AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ

ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು.

ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ
ಸಲ್ಮಾನ್​ ಖಾನ್​
TV9 Web
| Edited By: |

Updated on:Mar 22, 2022 | 7:51 AM

Share

ಶೂಟಿಂಗ್​ ಸಂದರ್ಭದಲ್ಲಿ ಸಲ್ಮಾನ್​ ಖಾನ್ (Salman Khan)​ ಕೃಷ್ಣ ಮೃಗ ಬೇಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸೆಷನ್ಸ್​ ನ್ಯಾಯಾಲಯ ಅವರಿಗೆ ಐದು ವರ್ಷ ಶಿಕ್ಷೆಯನ್ನೂ ವಿಧಿಸಿತ್ತು. ಸಲ್ಮಾನ್​ ಖಾನ್​ ಬೇಟೆ ಮಾಡಿದ್ದ ಕೃಷ್ಣ ಮೃಗದ ಸ್ಮರಣಾರ್ಥವಾಗಿ ದೊಡ್ಡ ಸ್ಮಾರಕ ನಿರ್ಮಾಣ ಮಾಡಲು ರಾಜಸ್ಥಾನದ ಬಿಷ್ಣೋಯಿ ಸಮುದಾಯ ಮುಂದಾಗಿದೆ. 1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಅವರು ಸಿನಿಮಾ ತಂಡದ ಕೆಲವರ ಜತೆ ಸಫಾರಿಗೆ ಹೋಗಿದ್ದರು. ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಕೃಷ್ಣ ಮೃಗದ ಮೃತದೇಹ ಸಿಕ್ಕ ಜಾಗದಲ್ಲಿ ಬಿಷ್ಣೋಯಿ ಸಮುದಾಯದವರು ಭವ್ಯ ಸ್ಮಾರಕ ಮತ್ತು ಪ್ರಾಣಿ ರಕ್ಷಣಾ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಐದು ಲೋಹಗಳನ್ನು ಬಳಸಿ ಬೃಹತ್ ಕೃಷ್ಣ ಮೃಗ ಪ್ರತಿಮೆಯನ್ನು ನಿರ್ಮಿಸಲು ಈ ಸಮುದಾಯದವರು ನಿರ್ಧರಿಸಿದ್ದಾರೆ.

ಬಿಷ್ಣೋಯಿ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್​ನ ಬಿಷ್ಣೋಯಿಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯಿಗಳು ಎಂದಿಗೂ ಸಹಿಸುವುದಿಲ್ಲ.

ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನೂ ಸಲ್ಮಾನ್​ ಖಾನ್​ ಎದುರಿಸಿದರು. ರಾಜಸ್ಥಾನದ ಸೆಷನ್ಸ್ ನ್ಯಾಯಾಲಯವು ಸಲ್ಮಾನ್​ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಆದೇಶದ ವಿರುದ್ಧ ಸಲ್ಮಾನ್ ಪರ ವಕೀಲರು ರಾಜಸ್ಥಾನ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ರಾಜಸ್ಥಾನ ಹೈಕೋರ್ಟ್‌ನಲ್ಲಿದೆ. ಈ ಸಿನಿಮಾದ ಸಹ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಕೊಠಾರಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

ಇದನ್ನೂ ಓದಿ: Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

Published On - 8:53 pm, Sun, 9 January 22

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?