AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj Kundra: ‘ನಾವು ಬೇರೆ ಆಗಿದ್ದೇವೆ’ ಅಂತ ರಾಜ್​ ಕುಂದ್ರಾ ಹೇಳಿದ್ದು ಶಿಲ್ಪಾ ಶೆಟ್ಟಿ ಬಗ್ಗೆ ಅಲ್ಲ; ಅಸಲಿ ವಿಷಯ ಬಯಲು

UT 69: ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ಡಿವೋರ್ಸ್​ ಪಡೆದಿಲ್ಲ. ಆ ರೀತಿಯ ಆಲೋಚನೆಯೂ ಅವರಿಗೆ ಬಂದಿಲ್ಲ. ಸದ್ಯಕ್ಕೆ ಅವರ ಸಂಸಾರ ಚೆನ್ನಾಗಿಯೇ ನಡೆಯುತ್ತಿದೆ. ಆದರೂ ಕೂಡ ರಾಜ್​ ಕುಂದ್ರಾ ಹೀಗೆ ಪೋಸ್ಟ್​ ಮಾಡಲು ಒಂದು ಕಾರಣ ಇದೆ. ಈಗ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಒಂದು ಪ್ರಮುಖ ನಿರ್ಧಾರಕ್ಕೆ ಬಂದಿದ್ದಾರೆ.

Raj Kundra: ‘ನಾವು ಬೇರೆ ಆಗಿದ್ದೇವೆ’ ಅಂತ ರಾಜ್​ ಕುಂದ್ರಾ ಹೇಳಿದ್ದು ಶಿಲ್ಪಾ ಶೆಟ್ಟಿ ಬಗ್ಗೆ ಅಲ್ಲ; ಅಸಲಿ ವಿಷಯ ಬಯಲು
ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ
Follow us
ಮದನ್​ ಕುಮಾರ್​
|

Updated on: Oct 20, 2023 | 5:41 PM

ಉದ್ಯಮಿ ರಾಜ್​ ಕುಂದ್ರಾ (Raj Kundra) ಅವರು ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದ ಮೇಲೆ ಜೈಲು ವಾಸ ಅನುಭವಿಸಿ ಬಂದಿದ್ದಾರೆ. ಈ ಕಳಂಕದಿಂದ ಅವರಿಗೆ ಪತ್ನಿ ಶಿಲ್ಪಾ ಶೆಟ್ಟಿ ವಿಚ್ಛೇದನ (Divorce) ನೀಡಬಹುದು ಎಂದು ಅನೇಕರು ಊಹಿಸಿದ್ದರು. ಆದರೆ ಹಾಗಾಗಲಿಲ್ಲ. ಪತಿಯ ಜೊತೆ ಶಿಲ್ಪಾ ಶೆಟ್ಟಿ (Shilpa Shetty) ಹೊಂದಿಕೊಂಡು ಸಂಸಾರ ಮುಂದುವರಿಸಿದರು. ಹಾಗಿದ್ದರೂ ಕೂಡ ರಾಜ್​ ಕುಂದ್ರಾ ಅವರು ಇತ್ತೀಚೆಗೆ ಮಾಡಿದ ಪೋಸ್ಟ್​ನಿಂದ ಅಭಿಮಾನಿಗಳ ವಲಯದಲ್ಲಿ ಅನುಮಾನ ವ್ಯಕ್ತವಾಗಿತ್ತು. ‘ನಾವಿಬ್ಬರೂ ಬೇರೆ ಆಗಿದ್ದೇವೆ. ಈ ಕಷ್ಟದ ಸಮಯದಲ್ಲಿ ನಮಗೆ ಕಾಲಾವಕಾಶ ನೀಡಿ ಅಂತ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ರಾಜ್​ ಕುಂದ್ರಾ ಬರೆದುಕೊಂಡಿದ್ದು ಭಾರಿ ಚರ್ಚೆ ಹುಟ್ಟುಹಾಕಿತ್ತು. ಈಗ ಅದರ ಹಿಂದಿನ ಅಸಲಿ ಕಹಾನಿ ಏನು ಎಂಬುದನ್ನು ತೆರೆದಿಟ್ಟಿದ್ದಾರೆ.

ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ಅವರು ಡಿವೋರ್ಸ್​ ಪಡೆದಿಲ್ಲ. ಆ ರೀತಿಯ ಯಾವುದೇ ಆಲೋಚನೆ ಕೂಡ ಅವರಿಗೆ ಬಂದಿಲ್ಲ. ಸದ್ಯಕ್ಕಂತೂ ಅವರ ಸಂಸಾರ ಚೆನ್ನಾಗಿಯೇ ನಡೆಯುತ್ತಿದೆ. ಹಾಗಿದ್ದರೂ ಕೂಡ ರಾಜ್​ ಕುಂದ್ರಾ ಹೀಗೆ ಪೋಸ್ಟ್​ ಮಾಡಲು ಒಂದು ಪ್ರಮುಖ ಕಾರಣ ಇದೆ. ಈಗ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಒಂದು ಪ್ರಮುಖ ನಿರ್ಧಾರಕ್ಕೆ ಬಂದಿದ್ದಾರೆ. ಇಷ್ಟು ದಿನ ಮುಖ ಮುಚ್ಚಿಕೊಂಡು ಓಡಾಡುತ್ತಿದ್ದ ರಾಜ್​ ಕುಂದ್ರಾ ಅವರು ಮಾಸ್ಕ್​ಗೆ ಗುಡ್​ಬೈ ಹೇಳಲು ನಿರ್ಧರಿಸಿದ್ದಾರೆ.

‘ನಾವಿಬ್ಬರೂ ಬೇರೆ ಆಗಿದ್ದೇವೆ’ ಎಂದು ರಾಜ್​ ಕುಂದ್ರ ಹೇಳಿರುವುದು ಮಾಸ್ಕ್​ ಬಗ್ಗೆ. ಅದೀಗ ಸ್ಪಷ್ಟವಾಗಿದೆ. ಹೊಸ ಪೋಸ್ಟ್ ಮೂಲಕ ಅವರು ಆ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಮಾಸ್ಕ್​ಗಳಿಗೆ ವಿದಾಯ. ಇದು ಬೇರೆ ಆಗುವ ಸಮಯ. ಕಳೆದ ಎರಡು ವರ್ಷಗಳಿಂದ ನನ್ನನ್ನು ಕಾಪಾಡಿದ್ದಕ್ಕಾಗಿ ಧನ್ಯವಾದಗಳು’ ಎಂದು ರಾಜ್​ ಕುಂದ್ರಾ ಬರೆದುಕೊಂಡಿದ್ದಾರೆ. ಅಲ್ಲದೇ ಇಷ್ಟು ದಿನ ತಾವು ಧರಿಸಿದ ವಿವಿಧ ಬಗೆಯ ಮಾಸ್ಕ್​ಗಳ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Raj Kundra: ಮಗಳ ಜತೆ ಮುಖ ತೋರಿಸಲಾಗದೇ ​ಓಡಿ ಹೋದ ರಾಜ್​ ಕುಂದ್ರಾ; ಹಣೆ ಚಚ್ಚಿಕೊಂಡ ಶಿಲ್ಪಾ ಶೆಟ್ಟಿ

ರಾಜ್​ ಕುಂದ್ರಾ ಈಗ ನಟ ಕೂಡ ಹೌದು. ಅವರು ನಟಿಸಿರುವ ‘ಯುಟಿ 69’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಟ್ರೇಲರ್​ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆದಿದೆ. ಆರ್ಥರ್​ ರೋಡ್​ ಜೈಲಿನಲ್ಲಿ ರಾಜ್​ ಕುಂದ್ರಾ ಅವರು ಕಳೆದ ದಿನಗಳನ್ನೇ ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಜೈಲಿನಲ್ಲಿ ಅವರು ಅನುಭವಿಸಿದ ಕಷ್ಟಗಳನ್ನು ಮನರಂಜನೆಯ ಶೈಲಿಯಲ್ಲಿ ತೆರೆಗೆ ತರಲಾಗಿದೆ. ಈ ಸಿನಿಮಾ ನವೆಂಬರ್​ 3ರಂದು ಬಿಡುಗಡೆ ಆಗಲಿದೆ. ಅದರ ಪ್ರಚಾರದ ಸಲುವಾಗಿ ರಾಜ್​ ಕುಂದ್ರಾ ಸಿಕ್ಕಾಪಟ್ಟೆ ಗಿಮಿಕ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ