AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾಗೆ ಇನ್ನಷ್ಟು ದಿನ ಜೈಲೇ ಗತಿ; ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಮರೀಚಿಕೆಯಾದ ಜಾಮೀನು

Raj Kundra: ರಾಜ್ ಕುಂದ್ರಾಗೆ ಬ್ರಿಟಿಷ್​ ಪೌರತ್ವ ಇದೆ. ಹಾಗಾಗಿ ಜಾಮೀನು ಸಿಕ್ಕರೆ ಅವರು ದೇಶ ಬಿಟ್ಟು ಹೋಗುವ ಸಾಧ್ಯತೆ ದಟ್ಟವಾಗಿದೆ. ಅರೆಸ್ಟ್​ ಆಗುವುದಕ್ಕಿಂತ ಮುನ್ನ ಅವರು ಹಲವು ಸಾಕ್ಷಿಗಳನ್ನು ನಾಶ ಮಾಡಿದ್ದರು ಎಂಬ ಮಾಹಿತಿ ಇದೆ.

ರಾಜ್​ ಕುಂದ್ರಾಗೆ ಇನ್ನಷ್ಟು ದಿನ ಜೈಲೇ ಗತಿ; ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಮರೀಚಿಕೆಯಾದ ಜಾಮೀನು
ರಾಜ್​ ಕುಂದ್ರಾ
TV9 Web
| Edited By: |

Updated on: Aug 11, 2021 | 12:37 PM

Share

ನೀಲಿ ಸಿನಿಮಾಗಳ ನಿರ್ಮಾಣದ ದಂಧೆಯಲ್ಲಿ ತೊಡಗಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಉದ್ಯಮಿ ಕುಂದ್ರಾರಾಜ್​ಗೆ (Raj Kundra) ಸಂಕಷ್ಟ ಹೆಚ್ಚುತ್ತಿದೆ. ಜಾಮೀನು ಪಡೆಯಲು ಅವರು ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ. ಜುಲೈ 19ರಿಂದಲೂ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಬುಧವಾರ (ಆ.11) ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗಲಿದೆ. ಮುಂದೇನು ಎಂದು ಕಾದಿದ್ದ ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್​ ಕುಂದ್ರಾಗೆ ಮತ್ತೊಂದು ಆಘಾತ ಎದುರಾಗಿದೆ. ಅವರ ಜಾಮೀನು ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯ ಮುಂದೂಡಿದೆ!

ಜಾಮೀನಿಗಾಗಿ ರಾಜ್​ ಕುಂದ್ರಾ ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್​ ಸ್ವೀಕರಿಸಿ ಇಂದು ವಿಚಾರಣೆ ನಡೆಸಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಅರ್ಜಿ ವಿಚಾರಣೆಯನ್ನು ಆ.20ಕ್ಕೆ ನ್ಯಾಯಾಲಯ ಮುಂದೂಡಿದೆ. ಹಾಗಾಗಿ ಅಲ್ಲಿಯವರೆಗೆ ರಾಜ್​ ಕುಂದ್ರಾಗೆ ಜೈಲೇ ಗತಿಯಾಗಿದೆ. ಇಷ್ಟು ಬೇಗ ಅವರಿಗೆ ಜಾಮೀನು ನೀಡಬಾರದು ಎಂಬುದಕ್ಕೆ ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು 19 ಕಾರಣಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಪೊಲೀಸರ ವಿಚಾರಣೆಗೆ ರಾಜ್​ ಕುಂದ್ರಾ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ. ಹಾಗಾಗಿ ತನಿಖೆ ವಿಳಂಬ ಆಗುತ್ತಿದೆ. ಅಶ್ಲೀಲ ಸಿನಿಮಾ ದಂಧೆಯಲ್ಲಿ ಸಿಕ್ಕಿಕೊಂಡ ಹಲವು ಸಂತ್ರಸ್ತರು ಹೇಳಿಕೆ ನೀಡಲು ಮುಂದೆಬರುತ್ತಿದ್ದು, ಅವರಿಂದ ಸಾಕ್ಷಿ ಸಂಗ್ರಹಿಸುವುದು ಇನ್ನೂ ಬಾಕಿ ಇದೆ. ರಾಜ್​ ಕುಂದ್ರಾ ಓರ್ವ ಪ್ರಭಾವಿ ವ್ಯಕ್ತಿ. ಅವರು ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ತನಿಖಾಧಿಕಾರಿಗಳು ಕೋರ್ಟ್​ಗೆ ತಿಳಿಸಿದ್ದಾರೆ.

ರಾಜ್ ಕುಂದ್ರಾಗೆ ಬ್ರಿಟಿಷ್​ ಪೌರತ್ವ ಇದೆ. ಹಾಗಾಗಿ ಜಾಮೀನು ಸಿಕ್ಕರೆ ಅವರು ದೇಶ ಬಿಟ್ಟು ಹೋಗುವ ಸಾಧ್ಯತೆ ದಟ್ಟವಾಗಿದೆ. ಅರೆಸ್ಟ್​ ಆಗುವುದಕ್ಕಿಂತ ಮುನ್ನ ಅವರು ಹಲವು ಸಾಕ್ಷಿಗಳನ್ನು ನಾಶ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ರಾಜ್​ ಕುಂದ್ರಾಗೆ ಜಾಮೀನು ಮರೀಚಿಕೆ ಆಗಿದೆ. ಅವರ ಕರ್ಮಕಾಂಡದಿಂದಾಗಿ ಪತ್ನಿ ಶಿಲ್ಪಾ ಶೆಟ್ಟಿ ಕೂಡ ಸಂಕಷ್ಟ ಎದುರಿಸುವಂತಾಗಿದೆ. ಅವರು ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ರಾಯಭಾರಿ ಆಗಿದ್ದರು. ಆದರೆ ಆ ಪೈಕಿ ಹಲವು ಕಂಪನಿಗಳ ಒಪ್ಪಂದ ಮುರಿದುಬೀಳುವ ಸಾಧ್ಯತೆ ಇದೆ.

ಅಶ್ಲೀಲ ಸಿನಿಮಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್​ ಕುಂದ್ರಾ ಸೇರಿ ಒಟ್ಟು 11 ಜನರನ್ನು ಬಂಧಿಸಲಾಗಿದೆ. ಮಹಿಳೆಯರಿಗೆ ಬಾಲಿವುಡ್​ ಸಿನಿಮಾ ಮತ್ತು ಓಟಿಟಿ ಶೋಗಳಲ್ಲಿ ಅವಕಾಶ ಕೊಡಿಸುತ್ತೇವೆ ಎಂದು ನಂಬಿಸಿ, ಅಶ್ಲೀಲ ಸಿನಿಮಾ ದಂಧೆಗೆ ತಳ್ಳುತ್ತಿದ್ದ ಆರೋಪ ಈ 11 ಜನರ ಮೇಲಿದೆ.

ಇದನ್ನೂ ಓದಿ:

‘ಸನ್ನಿ ಲಿಯೋನ್​ ಅವರನ್ನೇ ಒಪ್ಪಿಕೊಂಡ ನಾವು ಶಿಲ್ಪಾ ಶೆಟ್ಟಿಯನ್ನು ಯಾಕೆ ದ್ವೇಷಿಸುತ್ತೇವೆ?’; ಹಿಮಾಂಶ್​ ಕೊಹ್ಲಿ ಪ್ರಶ್ನೆ

‘ಶಿಲ್ಪಾ ಶೆಟ್ಟಿಗೂ ನಿಮ್ಮ ವಿಡಿಯೋ ಸಖತ್​ ಇಷ್ಟ’ ಎಂದು ಪತ್ನಿ ಹೆಸರಲ್ಲಿ ಶೆರ್ಲಿನ್​ಗೆ ಯಾಮಾರಿಸಿದ್ದ ರಾಜ್​ ಕುಂದ್ರಾ

(Raj Kundra Porn Case: Shilpa Shetty husband to spend more time in Jail)

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ