Shilpa Shetty: ‘ಸತ್ಯ ಗೊತ್ತಿಲ್ಲದೆ ಕಮೆಂಟ್​ ಮಾಡಬೇಡಿ’; ಮಕ್ಕಳಿಗಾಗಿ ಮನವಿ ಮಾಡಿಕೊಂಡ ಶಿಲ್ಪಾ ಶೆಟ್ಟಿ

Shilpa Shetty statement: ‘ಕಳೆದ ಕೆಲವು ದಿನಗಳು ನನ್ನ ಪಾಲಿಗೆ ತುಂಬ ಚಾಲೆಂಜಿಂಗ್​ ಆಗಿದ್ದವು. ಹಲವು ಊಹಾಪೋಹ ಮತ್ತು ಆರೋಪಗಳು ಎದುರಾಗಿವೆ’ ಎಂದು ಶಿಲ್ಪಾ ಶೆಟ್ಟಿ ಅವರು ತಮ್ಮ ಮಾತು ಆರಂಭಿಸಿದ್ದಾರೆ.

Shilpa Shetty: ‘ಸತ್ಯ ಗೊತ್ತಿಲ್ಲದೆ ಕಮೆಂಟ್​ ಮಾಡಬೇಡಿ’; ಮಕ್ಕಳಿಗಾಗಿ ಮನವಿ ಮಾಡಿಕೊಂಡ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on:Aug 02, 2021 | 1:49 PM

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಪತಿ, ಉದ್ಯಮಿ ರಾಜ್​ ಕುಂದ್ರಾ (Raj Kunda) ಬಂಧನಕ್ಕೆ ಒಳಗಾಗಿ ಹಲವು ದಿನಗಳು ಕಳೆದಿವೆ. ಅಶ್ಲೀಲ ಸಿನಿಮಾ ದಂಧೆಯಲ್ಲಿ ರಾಜ್​ ಕುಂದ್ರಾ ತೊಡಗಿಕೊಂಡಿದ್ದರು ಎಂಬ ಆರೋಪ ಇದೆ. ಹಾಗಾಗಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ನಡುವೆ ಶಿಲ್ಪಾ ಶೆಟ್ಟಿ ಕುರಿತಂತೆ ಹಲವು ಸುದ್ದಿಗಳು ಹರಿದಾಡುತ್ತಿವೆ. ಅದರಿಂದ ಬೇಸತ್ತಿರುವ ಅವರು ಇದೇ ಮೊದಲ ಬಾರಿಗೆ ಹೇಳಿಕೆ (Shilpa Shetty statement) ಬಿಡುಗಡೆ ಮಾಡಿದ್ದಾರೆ. ‘ಮಕ್ಕಳ ಸಲುವಾಗಿ ನಮ್ಮ ಖಾಸಗಿತನಕ್ಕೆ ಗೌರವ ನೀಡಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. 

ಸೋಶಿಯಲ್​ ಮೀಡಿಯಾ ಮೂಲಕ ಶಿಲ್ಪಾ ಶೆಟ್ಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಕಳೆದ ಕೆಲವು ದಿನಗಳು ನನ್ನ ಪಾಲಿಗೆ ತುಂಬ ಚಾಲೆಂಜಿಂಗ್​ ಆಗಿದ್ದವು. ಹಲವು ಊಹಾಪೋಹ ಮತ್ತು ಆರೋಪಗಳು ಎದುರಾಗಿವೆ. ಮಾಧ್ಯಮಗಳಿಂದ ಮತ್ತು ಹಿತ ಶತ್ರುಗಳಿಂದ ನನ್ನ ಮಾನಹಾನಿ ಆಗಿದೆ. ನನ್ನ ಕುಟುಂಬವನ್ನೂ ಟ್ರೋಲ್​ ಮಾಡಲಾಗಿದೆ’ ಎಂದು ಶಿಲ್ಪಾ ಬರಹ ಆರಂಭಿಸಿದ್ದಾರೆ.

‘ಈ ಪ್ರಕರಣವು ತನಿಖೆಯ ಹಂತದಲ್ಲಿ ಇರುವುದರಿಂದ ನಾನು ಅದರ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ಹಾಗಾಗಿ ನಾನು ಹೇಳಿದ್ದೇನೆ ಎಂಬಂತಹ ಸುಳ್ಳು ಹೇಳಿಕೆಗಳನ್ನು ಪ್ರಕಟಿಸಬೇಡಿ. ಮುಂಬೈ ಪೊಲೀಸರು ಮತ್ತು ಭಾರತದ ಕಾನೂನಿನ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಒಂದು ಕುಟುಂಬವಾಗಿ ನಾನು ಕಾನೂನಿನ ಮೂಲಕ ಹೋರಾಡುತ್ತೇವೆ. ಆದರೆ ಅಲ್ಲಿನವರೆಗೂ ತಾಯಿಯಾಗಿ ನನ್ನ ಮಕ್ಕಳ ಖಾಸಗಿತನವನ್ನು ರಕ್ಷಿಸುವ ಸಲುವಾಗಿ ಒಂದು ಮನವಿ ಮಾಡುತ್ತೇನೆ’ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ.

‘ಅರೆಬೆಂದ ವಿಷಯಗಳ ಬಗ್ಗೆ ಸರಿಯಾಗಿ ಗೊತ್ತಿಲ್ಲದೇ ಕಮೆಂಟ್​ ಮಾಡಬೇಡಿ. ಕಾನೂನಿಗೆ ತಲೆ ಬಾಗುವಂತಹ ಪ್ರಜೆ ನಾನು. ಕಳೆದ 29 ವರ್ಷದಿಂದ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ. ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಅದನ್ನು ಹುಸಿ ಆಗಿಸಲು ನಾನು ಬಿಡುವುದಿಲ್ಲ. ಈ ಸಮಯದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸಿ ಎಂದು ನಾನು ಕೇಳಿಕೊಳ್ಳುತ್ತೇನೆ. ಮಾಧ್ಯಮಗಳ ವಿಚಾರಣೆ ನಮಗೆ ಬೇಕಿಲ್ಲ. ಕಾನೂನಿನ ಪ್ರಕಾರ ಎಲ್ಲವೂ ನಡೆಯಲಿ. ಸತ್ಯಮೇವ ಜಯತೆ’ ಎಂದು ತಮ್ಮ ಹೇಳಿಕೆಯಲ್ಲಿ ಶಿಲ್ಪಾ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ:

‘ಚೆನ್ನಾಗಿದ್ದಾಗ ಶಿಲ್ಪಾ ಶೆಟ್ಟಿ ಜೊತೆ ಎಲ್ಲರೂ ಪಾರ್ಟಿ ಮಾಡಿದ್ರಿ, ಆದರೆ ಈಗ?’ ಬಾಲಿವುಡ್​ ಮಂದಿಗೆ ಹನ್ಸಲ್​ ಮೆಹ್ತಾ ಚಾಟಿ

ಪತಿ ರಾಜ್​ ಕುಂದ್ರಾ ನೀಲಿ ಚಿತ್ರ ಕರ್ಮಕಾಂಡದಿಂದ ಶಿಲ್ಪಾ ಶೆಟ್ಟಿಗೆ ಆಗುತ್ತಿದೆ ಕೋಟಿ ಕೋಟಿ ನಷ್ಟ

Published On - 1:46 pm, Mon, 2 August 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್