‘ನನ್ನ ಗಂಡ ನಿರಪರಾಧಿ; ಅಶ್ಲೀಲ ಸಿನಿಮಾ ಮಾಡಿಲ್ಲ’; ರಾಜ್​ ಕುಂದ್ರಾ ಪರ ಶಿಲ್ಪಾ ಶೆಟ್ಟಿ ಬ್ಯಾಟಿಂಗ್

‘ರಾಜ್​ ಕುಂದ್ರಾ ಅವರ ಹಾಟ್​ಶಾಟ್ಸ್​​ ಆ್ಯಪ್​ ಜೊತೆ ನನಗೆ ಯಾವುದೇ ಸಂಬಂಧ ಇಲ್ಲ. ಅದರಲ್ಲಿ ಯಾವ ರೀತಿ ಕಂಟೆಂಟ್​ ಇರುತ್ತದೆ ಎಂಬುದು ಕೂಡ ನನಗೆ ಗೊತ್ತಿಲ್ಲ’ ಎಂದು ಶಿಲ್ಪಾ ಶೆಟ್ಟಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

‘ನನ್ನ ಗಂಡ ನಿರಪರಾಧಿ; ಅಶ್ಲೀಲ ಸಿನಿಮಾ ಮಾಡಿಲ್ಲ’; ರಾಜ್​ ಕುಂದ್ರಾ ಪರ ಶಿಲ್ಪಾ ಶೆಟ್ಟಿ ಬ್ಯಾಟಿಂಗ್
ಶಿಲ್ಪಾ ಶೆಟ್ಟಿ-ರಾಜ್​​ ಕುಂದ್ರಾ
Follow us
| Updated By: ಮದನ್​ ಕುಮಾರ್​

Updated on: Jul 24, 2021 | 1:07 PM

ರಾಜ್​ ಕುಂದ್ರಾ (Raj Kundra) ಅವರ ನೀಲಿ ಚಿತ್ರದ ಕೇಸ್​ನಲ್ಲಿ ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್​ ಕುಂದ್ರಾ ಪತ್ನಿ ಶಿಲ್ಪಾ ಶೆಟ್ಟಿ (Shilpa Shetty) ಅವರನ್ನು ಕೂಡ ಮುಂಬೈ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಹಲವು ಆಯಾಮಗಳಿಂದ ತನಿಖೆ ನಡೆಯುತ್ತಿದೆ. ಶಿಲ್ಪಾ ಶೆಟ್ಟಿ ಅವರ ನಿವಾಸದ ಮೇಲೆ ಶುಕ್ರವಾರ (ಜು.23) ದಾಳಿ ನಡೆಸಿ ತಪಾಸಣೆ ಮಾಡಲಾಗಿದೆ. ಈ ವೇಳೆ ಪತಿಯ ಪರವಾಗಿ ಮಾತನಾಡಿರುವ ಶಿಲ್ಪಾ ಶೆಟ್ಟಿ ಅವರು ‘ರಾಜ್​ ಕುಂದ್ರಾ ನಿರಪರಾಧಿ’ ಎಂದು ವಾದ ಮಾಡಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ. 

‘ರಾಜ್​ ಕುಂದ್ರಾ ಅವರ ಹಾಟ್​ಶಾಟ್ಸ್​​ ಆ್ಯಪ್​ ಜೊತೆ ನನಗೆ ಯಾವುದೇ ಸಂಬಂಧ ಇಲ್ಲ. ಅದರಲ್ಲಿ ಯಾವ ರೀತಿ ಕಂಟೆಂಟ್​ ಇರುತ್ತದೆ ಎಂಬುದು ಕೂಡ ನನಗೆ ಗೊತ್ತಿಲ್ಲ’ ಎಂದು ಶಿಲ್ಪಾ ಶೆಟ್ಟಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ‘ನನ್ನ ಗಂಡ ಮಾಡಿದ್ದು ಕಾಮೋದ್ರೇಕದ ಸಿನಿಮಾಗಳು ಮಾತ್ರ. ಅವುಗಳು ಅಶ್ಲೀಲ ಸಿನಿಮಾಗಳಲ್ಲ. ಹಾಗಾಗಿ ನನ್ನ ಗಂಡ ನಿರಪರಾಧಿ’ ಎಂದು ಅವರು ವಾದಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ರಾಜ್​ ಕುಂದ್ರಾ ಕೂಡ ಪೊಲೀಸರ ಎದುರು ಇದನ್ನೇ ವಾದಿಸುತ್ತಿದ್ದಾರೆ. ಅವರು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಆ ಕಾರಣದಿಂದಲೇ ಜು.27ರವರೆಗೆ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ನಟಿಯರನ್ನು ಮತ್ತು ಮಾಡೆಲ್​ಗಳನ್ನು ಬಳಸಿಕೊಂಡು ರಾಜ್​ ಕುಂದ್ರಾ ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷ್ಯಗಳು ಇವೆ ಎನ್ನಲಾಗಿದೆ. ಆದರೂ ಕೂಡ ರಾಜ್ ಕುಂದ್ರಾ ಈ ಆರೋಪಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ಇದೇ ಕೇಸ್​ನಲ್ಲಿ ಅರೆಸ್ಟ್​ ಆಗಿ, ನಂತರ ಜಾಮೀನು ಪಡೆದು ಹೊರಬಂದಿರುವ ನಟಿ-ಮಾಡೆಲ್​ ಗೆಹನಾ ವಸಿಷ್ಠ್​ ಪರ ವಕ್ತಾರರು ಕೆಲವೇ ದಿನಗಳ ಹಿಂದೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ಗೆಹನಾ ಬೋಲ್ಡ್​ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಅದನ್ನು ಅಶ್ಲೀಲ ಅಥವಾ ನೀಲಿ ಚಿತ್ರಗಳ ಜೊತೆ ಹೋಲಿಸಬಾರದು. ಮುಂಬೈ ಪೊಲೀಸರ ಮೇಲೆ ನಮಗೆ ನಂಬಿಕೆ ಇದೆ. ಯಾರು ನಿಜವಾದ ಅಪರಾಧಿಗಳು ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ:

‘ಕುಟುಂಬ ಸಮೇತ ಈ ಸಿನಿಮಾ ನೋಡಿ’; ಗಂಡನ ನೀಲಿ ಚಿತ್ರ ದಂಧೆ ನಡುವೆಯೂ ಶಿಲ್ಪಾ ಶೆಟ್ಟಿ ಹೀಗೆ ಹೇಳಿದ್ದೇಕೆ?

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು