AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಬೇರೆ ಆಗಿದ್ದೇವೆ’; ಶಿಲ್ಪಾ ಶೆಟ್ಟಿಗೆ ಡಿವೋರ್ಸ್ ಕೊಟ್ಟ ರಾಜ್ ಕುಂದ್ರಾ?

ಪತಿ ಮಾಡಿದ ತಪ್ಪನ್ನು ಮನ್ನಿಸಿ ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಮಧ್ಯೆ ರಾಜ್​ ಕುಂದ್ರಾ ಮಾಡಿರೋ ಟ್ವೀಟ್ ಗಮನ ಸೆಳೆದಿದೆ. ಶಿಲ್ಪಾ ಶೆಟ್ಟಿ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ.

‘ನಾವು ಬೇರೆ ಆಗಿದ್ದೇವೆ’; ಶಿಲ್ಪಾ ಶೆಟ್ಟಿಗೆ ಡಿವೋರ್ಸ್ ಕೊಟ್ಟ ರಾಜ್ ಕುಂದ್ರಾ?
ರಾಜ್ ಕುಂದ್ರಾ-ಶಿಲ್ಪಾ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Oct 20, 2023 | 10:36 AM

Share

ರಾಜ್ ಕುಂದ್ರಾ (Raj Kundra) ಅವರು ಟ್ವಿಟರ್​ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನಾವು ಬೇರೆ ಆಗಿದ್ದೇವೆ’ ಎಂದು ಇದರಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪತ್ನಿ ಶಿಲ್ಪಾ ಶೆಟ್ಟಿಗೆ ರಾಜ್ ಕುಂದ್ರಾ ವಿಚ್ಛೇದನ ಕೊಟ್ಟರೇ ಎಂಬ ಗುಮಾನಿ ಮೂಡಿದೆ. ಇದು ಮಧ್ಯರಾತ್ರಿ ಮಾಡಿದ ಟ್ವೀಟ್. ಇದು ಮದ್ಯ ಸೇವಿಸಿ ಮಾಡಿದ ಟ್ವೀಟ್ ಎಂದು ಕೆಲವರು ಸುಮ್ಮನಾಗಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ಕಡೆಯಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ರಾಜ್ ಕುಂದ್ರಾ ಅವರು 2021ರಲ್ಲಿ ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದರು. ಅವರು ಜೈಲು ಕೂಡ ಸೇರಿದ್ದರು. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅವರು ಜೈಲಿಗೆ ಹೋದಾಗಲೇ ಶಿಲ್ಪಾ ಅವರು ರಾಜ್ ಕುಂದ್ರಾಗೆ ವಿಚ್ಛೇದನ ನಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದು ನಿಜವಾಗಿಲ್ಲ. ಪತಿ ಮಾಡಿದ ತಪ್ಪನ್ನು ಮನ್ನಿಸಿ ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಮಧ್ಯೆ ರಾಜ್​ ಕುಂದ್ರಾ ಮಾಡಿರೋ ಟ್ವೀಟ್ ಗಮನ ಸೆಳೆದಿದೆ. ಶಿಲ್ಪಾ ಶೆಟ್ಟಿ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ.

‘ನಾವು ಬೇರೆ ಆಗಿದ್ದೇವೆ. ಈ ಕಷ್ಟದ ಸಮಯದಲ್ಲಿ ದಯವಿಟ್ಟು ನಮಗೆ ಸಮಯ ನೀಡಿ’ ಎಂದು ಕೋರಿದ್ದಾರೆ ರಾಜ್ ಕುಂದ್ರಾ. ‘ಬೇರೆ ಆಗಿದ್ದೀರಿ ಎಂದರೆ ಏನು ಅರ್ಥ? ವಿಚ್ಛೇದನವೇ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಇದು ಆಲ್ಕೋಹಾಲ್ ಕುಡಿದು ಮಾಡಿರುವ ಟ್ವೀಟ್ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವರ್ಷಗಳ ಬಳಿಕ ಕೊನೆಗೂ ಮುಖವಾಡ ತೆಗೆದ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ

ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿ 2009ರಲ್ಲಿ ಮದುವೆ ಆದರು. ವಿಯಾನ್ ಹಾಗೂ ಸಮಿಶಾ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ. ರಾಜ್ ಕುಂದ್ರಾ ಬಯೋಪಿಕ್ ‘ಯುಟಿ 69’ ರಿಲೀಸ್ ಆಗುತ್ತಿದೆ. ಇದರ ಪ್ರಮೋಷನ್ ಗಿಮಿಕ್ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್