AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ

ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು.

ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ
ಸಲ್ಮಾನ್​ ಖಾನ್​
TV9 Web
| Edited By: |

Updated on:Mar 22, 2022 | 7:51 AM

Share

ಶೂಟಿಂಗ್​ ಸಂದರ್ಭದಲ್ಲಿ ಸಲ್ಮಾನ್​ ಖಾನ್ (Salman Khan)​ ಕೃಷ್ಣ ಮೃಗ ಬೇಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸೆಷನ್ಸ್​ ನ್ಯಾಯಾಲಯ ಅವರಿಗೆ ಐದು ವರ್ಷ ಶಿಕ್ಷೆಯನ್ನೂ ವಿಧಿಸಿತ್ತು. ಸಲ್ಮಾನ್​ ಖಾನ್​ ಬೇಟೆ ಮಾಡಿದ್ದ ಕೃಷ್ಣ ಮೃಗದ ಸ್ಮರಣಾರ್ಥವಾಗಿ ದೊಡ್ಡ ಸ್ಮಾರಕ ನಿರ್ಮಾಣ ಮಾಡಲು ರಾಜಸ್ಥಾನದ ಬಿಷ್ಣೋಯಿ ಸಮುದಾಯ ಮುಂದಾಗಿದೆ. 1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಅವರು ಸಿನಿಮಾ ತಂಡದ ಕೆಲವರ ಜತೆ ಸಫಾರಿಗೆ ಹೋಗಿದ್ದರು. ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಕೃಷ್ಣ ಮೃಗದ ಮೃತದೇಹ ಸಿಕ್ಕ ಜಾಗದಲ್ಲಿ ಬಿಷ್ಣೋಯಿ ಸಮುದಾಯದವರು ಭವ್ಯ ಸ್ಮಾರಕ ಮತ್ತು ಪ್ರಾಣಿ ರಕ್ಷಣಾ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಐದು ಲೋಹಗಳನ್ನು ಬಳಸಿ ಬೃಹತ್ ಕೃಷ್ಣ ಮೃಗ ಪ್ರತಿಮೆಯನ್ನು ನಿರ್ಮಿಸಲು ಈ ಸಮುದಾಯದವರು ನಿರ್ಧರಿಸಿದ್ದಾರೆ.

ಬಿಷ್ಣೋಯಿ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್​ನ ಬಿಷ್ಣೋಯಿಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯಿಗಳು ಎಂದಿಗೂ ಸಹಿಸುವುದಿಲ್ಲ.

ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನೂ ಸಲ್ಮಾನ್​ ಖಾನ್​ ಎದುರಿಸಿದರು. ರಾಜಸ್ಥಾನದ ಸೆಷನ್ಸ್ ನ್ಯಾಯಾಲಯವು ಸಲ್ಮಾನ್​ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಆದೇಶದ ವಿರುದ್ಧ ಸಲ್ಮಾನ್ ಪರ ವಕೀಲರು ರಾಜಸ್ಥಾನ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ರಾಜಸ್ಥಾನ ಹೈಕೋರ್ಟ್‌ನಲ್ಲಿದೆ. ಈ ಸಿನಿಮಾದ ಸಹ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಕೊಠಾರಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

ಇದನ್ನೂ ಓದಿ: Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

Published On - 8:53 pm, Sun, 9 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ