AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬ ಸಮೇತ ಈ ಸಿನಿಮಾ ನೋಡಿ’; ಗಂಡನ ನೀಲಿ ಚಿತ್ರ ದಂಧೆ ನಡುವೆಯೂ ಶಿಲ್ಪಾ ಶೆಟ್ಟಿ ಹೀಗೆ ಹೇಳಿದ್ದೇಕೆ?

ತಮ್ಮ ಸಿನಿಮಾದ ಪ್ರಚಾರದಲ್ಲಿ ಶಿಲ್ಪಾ ಶೆಟ್ಟಿ ಭಾಗಿ ಆಗಿದ್ದಾರೆ. ಗಂಡನ ನೀಲಿ ಚಿತ್ರ ಹಗರಣದ ತಲೆಬಿಸಿ ಏನೇ ಇದ್ದರೂ ಕೂಡ ಅವರು ‘ಹಂಗಮಾ 2’ ಚಿತ್ರ ನೋಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಕುಟುಂಬ ಸಮೇತ ಈ ಸಿನಿಮಾ ನೋಡಿ’; ಗಂಡನ ನೀಲಿ ಚಿತ್ರ ದಂಧೆ ನಡುವೆಯೂ ಶಿಲ್ಪಾ ಶೆಟ್ಟಿ ಹೀಗೆ ಹೇಳಿದ್ದೇಕೆ?
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Jul 24, 2021 | 9:31 AM

Share

ಚಿತ್ರರಂಗದಲ್ಲಿ ಭಾರೀ ಪ್ರತಿಷ್ಠೆ ಹೊಂದಿರುವವರು ನಟಿ ಶಿಲ್ಪಾ ಶೆಟ್ಟಿ. ಆದರೆ ಅವರ ಪತಿ ರಾಜ್​ ಕುಂದ್ರಾ (Raj Kundra) ನೀಲಿ ಚಿತ್ರಗಳ ದಂಧೆಯಲ್ಲಿ ಪ್ರಮುಖ ಆರೋಪಿ ಆಗಿರುವುದರಿಂದ ಅವರು ಮುಜುಗರ ಅನುಭವಿಸುವಂತಾಗಿದೆ. ಮಾಡೆಲ್​ ಮತ್ತು ನಟಿಯರನ್ನು ಬಳಸಿಕೊಂಡು ರಾಜ್​ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು (Porn) ಮಾಡುತ್ತಿದ್ದರು ಎಂಬ ಆರೋಪ ಎದುರಾಗಿದೆ. ಹಾಗಿದ್ದರೂ ಕೂಡ ಶಿಲ್ಪಾ ಶೆಟ್ಟಿ (Shilpa Shetty) ತಮ್ಮ ವೃತ್ತಿಪರತೆಯನ್ನು ಮರೆತಿಲ್ಲ. ಎಂದಿನಂತೆ ತಾವು ನಟಿಸಿದ ಸಿನಿಮಾ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದು ಎಲ್ಲರ ಗಮನ ಸೆಳೆಯುತ್ತಿದೆ.

ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ‘ಹಂಗಾಮಾ 2’ ಚಿತ್ರದ ಮೂಲಕ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಓಟಿಟಿ ಮೂಲಕ ರಿಲೀಸ್​ ಆಗಿರುವ ಈ ಚಿತ್ರದ ಪ್ರಚಾರದಲ್ಲಿ ಶಿಲ್ಪಾ ಶೆಟ್ಟಿ ಭಾಗಿ ಆಗಿದ್ದಾರೆ. ಗಂಡನ ನೀಲಿ ಚಿತ್ರ ಹಗರಣದ ತಲೆಬಿಸಿ ಏನೇ ಇದ್ದರೂ ಕೂಡ ಅವರು ‘ಹಂಗಮಾ 2’ ಚಿತ್ರ ನೋಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಯೋಗ ಕಲಿಸಿದ ಪಾಠಗಳನ್ನು ನಾನು ನಂಬುತ್ತೇನೆ ಮತ್ತು ಪಾಲಿಸುತ್ತೇನೆ. ಬದುಕು ಇರುವುದೇ ಈ ಕ್ಷಣದಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಲು ‘ಹಂಗಮಾ 2’ ತಂಡ ಶ್ರಮಿಸಿದೆ. ಎಂದಿಗೂ ಸಿನಿಮಾಗೆ ತೊಂದರೆ ಆಗಬಾರದು. ಹಾಗಾಗಿ, ಇಂದು ನೀವು ನಿಮ್ಮ ಕುಟುಂಬ ಸಮೇತ ಈ ಸಿನಿಮಾ ನೋಡಿ ಅಂತ ನಾನು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ.

ಜು.27ರವರೆಗೂ ರಾಜ್​ ಕುಂದ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆ ಮೇಲೂ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ತನಿಖೆ ವೇಳೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತನಿಖೆಗೆ ರಾಜ್​ ಕುಂದ್ರಾ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಪೂನಂ ಪಾಂಡೆ ಸೇರಿದಂತೆ ಅನೇಕ ನಟಿಯರು ಅವರ ಮೇಲೆ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್