AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ಖಾತೆಯಿಂದ ಈ ಮಹಿಳೆ ಖಾತೆಗೆ ವರ್ಗಾವಣೆ ಆಗಿತ್ತು ಕೋಟಿ ಕೋಟಿ ಹಣ; ಯಾರು ಈ ಹರ್ಷಿತಾ?

ಮೂಲಗಳ ಪ್ರಕಾರ, ಈ ಬ್ಯಾಂಕ್ ಖಾತೆಗಳನ್ನು ಕಪ್ಪು ಹಣ, ಹವಾಲಾ ಮತ್ತು ಬೆಟ್ಟಿಂಗ್‌ಗೆ ಬಳಸಲಾಗಿದೆಯೆಂದು ಶಂಕಿಸಲಾಗಿದೆ. ಹರ್ಷಿತಾ ಮತ್ತು ನರ್ವದ ಶ್ರೀವಾಸ್ತವ ಅವರ ಖಾತೆಗಳಿಗೆ ಈ ಮೊತ್ತವು ಬಂದ ಕೆಲವು ದಿನಗಳ ನಂತರ, ಅದನ್ನು ಇತರ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು.

ರಾಜ್​ ಕುಂದ್ರಾ ಖಾತೆಯಿಂದ ಈ ಮಹಿಳೆ ಖಾತೆಗೆ ವರ್ಗಾವಣೆ ಆಗಿತ್ತು ಕೋಟಿ ಕೋಟಿ ಹಣ; ಯಾರು ಈ ಹರ್ಷಿತಾ?
ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
|

Updated on: Jul 26, 2021 | 8:19 PM

Share

ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ಮಾಡುತ್ತಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಪ್ರತಿದಿನ ಹೊಸಹೊಸ ವಿಚಾರವನ್ನು ಪತ್ತೆ ಮಾಡುತ್ತಿದೆ. ರಾಜ್ ಕುಂದ್ರಾ ಅವರ ಈ ಅಶ್ಲೀಲ ದಂಧೆ ಪ್ರಕರಣಕ್ಕೂ ಉತ್ತರ ಪ್ರದೇಶದ ಕಾನ್ಪುರಕ್ಕೂ ನಂಟು ಸಿಕ್ಕಿದೆ. ಕಾನ್ಪುರ್ ಮಹಿಳೆಯ ಖಾತೆಗೆ ರಾಜ್ ​ಕುಂದ್ರಾ ಹಣ ವರ್ಗಾವಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಹರ್ಷಿತಾ ಶ್ರೀವಾಸ್ತವ ಎಂಬ ಮಹಿಳೆಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಈ ಖಾತೆಯನ್ನು ವಶಕ್ಕೆ ಪಡೆಯಲಾಗಿದ್ದು, ಈ ಖಾತೆಯಲ್ಲಿ ಸುಮಾರು 2,32,45,222 ರೂಪಾಯಿ ಇತ್ತು. ಹಾಟ್ ಶಾಟ್ಸ್​​ ವಾಟ್ಸಾಪ್ ಗ್ರೂಪ್‌ನಲ್ಲಿ ಅರವಿಂದ್ ಕುಮಾರ್ ಶ್ರೀವಾಸ್ತವ ಹೆಸರಿನ ವ್ಯಕ್ತಿ ಇದ್ದಾರೆ. ಈ ಅರವಿಂದ್ ಅವರ ಪತ್ನಿ ಹರ್ಷಿತಾ. ಅರವಿಂದ್ ಕೋಟ್ಯಂತರ ರೂಪಾಯಿಗಳನ್ನು ಹರ್ಷಿತಾಗೆ ಮಾತ್ರವಲ್ಲ, ತಂದೆ ನರ್ವದ ಶ್ರೀವಾಸ್ತವ ಹೆಸರಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದ್ದರು. ಆದರೆ, ಪಾರ್ನ್​ ದಂಧೆಯಿಂದ ಗಳಿಸಿದ ಹಣವನ್ನು ಅರವಿಂದ್ ತನ್ನ ಕುಟುಂಬದ ಖಾತೆಗೆ ಏಕೆ ಕಳುಹಿಸುತ್ತಿದ್ದಾನೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಮೂಲಗಳ ಪ್ರಕಾರ, ಈ ಬ್ಯಾಂಕ್ ಖಾತೆಗಳನ್ನು ಕಪ್ಪು ಹಣ, ಹವಾಲಾ ಮತ್ತು ಬೆಟ್ಟಿಂಗ್‌ಗೆ ಬಳಸಲಾಗಿದೆಯೆಂದು ಶಂಕಿಸಲಾಗಿದೆ. ಹರ್ಷಿತಾ ಮತ್ತು ನರ್ವದ ಶ್ರೀವಾಸ್ತವ ಅವರ ಖಾತೆಗಳಿಗೆ ಈ ಮೊತ್ತವು ಬಂದ ಕೆಲವು ದಿನಗಳ ನಂತರ, ಅದನ್ನು ಇತರ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಅರವಿಂದ್ ಅವರ ಖಾತೆಯನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 1.81 ಕೋಟಿ ರೂಪಾಯಿ ಇತ್ತು.

ಸುಮಾರು 6 ವರ್ಷಗಳ ಹಿಂದೆ ಹರ್ಷಿತಾ ಖಾತೆಯನ್ನು ತೆರೆಯಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಮೊತ್ತದ ವಹಿವಾಟು ಹೆಚ್ಚಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್​ ಕುಂದ್ರಾ ನಡೆಸುತ್ತಿದ್ದ ದಂಧೆ ಬಗ್ಗೆ ಶಿಲ್ಪಾ ಶೆಟ್ಟಿಗೆ ಇತ್ತು ಮಾಹಿತಿ? ಪೊಲೀಸರಿಂದ ವಿಚಾರಣೆ

‘ಲಂಚವನ್ನು ನಾನು ಸ್ವೀಕರಿಸುವುದೂ ಇಲ್ಲ, ಕೊಡುವುದೂ ಇಲ್ಲ’; ವೈರಲ್​ ಆಯ್ತು ರಾಜ್​ ಕುಂದ್ರಾ ಹಳೆಯ ವಿಡಿಯೋ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?