‘ಕುಟುಂಬ ಸಮೇತ ಈ ಸಿನಿಮಾ ನೋಡಿ’; ಗಂಡನ ನೀಲಿ ಚಿತ್ರ ದಂಧೆ ನಡುವೆಯೂ ಶಿಲ್ಪಾ ಶೆಟ್ಟಿ ಹೀಗೆ ಹೇಳಿದ್ದೇಕೆ?

ತಮ್ಮ ಸಿನಿಮಾದ ಪ್ರಚಾರದಲ್ಲಿ ಶಿಲ್ಪಾ ಶೆಟ್ಟಿ ಭಾಗಿ ಆಗಿದ್ದಾರೆ. ಗಂಡನ ನೀಲಿ ಚಿತ್ರ ಹಗರಣದ ತಲೆಬಿಸಿ ಏನೇ ಇದ್ದರೂ ಕೂಡ ಅವರು ‘ಹಂಗಮಾ 2’ ಚಿತ್ರ ನೋಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಕುಟುಂಬ ಸಮೇತ ಈ ಸಿನಿಮಾ ನೋಡಿ’; ಗಂಡನ ನೀಲಿ ಚಿತ್ರ ದಂಧೆ ನಡುವೆಯೂ ಶಿಲ್ಪಾ ಶೆಟ್ಟಿ ಹೀಗೆ ಹೇಳಿದ್ದೇಕೆ?
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on: Jul 24, 2021 | 9:31 AM

ಚಿತ್ರರಂಗದಲ್ಲಿ ಭಾರೀ ಪ್ರತಿಷ್ಠೆ ಹೊಂದಿರುವವರು ನಟಿ ಶಿಲ್ಪಾ ಶೆಟ್ಟಿ. ಆದರೆ ಅವರ ಪತಿ ರಾಜ್​ ಕುಂದ್ರಾ (Raj Kundra) ನೀಲಿ ಚಿತ್ರಗಳ ದಂಧೆಯಲ್ಲಿ ಪ್ರಮುಖ ಆರೋಪಿ ಆಗಿರುವುದರಿಂದ ಅವರು ಮುಜುಗರ ಅನುಭವಿಸುವಂತಾಗಿದೆ. ಮಾಡೆಲ್​ ಮತ್ತು ನಟಿಯರನ್ನು ಬಳಸಿಕೊಂಡು ರಾಜ್​ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು (Porn) ಮಾಡುತ್ತಿದ್ದರು ಎಂಬ ಆರೋಪ ಎದುರಾಗಿದೆ. ಹಾಗಿದ್ದರೂ ಕೂಡ ಶಿಲ್ಪಾ ಶೆಟ್ಟಿ (Shilpa Shetty) ತಮ್ಮ ವೃತ್ತಿಪರತೆಯನ್ನು ಮರೆತಿಲ್ಲ. ಎಂದಿನಂತೆ ತಾವು ನಟಿಸಿದ ಸಿನಿಮಾ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದು ಎಲ್ಲರ ಗಮನ ಸೆಳೆಯುತ್ತಿದೆ.

ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ‘ಹಂಗಾಮಾ 2’ ಚಿತ್ರದ ಮೂಲಕ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಓಟಿಟಿ ಮೂಲಕ ರಿಲೀಸ್​ ಆಗಿರುವ ಈ ಚಿತ್ರದ ಪ್ರಚಾರದಲ್ಲಿ ಶಿಲ್ಪಾ ಶೆಟ್ಟಿ ಭಾಗಿ ಆಗಿದ್ದಾರೆ. ಗಂಡನ ನೀಲಿ ಚಿತ್ರ ಹಗರಣದ ತಲೆಬಿಸಿ ಏನೇ ಇದ್ದರೂ ಕೂಡ ಅವರು ‘ಹಂಗಮಾ 2’ ಚಿತ್ರ ನೋಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಯೋಗ ಕಲಿಸಿದ ಪಾಠಗಳನ್ನು ನಾನು ನಂಬುತ್ತೇನೆ ಮತ್ತು ಪಾಲಿಸುತ್ತೇನೆ. ಬದುಕು ಇರುವುದೇ ಈ ಕ್ಷಣದಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಲು ‘ಹಂಗಮಾ 2’ ತಂಡ ಶ್ರಮಿಸಿದೆ. ಎಂದಿಗೂ ಸಿನಿಮಾಗೆ ತೊಂದರೆ ಆಗಬಾರದು. ಹಾಗಾಗಿ, ಇಂದು ನೀವು ನಿಮ್ಮ ಕುಟುಂಬ ಸಮೇತ ಈ ಸಿನಿಮಾ ನೋಡಿ ಅಂತ ನಾನು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ.

ಜು.27ರವರೆಗೂ ರಾಜ್​ ಕುಂದ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆ ಮೇಲೂ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ತನಿಖೆ ವೇಳೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತನಿಖೆಗೆ ರಾಜ್​ ಕುಂದ್ರಾ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಪೂನಂ ಪಾಂಡೆ ಸೇರಿದಂತೆ ಅನೇಕ ನಟಿಯರು ಅವರ ಮೇಲೆ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ