AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬ ಸಮೇತ ಈ ಸಿನಿಮಾ ನೋಡಿ’; ಗಂಡನ ನೀಲಿ ಚಿತ್ರ ದಂಧೆ ನಡುವೆಯೂ ಶಿಲ್ಪಾ ಶೆಟ್ಟಿ ಹೀಗೆ ಹೇಳಿದ್ದೇಕೆ?

ತಮ್ಮ ಸಿನಿಮಾದ ಪ್ರಚಾರದಲ್ಲಿ ಶಿಲ್ಪಾ ಶೆಟ್ಟಿ ಭಾಗಿ ಆಗಿದ್ದಾರೆ. ಗಂಡನ ನೀಲಿ ಚಿತ್ರ ಹಗರಣದ ತಲೆಬಿಸಿ ಏನೇ ಇದ್ದರೂ ಕೂಡ ಅವರು ‘ಹಂಗಮಾ 2’ ಚಿತ್ರ ನೋಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಕುಟುಂಬ ಸಮೇತ ಈ ಸಿನಿಮಾ ನೋಡಿ’; ಗಂಡನ ನೀಲಿ ಚಿತ್ರ ದಂಧೆ ನಡುವೆಯೂ ಶಿಲ್ಪಾ ಶೆಟ್ಟಿ ಹೀಗೆ ಹೇಳಿದ್ದೇಕೆ?
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Jul 24, 2021 | 9:31 AM

Share

ಚಿತ್ರರಂಗದಲ್ಲಿ ಭಾರೀ ಪ್ರತಿಷ್ಠೆ ಹೊಂದಿರುವವರು ನಟಿ ಶಿಲ್ಪಾ ಶೆಟ್ಟಿ. ಆದರೆ ಅವರ ಪತಿ ರಾಜ್​ ಕುಂದ್ರಾ (Raj Kundra) ನೀಲಿ ಚಿತ್ರಗಳ ದಂಧೆಯಲ್ಲಿ ಪ್ರಮುಖ ಆರೋಪಿ ಆಗಿರುವುದರಿಂದ ಅವರು ಮುಜುಗರ ಅನುಭವಿಸುವಂತಾಗಿದೆ. ಮಾಡೆಲ್​ ಮತ್ತು ನಟಿಯರನ್ನು ಬಳಸಿಕೊಂಡು ರಾಜ್​ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು (Porn) ಮಾಡುತ್ತಿದ್ದರು ಎಂಬ ಆರೋಪ ಎದುರಾಗಿದೆ. ಹಾಗಿದ್ದರೂ ಕೂಡ ಶಿಲ್ಪಾ ಶೆಟ್ಟಿ (Shilpa Shetty) ತಮ್ಮ ವೃತ್ತಿಪರತೆಯನ್ನು ಮರೆತಿಲ್ಲ. ಎಂದಿನಂತೆ ತಾವು ನಟಿಸಿದ ಸಿನಿಮಾ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದು ಎಲ್ಲರ ಗಮನ ಸೆಳೆಯುತ್ತಿದೆ.

ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ‘ಹಂಗಾಮಾ 2’ ಚಿತ್ರದ ಮೂಲಕ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಓಟಿಟಿ ಮೂಲಕ ರಿಲೀಸ್​ ಆಗಿರುವ ಈ ಚಿತ್ರದ ಪ್ರಚಾರದಲ್ಲಿ ಶಿಲ್ಪಾ ಶೆಟ್ಟಿ ಭಾಗಿ ಆಗಿದ್ದಾರೆ. ಗಂಡನ ನೀಲಿ ಚಿತ್ರ ಹಗರಣದ ತಲೆಬಿಸಿ ಏನೇ ಇದ್ದರೂ ಕೂಡ ಅವರು ‘ಹಂಗಮಾ 2’ ಚಿತ್ರ ನೋಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಯೋಗ ಕಲಿಸಿದ ಪಾಠಗಳನ್ನು ನಾನು ನಂಬುತ್ತೇನೆ ಮತ್ತು ಪಾಲಿಸುತ್ತೇನೆ. ಬದುಕು ಇರುವುದೇ ಈ ಕ್ಷಣದಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಲು ‘ಹಂಗಮಾ 2’ ತಂಡ ಶ್ರಮಿಸಿದೆ. ಎಂದಿಗೂ ಸಿನಿಮಾಗೆ ತೊಂದರೆ ಆಗಬಾರದು. ಹಾಗಾಗಿ, ಇಂದು ನೀವು ನಿಮ್ಮ ಕುಟುಂಬ ಸಮೇತ ಈ ಸಿನಿಮಾ ನೋಡಿ ಅಂತ ನಾನು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ.

ಜು.27ರವರೆಗೂ ರಾಜ್​ ಕುಂದ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆ ಮೇಲೂ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ತನಿಖೆ ವೇಳೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತನಿಖೆಗೆ ರಾಜ್​ ಕುಂದ್ರಾ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಪೂನಂ ಪಾಂಡೆ ಸೇರಿದಂತೆ ಅನೇಕ ನಟಿಯರು ಅವರ ಮೇಲೆ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!