AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಬೇರೆ ಆಗಿದ್ದೇವೆ’; ಶಿಲ್ಪಾ ಶೆಟ್ಟಿಗೆ ಡಿವೋರ್ಸ್ ಕೊಟ್ಟ ರಾಜ್ ಕುಂದ್ರಾ?

ಪತಿ ಮಾಡಿದ ತಪ್ಪನ್ನು ಮನ್ನಿಸಿ ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಮಧ್ಯೆ ರಾಜ್​ ಕುಂದ್ರಾ ಮಾಡಿರೋ ಟ್ವೀಟ್ ಗಮನ ಸೆಳೆದಿದೆ. ಶಿಲ್ಪಾ ಶೆಟ್ಟಿ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ.

‘ನಾವು ಬೇರೆ ಆಗಿದ್ದೇವೆ’; ಶಿಲ್ಪಾ ಶೆಟ್ಟಿಗೆ ಡಿವೋರ್ಸ್ ಕೊಟ್ಟ ರಾಜ್ ಕುಂದ್ರಾ?
ರಾಜ್ ಕುಂದ್ರಾ-ಶಿಲ್ಪಾ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Oct 20, 2023 | 10:36 AM

Share

ರಾಜ್ ಕುಂದ್ರಾ (Raj Kundra) ಅವರು ಟ್ವಿಟರ್​ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನಾವು ಬೇರೆ ಆಗಿದ್ದೇವೆ’ ಎಂದು ಇದರಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪತ್ನಿ ಶಿಲ್ಪಾ ಶೆಟ್ಟಿಗೆ ರಾಜ್ ಕುಂದ್ರಾ ವಿಚ್ಛೇದನ ಕೊಟ್ಟರೇ ಎಂಬ ಗುಮಾನಿ ಮೂಡಿದೆ. ಇದು ಮಧ್ಯರಾತ್ರಿ ಮಾಡಿದ ಟ್ವೀಟ್. ಇದು ಮದ್ಯ ಸೇವಿಸಿ ಮಾಡಿದ ಟ್ವೀಟ್ ಎಂದು ಕೆಲವರು ಸುಮ್ಮನಾಗಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ಕಡೆಯಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ರಾಜ್ ಕುಂದ್ರಾ ಅವರು 2021ರಲ್ಲಿ ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದರು. ಅವರು ಜೈಲು ಕೂಡ ಸೇರಿದ್ದರು. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅವರು ಜೈಲಿಗೆ ಹೋದಾಗಲೇ ಶಿಲ್ಪಾ ಅವರು ರಾಜ್ ಕುಂದ್ರಾಗೆ ವಿಚ್ಛೇದನ ನಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದು ನಿಜವಾಗಿಲ್ಲ. ಪತಿ ಮಾಡಿದ ತಪ್ಪನ್ನು ಮನ್ನಿಸಿ ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಮಧ್ಯೆ ರಾಜ್​ ಕುಂದ್ರಾ ಮಾಡಿರೋ ಟ್ವೀಟ್ ಗಮನ ಸೆಳೆದಿದೆ. ಶಿಲ್ಪಾ ಶೆಟ್ಟಿ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ.

‘ನಾವು ಬೇರೆ ಆಗಿದ್ದೇವೆ. ಈ ಕಷ್ಟದ ಸಮಯದಲ್ಲಿ ದಯವಿಟ್ಟು ನಮಗೆ ಸಮಯ ನೀಡಿ’ ಎಂದು ಕೋರಿದ್ದಾರೆ ರಾಜ್ ಕುಂದ್ರಾ. ‘ಬೇರೆ ಆಗಿದ್ದೀರಿ ಎಂದರೆ ಏನು ಅರ್ಥ? ವಿಚ್ಛೇದನವೇ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಇದು ಆಲ್ಕೋಹಾಲ್ ಕುಡಿದು ಮಾಡಿರುವ ಟ್ವೀಟ್ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವರ್ಷಗಳ ಬಳಿಕ ಕೊನೆಗೂ ಮುಖವಾಡ ತೆಗೆದ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ

ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿ 2009ರಲ್ಲಿ ಮದುವೆ ಆದರು. ವಿಯಾನ್ ಹಾಗೂ ಸಮಿಶಾ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ. ರಾಜ್ ಕುಂದ್ರಾ ಬಯೋಪಿಕ್ ‘ಯುಟಿ 69’ ರಿಲೀಸ್ ಆಗುತ್ತಿದೆ. ಇದರ ಪ್ರಮೋಷನ್ ಗಿಮಿಕ್ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ