AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಮೇಲೆ ಮುನಿಸಿಕೊಂಡ ರಾಜಮೌಳಿ? ಕಾರಣ ಏನು?

ರಾಜಮೌಳಿ ಅವರು 'ವಾರ್ 2' ಚಿತ್ರದ ಕಳಪೆ ವಿಎಫ್ಎಕ್ಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 'ವಾರ್ 2' ಚಿತ್ರದಲ್ಲಿನ ಕೆಲವು ದೃಶ್ಯಗಳ ಗ್ರಾಫಿಕ್ಸ್ ಗುಣಮಟ್ಟ ಕಡಿಮೆಯಿದ್ದು, ಇದರಿಂದ ರಾಜಮೌಳಿ ಅವರು ಬೇಸರಗೊಂಡಿದ್ದಾರೆ. ಜೂನಿಯರ್ NTR ಅವರ ಬಾಲಿವುಡ್ ಪ್ರಯತ್ನದ ಯಶಸ್ಸು ಕಡಿಮೆಯಾಗಿರುವುದರಿಂದಲೂ ಅವರು ನಿರಾಶರಾಗಿದ್ದಾರೆ ಎನ್ನಲಾಗಿದೆ.

ಬಾಲಿವುಡ್​ ಮೇಲೆ ಮುನಿಸಿಕೊಂಡ ರಾಜಮೌಳಿ? ಕಾರಣ ಏನು?
ರಾಜಮೌಳಿ-ಎನ್​ಟಿಆರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 21, 2025 | 7:50 AM

Share

ನಿರ್ದೇಶಕ ಎಸ್​ಎಸ್ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಅವರು ಟಾಲಿವುಡ್​ನಲ್ಲಿ ಹಲವು ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಮಹೇಶ್ ಬಾಬು (Mahesh Babu) ಜೊತೆ ಕೈ ಜೋಡಿಸಿದ್ದಾರೆ ಮತ್ತು ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದು ಕುಳಿತಿದ್ದಾರೆ. ಹೀಗಿರುವಾಗಲೇ ಅವರಿಗೆ ಬಾಲಿವುಡ್ ನಿರ್ದೇಶಕರ ಮೇಲೆ ಮುನಿಸು ಬಂದಿದೆ ಎಂದು ವರದಿ ಆಗಿದೆ. ಅದು ಏಕೆ ಅಂತೀರಾ? ಅದಕ್ಕೂ ಉತ್ತರ ಇದೆ.

ರಾಜಮೌಳಿ ಅವರು ಯಾವುದೇ ಸಿನಿಮಾ ಮಾಡಿದರೂ ಅದರಲ್ಲಿ ಫರ್ಫೆಕ್ಷನ್ ಹುಡುಕುತ್ತಾರೆ ಎಂದೇ ಹೇಳಬಹುದು. ಅವರ ಈ ಹಿಂದಿನ ಸಿನಿಮಾಗಳಲ್ಲಿ ಅದು ಸಾಬೀತಾಗಿದೆ. ಈ ಮೊದಲು ಅವರು ಹಲವು ಯಶಸ್ವಿ ಚಿತ್ರಗಳನ್ನು ನೀಡಿದ್ದಾರೆ ಮತ್ತು ಅವುಗಳು ಉತ್ತಮ ಗುಣಮಟ್ಟದಲ್ಲಿ ಇವೆ. ಆದರೆ, ರಾಜಮೌಳಿ ಜೊತೆ ಕೆಲಸ ಮಾಡಿದ ಜೂನಿಯರ್ ಎನ್​ಟಿಆರ್​ಗೆ ಬಾಲಿವುಡ್​ನಲ್ಲಿ ಒಳ್ಳೆಯ ಸ್ವಾಗತ ಸಿಕ್ಕಿಲ್ಲ. ಇದು ರಾಜಮೌಳಿ ಬೇಸರಕ್ಕೆ ಕಾರಣ.

ಇದನ್ನೂ ಓದಿ
Image
ಸ್ವರಾ​ಗೆ ಸಂಸದೆ ಮೇಲೆ ಕ್ರಶ್; ಲೈಂಗಿಕ ಆಸಕ್ತಿ ರಿವೀಲ್ ಮಾಡಿ ಟ್ರೋಲ್
Image
ಒಂದೇ ವಾರಕ್ಕೆ ಸುಸ್ತಾದ ‘ಕೂಲಿ’; ಹೀನಾಯ ಕಲೆಕ್ಷನ್​​​ ಆರಂಭಿಸಿದ ಸಿನಿಮಾ
Image
‘ಕ್ವಾಟ್ಲೆ ಕಿಚನ್’ ಶೋ​ನಿಂದ ದಿಢೀರ್​ ಹೊರ ನಡೆದ ಕೆಂಪಮ್ಮ; ಇಲ್ಲಿದೆ ವಿವರ
Image
ಮಂಗಳೂರು ಬೆಡಗಿ ಪೂಜಾ ಹೆಗ್ಡೆ ಮುಟ್ಟಿದ್ದೆಲ್ಲವೂ ಕಬ್ಬಿಣ; ಕೈ ಕೊಟ್ಟ ಅದೃಷ್ಟ

‘ವಾರ್ 2’ ಚಿತ್ರದಲ್ಲಿ ಕೆಲವು ಗ್ರಾಫಿಕ್ಸ್​ಗಳು ತೀರಾ ಕಳಪೆ ಆಗಿ ಮೂಡಿ ಬಂದಿದೆ. ಇದು ರಾಜಮೌಳಿ ಬೇಸರಕ್ಕೆ ಕಾರಣ ಆಗಿದೆಯಂತೆ. ಅದರಲ್ಲೂ ಜೂನಿಯರ್ ಎನ್​ಟಿಆರ್​ ಅವರ ದೃಶ್ಯವೊಂದರ ವಿಎಫ್​ಎಕ್ಸ್ ನೋಡಿ ಫ್ಯಾನ್ಸ್ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಈ ದೃಶ್ಯದಿಂದ ರಾಜಮೌಳಿ ಕೂಡ ಅಸಮಾಧಾನಗೊಂಡಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಇದನ್ನೂ ಓದಿ: ಮಹೇಶ್ ಬಾಬು ಅಂದು ಹೇಳಿದ್ದು ನಿಜವಾಯ್ತು; ‘ವಾರ್ 2’ ಕಳಪೆ ವಿಮರ್ಶೆ ಬೆನ್ನಲ್ಲೇ ಹಳೆಯ ಹೇಳಿಕೆ ವೈರಲ್

‘ವಾರ್ 2’ ಚಿತ್ರದ ಗಳಿಕ 200 ಕೋಟಿ ರೂಪಾಯಿ ಸಮೀಪಿಸುತ್ತಿದೆ. ಆದರೆ, ಚಿತ್ರಕ್ಕೆ ಕಳಪೆ ವಿಮರ್ಶೆ ಸಿಕ್ಕಿದೆ. ಮೊದಲ ನಾಲ್ಕು ದಿನ ಮಾತ್ರ ಸಿನಿಮಾ ಅಬ್ಬರಿಸಿದೆ. ಈಗ ಚಿತ್ರವು ಒಂದಂಕಿ ಕಲೆಕ್ಷನ್ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಒಟ್ಟಾರೆ ಆಗಿ ಎಷ್ಟು ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

View this post on Instagram

A post shared by Alvi Sharib (@alvi_mango)

ಸದ್ಯ ಜೂನಿಯರ್ ಎನ್​ಟಿಆರ್ ಅವರು ಬ್ರೇಕ್​ನಲ್ಲಿ ಇದ್ದಾರೆ. ಅವರು ಶೀಘ್ರವೇ ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಅದು ಕೂಡ ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾ. ಇದು ಕೂಡ ಬ್ಲಾಕ್ ಆ್ಯಂಡ್ ವೈಟ್​ ಸ್ಟೈಲ್​ನಲ್ಲಿ ಮೂಡಿ ಬಂದರೆ ಅಭಿಮಾನಿಗಳು ಸಿನಿಮಾನ ಒಪ್ಪಿಕೊಳ್ಳೋದು ಕಷ್ಟ ಇದೆ. ರಾಜಮೌಳಿ ಅವರು ‘ಎಸ್​ಎಸ್​ಎಂಬಿ 29’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ನವೆಂಬರ್​ನಲ್ಲಿ ಮೊದಲ ಅಪ್​ಡೇಟ್ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ