜು.19ರಿಂದ ಜು.23ರವರೆಗೆ ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ಆದರೆ ತನಿಖೆ ಸಂದರ್ಭದಲ್ಲಿ ರಾಜ್​ ಕುಂದ್ರಾ (Raj Kundra) ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಶುಕ್ರವಾರಕ್ಕೆ (ಜು.23) ಅವರ ಕಸ್ಟಡಿ ಅವಧಿ ಮುಗಿಯಲಿದೆ. ಆದರೆ ತನಿಖೆಗೆ ಸೂಕ್ತ ಸಹಕಾರ ನೀಡದ ಕಾರಣ ಇನ್ನಷ್ಟು ದಿನಗಳ ಕಾಲ ಅವರನ್ನು ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳುವ ಸಾಧ್ಯತೆ ದಟ್ಟವಾಗಿದೆ.

ಅನೇಕ ನಟಿಯರನ್ನು ಮತ್ತು ಮಾಡೆಲ್​ಗಳನ್ನು ಬಳಸಿಕೊಂಡು ರಾಜ್​ ಕುಂದ್ರಾ ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷ್ಯಗಳು ಇವೆ ಎನ್ನಲಾಗಿದೆ. ಆದರೂ ಕೂಡ ರಾಜ್ ಕುಂದ್ರಾ ಈ ಆರೋಪಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಅವರು ಹೊಸ ವಾದವನ್ನು ಮಾಡುತ್ತಿದ್ದಾರೆ. ‘ನಾನು ಮಾಡಿದ್ದು ನೀಲಿ ಚಿತ್ರಗಳಲ್ಲ. ಅವು ಬರೀ ಕಾಮೋದ್ರೇಕ (Erotic) ಸಿನಿಮಾಗಳು’ ಎಂದು ರಾಜ್​ ಕುಂದ್ರಾ ಹೇಳುತ್ತಿದ್ದಾರೆ. ಈ ವಾದವನ್ನು ನ್ಯಾಯಾಲಯ ಯಾವ ರೀತಿ ಒಪ್ಪಲಿದೆ ಎಂಬ ಕೌತುಕ ಈಗ ಮೂಡಿದೆ.

ರಾಜ್​ ಕುಂದ್ರಾ ನಡೆಸುತ್ತಿದ್ದರು ಎನ್ನಲಾದ ಅಶ್ಲೀಲ ಸಿನಿಮಾ ದಂಧೆಯಲ್ಲಿ ನಟಿ-ಮಾಡೆಲ್​ ಗೆಹನಾ ವಸಿಷ್ಠ ಕೂಡ ಅರೆಸ್ಟ್​ ಆಗಿದ್ದರು. ಈ ಬಗ್ಗೆ ಗೆಹನಾ ಪರ ವಕ್ತಾರರು ಕೆಲವೇ ದಿನಗಳ ಹಿಂದೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ಗೆಹನಾ ಬೋಲ್ಡ್​ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಅದನ್ನು ಅಶ್ಲೀಲ ಅಥವಾ ನೀಲಿ ಚಿತ್ರಗಳ ಜೊತೆ ಹೋಲಿಸಬಾರದು. ಮುಂಬೈ ಪೊಲೀಸರ ಮೇಲೆ ನಮಗೆ ನಂಬಿಕೆ ಇದೆ. ಯಾರು ನಿಜವಾದ ಅಪರಾಧಿಗಳು ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಸದ್ಯ ಗೆಹನಾ ವಸಿಷ್ಠ ಜಾಮೀನು ಪಡೆದು ಹೊರಬಂದಿದ್ದಾರೆ. ಗೆಹನಾ ಮತ್ತು ರಾಜ್​ ಕುಂದ್ರಾ ಅವರು ಈ ಸಿನಿಮಾಗಳನ್ನು ನೀಲಿ ಚಿತ್ರ ಅಥವಾ ಅಶ್ಲೀಲ ಸಿನಿಮಾ ಎಂದು ಒಪ್ಪಿಕೊಳ್ಳುವ ಬದಲು ಮಾದಕ ಅಥವಾ ಕಾಮೋದ್ರೇಕಿಸುವ ಸಿನಿಮಾಗಳು ಎನ್ನುತ್ತಿದ್ದಾರೆ.

ಇದನ್ನೂ ಓದಿ:

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ